ಬೈಂದೂರು: ನೆಂಪುವಿನಲ್ಲಿ ಇನ್ನು ಒಂದೇ ಕಡೆ 1-12ರವರೆಗೆ ಕಲಿಕೆ


Team Udayavani, Jul 25, 2018, 2:40 AM IST

karnataka-school-24-7.jpg

ವಿಶೇಷ ವರದಿ – ಕೊಲ್ಲೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ವಂಡ್ಸೆ ಸಮೀಪದ ನೆಂಪು ಸರಕಾರಿ ಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದಿಂದ ಆರಂಭವಾಗಿದೆ. ಇದರಿಂದಾಗಿ 1ರಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಶಿಕ್ಷಣ ದೊರಕಲಿದ್ದು, ಪ್ರಾಥಮಿಕ, ಪ್ರೌಢ, ಕಾಲೇಜು ಶಿಕ್ಷಣಗಳಿಗಾಗಿ ಅಲೆದಾಟ ತಪ್ಪಲಿದೆ. ಈ ಪ್ರಯೋಗ ಯಶಸ್ವಿಯಾದದ್ದೇ ಆದಲ್ಲಿ ಈ ಭಾಗದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಹಳಷ್ಟು ಉಪಯೋಗವಾಗಲಿದೆ. ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿರುವ ಕಾರಣದಿಂದಲೂ ಸರಕಾರ ನೆಂಪು ಶಾಲೆಯನ್ನು ಈ ಯೋಜನೆಯಡಿ ಸೇರ್ಪಡೆಗೊಳಿಸಿದೆ.

ಒಟ್ಟು ವಿದ್ಯಾರ್ಥಿಗಳು
ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜು ಸಹಿತ ಇಲ್ಲಿ ಸುಮಾರು 530 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಗ್ರಾಮೀಣ ವಿದ್ಯಾರ್ಥಿಗಳು ಆಂಗ್ಲ ಮಾಧ್ಯಮಶಾಲೆಗೆ ಹೋಗುತ್ತಿರುವ ಸಂದರ್ಭ ವಿದ್ಯಾರ್ಥಿಗಳು ಬೇರೆಡೆ ಹೋಗದಂತೆ ನೋಡಿಕೊಳ್ಳುವಲ್ಲಿ ಎಸ್‌.ಡಿ.ಎಂ.ಸಿ. ಸದಸ್ಯಸರು ಹಾಗೂ ಹೆತ್ತವರು ಶಿಕ್ಷಕರೊಡನೆ ಸೇರಿ ಈ ಪ್ರಯತ್ನ ಮಾಡಲಾಗಿದ್ದು, ಶಾಲೆಯನ್ನು ಯೋಜನೆಯಡಿ ಸೇರ್ಪಡೆಗೊಳಿಸಲಾಗಿದೆ. ಇಲ್ಲಿ ಪದವಿಗೆ ಪಾಠ ಮಾಡುವವರು ಪ್ರೌಢಶಾಲೆಗೂ ಪಾಠ ಮಾಡುತ್ತಾರೆ. ರಾಜ್ಯದಲ್ಲಿ 176 ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಆಯ್ಕೆ ಮಾಡಲಾಗಿದ್ದು ಅದರಲ್ಲಿ ಬೈಂದೂರಿನ ನೆಂಪು ಮತ್ತು ಕೋಟೇಶ್ವರದ ಸರಕಾರಿ ಶಾಲೆ ಸೇರ್ಪಡೆಗೊಂಡಿದೆ.

ಸರಕಾರಿ ಪದವಿ ಕಾಲೇಜು ಮತ್ತು ವಿದ್ಯಾರ್ಥಿನಿಲಯ ಅಗತ್ಯ
ಈ ಭಾಗದ ವಿವಿಧ ಗ್ರಾಮಗಳ ನಿವಾಸಿಗಳಿಗೆ ನೆಂಪು ಶಾಲೆ ಪ್ರಮುಖವಾಗಿದೆ. ಇದರೊಂದಿಗೆ ಸರಕಾರಿ ಪದವಿ ಕಾಲೇಜು ಹಾಗೂ ವಿದ್ಯಾರ್ಥಿ ನಿಲಯದ ಅಗತ್ಯವಿದೆ. ಈ ಬಗ್ಗೆ ಬಹಳಷ್ಟು ವರ್ಷ ಗಳಿಂದ ಸ್ಥಳೀಯರು ಬೇಡಿಕೆ ಇಡುತ್ತಾ ಬಂದಿದ್ದಾರೆ. ಜತೆಗೆ ದೂರದ ವಿದ್ಯಾರ್ಥಿಗಳಿಗೆ ಇಲ್ಲೇ ತಂಗುವಂತೆ ವಿದ್ಯಾರ್ಥಿನಿಲಯ ಆರಂಭಿಸಿದಲ್ಲಿ ವಿದ್ಯಾರ್ಜನೆಗೆ ಹೆಚ್ಚಿನ ಸೌಲಭ್ಯ ಒದಗಿಸಿದಂತಾಗುತ್ತದೆ ಎನ್ನುವುದು ವಿದ್ಯಾಭಿಮಾನಿಗಳ ಅಭಿಮತ.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.