ಕುಂದಾಪುರ: ಉಪನೋಂದಣಿ ಕಚೇರಿ ಕೆಲಸ ಸ್ಥಗಿತ


Team Udayavani, Jul 28, 2018, 6:00 AM IST

2707kdlm5ph3.jpg

ಕುಂದಾಪುರ: ಇಲ್ಲಿನ ಮಿನಿ ವಿಧಾನ ಸೌಧದಲ್ಲಿ ಕಾರ್ಯಾಚರಿಸುತ್ತಿರುವ ಉಪ ನೋಂದಣಿ ಕಚೇರಿಯಲ್ಲಿ ವಿದ್ಯುತ್‌ ಸಮಸ್ಯೆ ಉಂಟಾಗಿ ಶುಕ್ರವಾರ ನೋಂದಣಿ ಪ್ರಕ್ರಿಯೆಗೆ ಆಗಮಿಸಿದ ಹತ್ತಾರು ಮಂದಿ ಕೆಲಸವಾಗದೇ ಶಪಿಸುತ್ತಿದ್ದರು. 20ಕ್ಕೂ ಅಧಿಕ ಮಂದಿ ಬೆಳಗ್ಗೆಯಿಂದ ನೋಂದಣಿಗಾಗಿ ದಾಖಲೆಗಳನ್ನು ಸಿದ್ಧಪಡಿಸಿ ಕಾಯುತ್ತಿದ್ದ ದೃಶ್ಯ ಕಾಣುತ್ತಿತ್ತು. ಈ ಸಮಸ್ಯೆ ಎಷ್ಟು ದಿನ ಮುಂದುವರಿಯಲಿದೆ ಎಂದು ಗೊತ್ತಿಲ್ಲ.  ಅಲ್ಲಿವರೆಗೂ ಜನರಿಗೆ ಸಮಸ್ಯೆ ತಪ್ಪಿದ್ದಲ್ಲ. 

ಅಸಮರ್ಪಕ ವಯರಿಂಗ್‌
ಮಿನಿ ವಿಧಾಸನೌಧ ನಿರ್ಮಾಣವಾಗುವ ವೇಳೆ ಸಂಪರ್ಕ ಕಲ್ಪಿಸಿದ ವಯರಿಂಗ್‌ನಲ್ಲಿ ದೋಷ ಕಾಣಿಸಿದೆ. ಅಸಮರ್ಪಕ ಕಾಮಗಾರಿಯಿಂದ ಹೀಗಾಗಿದೆ ಎಂದು ಹೇಳಲಾಗಿದ್ದರೂ ಗುತ್ತಿಗೆದಾರರ ನಿರ್ವಹಣಾ ಅವಧಿ ಮುಗಿದ ಕಾರಣ ಇಲಾಖೆ ವತಿಯಿಂದ ದುರಸ್ತಿ ಮಾಡಿಸಬೇಕಿದೆ. ವಿದ್ಯುತ್‌ ಅವ್ಯವಸ್ಥೆಯಿಂದಾಗಿ ಕಂಪ್ಯೂಟರ್‌ಗಳು ಕೆಲಸ ಮಾಡುತ್ತಿರಲಿಲ್ಲ.
 
ಕೈ ಕೊಟ್ಟ ಕಂಪ್ಯೂಟರ್‌ಗಳು
ಉಪನೋಂದಣಿ ಕಚೇರಿಯ ಕಂಪ್ಯೂಟರ್‌ಗಳನ್ನು ನಿರ್ವಹಿಸುವ ಗುತ್ತಿಗೆ ಪಡೆದ  ನಿರ್ದಿಷ್ಟ ಏಜೆನ್ಸಿಯವರು ಕೈಕೊಟ್ಟ ಕಂಪ್ಯೂಟರ್‌ಗಳ ದುರಸ್ತಿ ಮಾಡಿಲ್ಲ. ಪರಿಣಾಮ ನೋಂದಣಿಗಾಗಿ ಆಗಮಿಸಿದವರಿಗೆ ಯಾವುದೇ ಕೆಲಸ ಕಾರ್ಯ ನಿರ್ವಹಿಸಲು ಆಗುತ್ತಿಲ್ಲ. ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದಾಗ ಕಚೇರಿ ಸಿಬಂದಿ ಕಂಪ್ಯೂಟರ್‌ ಸರ್ವಿಸ್‌ ಮಾಡುವ ಖಾಸಗಿ ಸಂಸ್ಥೆಯವರ ಬಳಿ ಕಂಪ್ಯೂಟರ್‌ಗಳನ್ನು ತಾತ್ಕಾಲಿವಾಗಿ ದುರಸ್ತಿ ಮಾಡಿಸಿದ್ದಾರೆ. ಆದರೆ ಇದು ಒಂದು ದಿನದ ಮಟ್ಟಿಗೆ ಮಾತ್ರ. ನಿರ್ದಿಷ್ಟ ಏಜೆನ್ಸಿಯವರು ಅಧಿಕೃತವಾಗಿ ದುರಸ್ತಿ ಪಡಿಸುವವರೆಗೂ ಈ ಸಮಸ್ಯೆ ಮುಂದುವರಿಯಲಿದೆ. 
 
ಸೋರುವ ಕಚೇರಿ
ಮಿನಿ ವಿಧಾನಸೌಧದ ಕಟ್ಟಡದ ಕಾಮಗಾರಿ ಕಳಪೆ ಎಂಬ ಕುರಿತು ಸಾಕಷ್ಟು ದೂರುಗಳಿದ್ದವು. ಉಪನೋಂದಣಿ ಕಚೇರಿ ಕೂಡಾ ಸೋರುವುದಕ್ಕೆ ಹೊರತಾಗಿಲ್ಲ. ಕಚೇರಿ ಕಡತಗಳು ಕೂಡಾ ಒದ್ದೆಯಾಗುವಷ್ಟು, ಕಚೇರಿಗೆ ಆಗಮಿಸಿದ ಸಾರ್ವಜನಿಕಕರು, ಸಿಬಂದಿಗಳು ಒದ್ದೆಯಾಗುವಂತೆ ನೀರು ಒಳಬೀಳುತ್ತದೆ. ಇದಕ್ಕಾಗಿ ತಾತ್ಕಾಲಿಕ ತೇಪೆ ಹಾಕಲಾಗಿದೆ. ನೀರು ಬಿದ್ದು ಗೋಡೆಗಳೆಲ್ಲ ಬನ¡ ಕಳೆದುಕೊಂಡು ಹಳೆ ಕಚೇರಿಯಂತಾಗಿದೆ. 

ಸಿಬಂದಿ ಕೊರತೆ
ಕಚೇರಿಯಲ್ಲಿ ಸಿಬಂದಿ ಕೊರತೆಯಿದ್ದು ಸಾರ್ವಜನಿಕರ ಕೆಲಸ ಕಾರ್ಯಗಳು ವಿಳಂಬ ವಾಗುತ್ತಿದೆ ಎಂಬ ಅಪವಾದವಿದೆ. ಇರುವ ಸಿಬಂದಿಯೇ ಕೆಲಸವನ್ನು ಮೈಮೇಲೆ ಎಳೆದು ಕೊಂಡಂತೆ ಕೆಲಸ ಮಾಡಿಕೊಡುತ್ತಿದ್ದಾರೆ. ಅಸಲಿಗೆ ಈಗಿನ ಲೆಕ್ಕಾಚಾರದಂತೆ ಇಲ್ಲಿ 12 ಸಿಬಂದಿ ಇರಬೇಕಿತ್ತು. 1990ರ ಮಂಜೂರಾತಿಯಂತೆ ಇಲ್ಲಿಗೆ 6 ಸಿಬಂದಿಗಳ ಮಂಜೂರಾತಿಯಾಗಿದೆ. ಆದರೆ ಕರ್ತವ್ಯ ನಿರ್ವಹಿಸುತ್ತಿರುವುದು ಇಬ್ಬರು ಮಾತ್ರ.   

ಗಮನಕ್ಕೆ ತರಲಾಗಿದೆ
ಕಂಪ್ಯೂಟರ್‌ ವ್ಯವಸ್ಥೆ ಹಾಳಾದ ಕುರಿತು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಜನಸಾಮಾನ್ಯರಿಗೆ ತೊಂದರೆಯಾಗದಂತೆ ತಾತ್ಕಾಲಿಕ  ಕ್ರಮ ವಹಿಸಲಾಗಿದೆ. 
– ನಾಗೇಶ್‌, ಪ್ರಭಾರ ಉಪನೋಂದಣಾಧಿಕಾರಿ

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.