2 ಸಿಗಡಿ ಕೆರೆಗೆ ವಿಷ; 35 ಲಕ್ಷ ರೂ. ನಷ್ಟ


Team Udayavani, Jul 10, 2018, 12:19 PM IST

sigadi.jpg

ಕುಂದಾಪುರ: ಇನ್ನೆರಡು ದಿನಗಳಲ್ಲಿ ತೆಗೆದು, ಮಾರಾಟ ಮಾಡಲು ಸಿದ್ಧವಾಗಿದ್ದ ಸುಮಾರು 35 ಲಕ್ಷ ರೂ. ಮೌಲ್ಯದ ಸಿಗಡಿ(ಚಟ್ಲಿ)ಗಳಿದ್ದ 2 ಕೆರೆಗಳಿಗೆ ಕಿಡಿಗೇಡಿಗಳು ವಿಷವಿಕ್ಕಿದ ಘಟನೆ ಬೈಂದೂರು ತಾಲೂಕಿನ ಹೊಸಾಡು ಗ್ರಾಮದಲ್ಲಿ ರವಿವಾರ ರಾತ್ರಿಯಿಂದ ಸೋಮವಾರ ಬೆಳಗ್ಗಿನ ಜಾವದ ನಡುವೆ ನಡೆದಿದೆ.

ಬಂಟ್ವಾಡಿ ನಿವಾಸಿ ನರಸಿಂಹ ಮೊಗ ವೀರ ಅವರು ಹೊಸಾಡು ಗ್ರಾಮದ ಅರಾಟೆಯ ತಮ್ಮ 1.60 ಎಕರೆ ವಿಸ್ತೀ ರ್ಣದ ಜಾಗದಲ್ಲಿ ಮಾಡಿದ ಎರಡು ಚಟ್ಲಿ ಕೆರೆಗೆ ದುಷ್ಕರ್ಮಿಗಳು ರಾತ್ರಿ ವೇಳೆಗೆ ವೇಳೆ ವಿಷ ಹಾಕಿದ್ದಾರೆ. 

9 ಟನ್‌ ಚಟ್ಲಿ ನಾಶ
ನರಸಿಂಹ ಮೊಗವೀರ ಕಳೆದ 90 ದಿನಗಳಿಂದ ಇಲ್ಲಿ ಚಟ್ಲಿ ಕೃಷಿ ಮಾಡುತ್ತಿದ್ದರು. 1.60 ಎಕರೆ ವಿಸ್ತೀರ್ಣದ 2 ಕೆರೆಗಳ ಪೈಕಿ ಒಂದು ಇವರ ಸ್ವಂತದ್ದಾಗಿದ್ದು, ಇನ್ನೊಂದನ್ನು ದೇವಸ್ಥಾನದಿಂದ ಲೀಸ್‌ಗೆ ಪಡೆದು ಸಿಗಡಿ ಕೃಷಿ ಮಾಡುತ್ತಿದ್ದರು. ಒಟ್ಟು 9,000 ಸಾವಿರ ಕೆಜಿ ಸಿಗಡಿ ಸಿಗಲಿತ್ತು. ದುಷ್ಕರ್ಮಿಗಳಿಂದಾಗಿ 9 ಟನ್‌ ಸಿಗಡಿ ಕೃಷಿಯೇ ನಾಶವಾಗಿದೆ.

ವಿಷದ ಬಕೆಟ್‌ ಪತ್ತೆ
ನರಸಿಂಹ ಅವರು ಆ ಕೆರೆಯ ಪಕ್ಕದಲ್ಲೇ ಶೆಡ್‌ ನಿರ್ಮಿಸಿ ಕಳೆದ 15 ದಿನಗಳಿಂದ ಪ್ರತಿ ರಾತ್ರಿ ಕಾವಲು ಕಾಯುತ್ತಿದ್ದರು. ರವಿವಾರ ಮಧ್ಯರಾತ್ರಿ 12.30ರ ವೇಳೆ ಎಚ್ಚರವಾಗಿದ್ದು, ಆಗ ಎಲ್ಲ ಕಡೆಗೆ ಲೈಟ್‌ ಹಾಕಿ ನೋಡಿದ್ದೆ. ಮುಂಜಾನೆ 4.30ರ ಸುಮಾರಿಗೆ ಮತ್ತೆ ಎಚ್ಚರವಾಗಿದ್ದು, ಲೈಟ್‌ ಹಾಕಿ ನೋಡಿದಾಗ ಒಂದು ಕೆರೆಯಲ್ಲಿ ಕೆಮಿಕಲ್‌ ಇರುವ ಬಕೆಟ್‌ ಸಿಕ್ಕಿತ್ತು. ತತ್‌ಕ್ಷಣ ಶೆಡ್‌ನ‌ಲ್ಲಿ ನನ್ನೊಂದಿಗೆ ಕೆಲಸಕ್ಕಿದ್ದ ಇಬ್ಬರು ಕೆಲಸದವರನ್ನು ಕರೆದು ಎಲ್ಲ ಕಡೆ ಲೈಟ್‌ ಹಾಕಿ ನೋಡಿದಾಗ ಸಿಗಡಿಗಳು ಸತ್ತು ಬಿದ್ದಿದ್ದವು ಎಂದು ನರಸಿಂಹ ಮೊಗವೀರ ಅವರು ತಿಳಿಸಿದ್ದಾರೆ. ಗಂಗೊಳ್ಳಿ ಪೊಲೀಸ್‌ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

1 ರೂ. ಸಿಗದೇ ಹೋಯಿತು…
ಕಳೆದ ವರ್ಷ 9 ಟನ್‌ ಸಿಗಡಿ ಮಾರಾಟ ಮಾಡಿದ್ದೆ. ಆಗ ಕೆಜಿಗೆ 270 ರೂ. ಇತ್ತು. ಈಗ ಕೆಜಿಗೆ 260 ರೂ. ಇದ್ದು, ಇನ್ನೆರಡು ದಿನಗಳಲ್ಲಿ ಸಿಗಡಿ ಬೆಲೆ ಏರಿಕೆ ಆಗಬಹುದು ಎನ್ನುವ ಕಾರಣಕ್ಕೆ ಮಾರಾಟ ಮಾಡುವುದು ತಡವಾಯಿತು. ಆದರೆ ಅದೇ ಬೆಲೆಗೆ ಕೊಡುತ್ತಿದ್ದರೆ ಅಷ್ಟಾದರೂ ಸಿಗುತ್ತಿತ್ತು. ಆದರೀಗ 1 ರೂ. ಕೂಡ ಸಿಗದಂತೆ ಆಯಿತು. 
– ನರಸಿಂಹ ಮೊಗವೀರ, ಚಟ್ಲಿ  ಕೆರೆಯ ಮಾಲಕ

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.