ವಾರಾಹಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಡಿಕೆಶಿ
Team Udayavani, Jul 11, 2018, 6:00 AM IST
ಕುಂದಾಪುರ: ವಾರಾಹಿ ನೀರಾವರಿ ಯೋಜನೆಯಡಿ ಮಂಜೂರಾದ ವಿವಿಧ ದರ್ಜೆಯ ಎಂಜಿನಿಯರ್ ಹುದ್ದೆಗಳ ಪೈಕಿ ಅನೇಕ ಹುದ್ದೆಗಳು ಖಾಲಿಯಿದ್ದು ಅವುಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಅವರು ವಿಧಾನಪರಿಷತ್ತಿನಲ್ಲಿ ಸದಸ್ಯ ಪ್ರತಾಪಚಂದ್ರ ಶೆಟ್ಟಿ ಅವರು ಸೋಮವಾರ ಸದನದಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ವಾರಾಹಿ ಏತ ನೀರಾವರಿ ಯೋಜನೆಯ ಅಂದಾಜು ಮೊತ್ತ 350 ಕೋ.ರೂ.ಗಳಾಗಿದ್ದು 2018ರ ಜ.8ರಂದು ಮುಖ್ಯಮಂತ್ರಿಗಳು ಶಂಕುಸ್ಥಾಪನೆ ಮಾಡಿದ್ದರು. ಜೂ.8ರಂದು ಟೆಂಡರ್ ವಹಿಸಲಾಗಿದ್ದು 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕಿದೆ. ಮೂಲ ಯೋಜನಾ ವರದಿಯಂತೆ ವಾರಾಹಿ ಏತ ನೀರಾವರಿ ಯೋಜನಾ ಕಾಮಗಾರಿಗಳ ಮೂಲಕ ಉಡುಪಿ ತಾಲೂಕಿನ 28 -ಹಾಲಾಡಿ, ಆವರ್ಸೆ, ವಂಡಾರು, ಶಿರಿಯಾರ, ಶಿರಿಯಾರ -21, ಹೆಗ್ಗುಂಜೆ, ಬಿಲ್ಲಾಡಿ, ಯಡ್ತಾಡಿ, ಯಡ್ತಾಡಿ -22, ಕಾವಾಡಿ -18, ಅಚಾÉಡಿ-20, ಶಿರೂರು, ಕಾಡೂರು, ನಾಡೂರು ಗ್ರಾಮಗಳ 2,723 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಲು ಯೋಜಿಸಲಾಗಿದೆ. 38 ವರ್ಷಗಳ ಹಿಂದೆ ಶಂಕುಸ್ಥಾಪನೆಯಾದ ವಾರಾಹಿ ನೀರಾವರಿ ಯೋಜನೆಯಡಿ ಬಲದಂಡೆ ಯೋಜನೆಗೆ ಸಂಬಂಧಿಸಿ ಹಂತ ಹಂತವಾಗಿ ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಬಲದಂಡೆ ಯೋಜನೆಯಡಿ ಬರುವ ಹೊಸಂಗಡಿ, ಸಿದ್ದಾಪುರ, ಉಳ್ಳೂರು-74, ಶಂಕರ ನಾರಾಯಣ, ಕುಳ್ಳುಂಜೆ ಗ್ರಾಮಗಳಲ್ಲಿ ಹಾದು ಹೋಗುವ ವಾರಾಹಿ ಬಲದಂಡೆ ಸಾಮಾನ್ಯ ನಾಲಾ ಸರಪಳಿ 18 ಕಿಮೀ. ಕಾಮಗಾರಿಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಪೂರ್ಣಗೊಳಿಸಲಾಗಿದೆ. ವಾರಾಹಿ ಬಲದಂಡೆ ನಾಲಾ ಕಾಲುವೆ ಹೆಚ್ಚಾಗಿ ಅರಣ್ಯ ಪ್ರದೇಶದಲ್ಲಿ ಹಾದು ಹೋಗುತ್ತಿದ್ದು ಅರಣ್ಯ ಪ್ರದೇಶದ ತೀರುವಳಿ ಪಡೆದ ಅನಂತರ ಕಾಲುವೆ ನಿರ್ಮಾಣ ನಡೆಯಲಿದೆ ಎಂದು ಡಿಕೆಶಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ