ದ್ವಿತೀಯ ಹಂತದಲ್ಲಿ ಮೀನುಗಾರರ ಸಾಲ ಮನ್ನಾ


Team Udayavani, Jul 20, 2018, 10:14 AM IST

1907kdpp9.png

ಕುಂದಾಪುರ: ರೈತರ 11 ಸಾವಿರ ಕೋ.ರೂ. ಸಾಲ ಮನ್ನಾ ಮಾಡಲಾಗಿದ್ದು, ಎರಡನೇ ಹಂತದಲ್ಲಿ ಮೀನುಗಾರರ ಸಾಲವನ್ನೂ ಮನ್ನಾ ಮಾಡಲಾಗುವುದು ಎಂದು ರಾಜ್ಯ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು. 

ಗುರುವಾರ ಗಂಗೊಳ್ಳಿಯ ಮೀನುಗಾರಿಕೆ ಬಂದರಿಗೆ ಭೇಟಿ ನೀಡಿ, 102 ಕೋ.ರೂ. ವೆಚ್ಚದ ಬ್ರೇಕ್‌ವಾಟರ್‌ ಕಾಮಗಾರಿ ಪರಿಶೀಲನೆ ನಡೆಸಿ, ಮೀನುಗಾರರ ಸಮಸ್ಯೆ ಆಲಿಸಿ ಅವರು ಮಾತನಾಡಿದರು. ಮೀನುಗಾರ ಮಹಿಳೆಯರಿಗೆ 50 ಸಾವಿರ ರೂ. ಬಡ್ಡಿರಹಿತ ಸಾಲ ನೀಡಲು ಸರಕಾರ ಯೋಜನೆ ಸಿದ್ಧಪಡಿಸಿದ್ದು, ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಸರಕಾರ ಮೀನುಗಾರರ ಜತೆಗಿದೆ, ಅವರ ಸಮಸ್ಯೆ ಪರಿಹಾರಕ್ಕೆ ಬದ್ಧ ಎಂದರು.  ಬ್ರೇಕ್‌ ವಾಟರ್‌ 300 ಮೀ. ವಿಸ್ತರಣೆ, ಜೆಟ್ಟಿ ವಿಸ್ತರಣೆ ಮಾಡಬೇಕು, ಸಬ್ಸಿಡಿ ದರದಲ್ಲಿ ಸೀಮೆಎಣ್ಣೆ ಒದಗಿಸಬೇಕು ಎಂಬ ಅಹವಾಲನ್ನು ಮೀನುಗಾರರು ಸಚಿವರಿಗೆ ಮನವಿಯಲ್ಲಿ  ಸಲ್ಲಿಸಿದರು.  

ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಮೀನುಗಾರಿಕೆ ನಿರ್ದೇಶಕ ಎಚ್‌.ಎಸ್‌. ವೀರಪ್ಪ ಗೌಡ, ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಪಾರ್ಶ್ವನಾಥ, ಗಂಗೊಳ್ಳಿ ಬಂದರಿನ ಸಹಾಯಕ ನಿರ್ದೇಶಕಿ ಅಂಜನಾದೇವಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ಯೋಗಿಶ್‌ ಶೆಟ್ಟಿ, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ನಾರಾಯಣ ಕೆ. ಗುಜ್ಜಾಡಿ, ತಾ.ಪಂ. ಸದಸ್ಯ ಸುರೇಂದ್ರ ಖಾರ್ವಿ, ಐಸ್‌ ಪ್ಲಾಂಟ್‌ ಅಸೋಸಿಯೇಶನ್‌ ಅಧ್ಯಕ್ಷ ರಾಜೇಂದ್ರ ಸುವರ್ಣ ಉಪಸ್ಥಿತರಿದ್ದರು. ನಾಡದೋಣಿ ಸಂಘದ ಅಧ್ಯಕ್ಷ ಮಂಜು ಬಿಲ್ಲವ ಸ್ವಾಗತಿಸಿದರು. ರಮೇಶ್‌ ಕುಂದರ್‌ ನಿರೂಪಿಸಿದರು ಬಂದರು ಅಭಿವೃದ್ಧಿ ಅಧ್ಯಕ್ಷ ಪುರುಷೋತ್ತಮ ಖಾರ್ವಿ ವಂದಿಸಿದರು.

ಮರವಂತೆ ಬಂದರಿಗೂ ಭೇಟಿ
ಮರವಂತೆ ಬಂದರಿಗೂ ಭೇಟಿ ನೀಡಿ, ಅಲ್ಲಿನ ಮೀನುಗಾರರ ಸಮಸ್ಯೆ ಆಲಿಸಿದರು. ಕಡಲ್ಕೊರೆತದಿಂದ ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಕೊಡಲು ಸರಕಾರ ಬದ್ಧವಾಗಿದೆ ಎಂದ ಸಚಿವರು ಅಲ್ಲಿಂದಲೇ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಸ್ಥಳ ಗೊತ್ತು ಪಡಿಸುವಂತೆ ಸೂಚಿಸಿದರು. ಬ್ರೇಕ್‌ವಾಟರ್‌ ಕಾಮಗಾರಿಯಿಂದಾಗಿ ಗಂಗೊಳ್ಳಿ ಹಾಗೂ ಮರವಂತೆ ಬಂದರುಗಳಲ್ಲಿ ಹೂಳು ತುಂಬಿದ್ದು, ಅದನ್ನು ತೆರವು ಮಾಡಿ ದೋಣಿಗಳು ನಿಲ್ಲಲು ಅವಕಾಶ ಕಲ್ಪಿಸುವಂತೆ ಆದೇಶಿಸಿದರು. 

ಬಂದರು ಅಭಿವೃದ್ಧಿ: ಪರಿಶೀಲನೆ
ಗಂಗೊಳ್ಳಿ ತೀರಾ ಹಿಂದುಳಿದ ಬಂದರಾಗಿದ್ದು, ಈವರೆಗೆ ಎಲ್ಲ ಸರಕಾರಗಳು ನಿರ್ಲಕ್ಷ ವಹಿಸಿವೆ. ಇದರ ಅಭಿವೃದ್ಧಿಗೆ ಸುಮಾರು 10 ಕೋ.ರೂ. ಯೋಜನೆ ಸಿದ್ಧಪಡಿಸಿ ಪ್ರಸ್ತಾ ವನೆ ಸಲ್ಲಿಸಿದರೂ ಮನ್ನಣೆ ನೀಡಿಲ್ಲ ಎನ್ನುವ ಬೇಡಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಕೂಡಲೇ ಪರಿಶೀಲಿಸಿ ಅಭಿವೃದ್ಧಿಗೆ ಯತ್ನಿಸಲಾಗುವುದು ಎಂದರು. 

ನಾಡದೋಣಿ ಮೀನುಗಾರರಿಗೆ ಈ ವರ್ಷವೂ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದಲೇ ಸಬ್ಸಿಡಿ
ದರದಲ್ಲಿ ಸೀಮೆ ಎಣ್ಣೆ ಪೂರೈಸಲು ಸರಕಾರ ಕ್ರಮ ಕೈಗೊಂಡಿದೆ. ಭವಿಷ್ಯದಲ್ಲಿ ದೋಣಿಗಳಿಗೆ ಎಲೆಕ್ಟ್ರಾನಿಕ್‌ ಮೋಟಾರು ಅಳವಡಿಸಿ, ಮೀನುಗಾರರಿಗೆ ಒಪ್ಪಿಗೆಯಾದರೆ ಅದನ್ನು ಮುಂದುವರಿಸಲಾಗುವುದು ಎಂದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.