ಮಧುವನ ರೈಲ್ವೇ ಮೇಲ್ಸೇತುವೆ ದುರಸ್ತಿ ಯಾವಾಗ?
Team Udayavani, Jul 28, 2018, 6:10 AM IST
ಕೋಟ: ಮಧುವನ ರೈಲ್ವೇ ಮೇಲ್ಸೇತುವೆಯಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಹೊಂಡಗಳು ಸೃಷ್ಟಿಯಾಗಿ ನೀರು ನಿಂತು ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸಂಚರಿಸಲು ಸಮಸ್ಯೆಯಾಗುತ್ತಿದೆ. ಈ ಕುರಿತು ಉದಯವಾಣಿ ಹಲವು ಬಾರಿ ವರದಿ ಪ್ರಕಟಿಸಿತ್ತು. ಆದರೆ ಇದುವರೆಗೆ ಸಂಬಂಧಪಟ್ಟ ಇಲಾಖೆ ದುರಸ್ತಿಗೆ ಮುಂದಾಗಿಲ್ಲ.
ಇಲ್ಲಿ ಸೇತುವೆಯ ಮಧ್ಯ ಭಾಗ ತಗ್ಗಾಗಿರುವುದರಿಂದ ಹಾಗೂ ನೀರು ಹೊರಗಡೆ ಹೋಗಲು ಸರಿಯಾದ ವ್ಯವಸ್ಥೆ ಇಲ್ಲದಿರುವುದರಿಂದ ಹೊಂಡಗಳು ಸೃಷ್ಟಿಯಾಗುತ್ತದೆ. ಕಳೆದ ವರ್ಷ ರಸ್ತೆ ದುರಸ್ತಿಗೊಳಿಸುವ ಸಂದರ್ಭ ಡಾಮರೀಕರಣ ಕೈಗೊಂಡರೂ ಈ ಬಾರಿ ಸಮಸ್ಯೆ ಮುಂದುವರಿದಿದೆ.
ಪ್ರತಿಭಟನೆಗೆ ಸಿದ್ಧತೆ
ಸಮಸ್ಯೆಯ ವಿರುದ್ಧ ಕಳೆದ ವರ್ಷ ಸ್ಥಳೀಯರು ಗಿಡ ನೆಡುವ ಮೂಲಕ ಪ್ರತಿಭಟನೆ ನಡೆಸಿದ್ದರು. ಈ ಬಾರಿ ಕೂಡ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದ್ದು, ಆದಷ್ಟು ಶೀಘ್ರ ಇದರ ದುರಸ್ತಿ ಕುರಿತು ಕ್ರಮಕೈಗೊಳ್ಳಬೇಕು ಎನ್ನುವುದು ಸ್ಥಳೀಯರ ಆಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ