ಉದ್ಯೋಗ ಮಾಹಿತಿಗೆ ತಜ್ಞರ ಸಮಿತಿ ರಚನೆ


Team Udayavani, Jul 29, 2018, 6:00 AM IST

2807kdpp1.jpg

ಕುಂದಾಪುರ: ಕೊರಗ ಸಮುದಾಯದ ಅಭಿವೃದ್ಧಿಗೆ ಸರಕಾರ ಎಲ್ಲ  ರೀತಿಯಲ್ಲೂ ಬದ್ಧವಾಗಿದ್ದು, ಆದರೆ   ಮಾಹಿತಿ ಕೊರತೆಯಿಂದ ಅದನ್ನು ಪಡೆದುಕೊಳ್ಳಲು ಹಿಂದುಳಿದಿದ್ದಾರೆ. ಕೊರಗರಿಗೆ ಉದ್ಯೋಗ ಮಾಹಿತಿ ನೀಡಲು ತಜ್ಞರ ಸಮಿತಿ ರಚಿಸಿ, ಆ ಮೂಲಕ ಕ್ಯಾರಿಯರ್‌ ಕೌನ್ಸೆಲಿಂಗ್‌, ಕಾರ್ಯಾಗಾರ, ಶಿಬಿರಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಹೇಳಿದರು.
 
ಶನಿವಾರ ಹೆಮ್ಮಾಡಿಯ ಆರ್‌. ಆರ್‌, ಕನ್ವೆನ್ಶನ್‌ ಹಾಲ್‌ನಲ್ಲಿ ಹೆಮ್ಮಾಡಿ ಹಾಗೂ ಕಟ್‌ಬೆಲೂ¤ರು ಗ್ರಾ.ಪಂ., ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ (ಐಟಿಡಿಪಿ) ಸಹಯೋಗದಲ್ಲಿ ಕೊರಗ ಸಮುದಾಯ ಯುವ ಜನತೆಗೆ ಶೈಕ್ಷಣಿಕ, ಆರೋಗ್ಯ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  

ಕೊರಗರ ಜೀವನ ಮಟ್ಟ ಸುಧಾರಣೆಗೆ ಕಾಲನಿಯಲ್ಲೇ ಪ್ರತಿ ವಾರ ಸಭೆ ನಡೆಸಿ, ಅಲ್ಲಿ ನಿಮ್ಮ ಸಮಸ್ಯೆಗಳನ್ನು ಪ್ರಸ್ತಾವಿಸಿ. 
2 ತಿಂಗಳಿಗೊಮ್ಮೆ ಪಂಚಾಯತ್‌ ಮಟ್ಟದಲ್ಲಿ ಸಭೆಯಾಗಲಿ. ಅಲ್ಲಿ ಪ್ರಸ್ತಾವವಾದ ವಿಚಾರಗಳನ್ನು ಐಟಿಡಿಪಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಲು ಪ್ರಯತ್ನಿಸಿ ಎಂದ ಡಿಸಿ, ಅರ್ಧದದಲ್ಲೇ ವಿದ್ಯಾಭ್ಯಾಸ ಮುಗಿಸಿದವರಿಗೆ ಕೊರಗರ ಕಾಲನಿಯಲ್ಲಿಯೇ ಕಲಿಯಲು ಇಲಾಖೆ ಯಿಂದಲೇ ಅವಕಾಶ ಮಾಡಿಕೊಡ ಲಾಗುವುದು ಎಂದವರು ಹೇಳಿದರು. 

ಶಿಕ್ಷಣವೇ ಪರಿಹಾರ
ಉದ್ಘಾಟಿಸಿದ ಜಿ.ಪಂ. ಸದಸ್ಯೆ ಶೋಭಾ ಜಿ. ಪುತ್ರನ್‌ ಮಾತನಾಡಿ, ಕೊರಗರಿಗೆ ಸಾಕಷ್ಟು ಸವಲತ್ತುಗಳಿದ್ದರೂ ಅದನ್ನು ಪಡೆದುಕೊಳ್ಳುವಲ್ಲಿ ಹಿಂದುಳಿ ಯುತ್ತಿದ್ದಾರೆ. ಮಾಹಿತಿಯ ಕೊರತೆ ಯಿದ್ದು, ಶಿಕ್ಷಣದಿಂದ ಇದಕ್ಕೆಲ್ಲ ಪರಿಹಾರ ಸಿಗಲು ಸಾಧ್ಯ ಎಂದರು. 

ತಾ.ಪಂ. ಸದಸ್ಯ ರಾಜು ದೇವಾಡಿಗ, ಐಟಿಡಿಪಿ ಅಧಿಕಾರಿ ವಿಶ್ವನಾಥ ಮಾತನಾಡಿ ದರು. ಕಟ್‌ಬೆಲೂ¤ರು ಗ್ರಾ.ಪಂ. ಅಧ್ಯಕ್ಷೆ ಅನಸೂಯಾ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. 

ಹೆಮ್ಮಾಡಿ ಗ್ರಾ.ಪಂ. ಅಧ್ಯಕ್ಷೆ ಜ್ಯೋತಿ ಹರೀಶ್‌ ಭಂಡಾರಿ, ಉಪಾಧ್ಯಕ್ಷ ಅಂಥೋನಿ ಲೂಯಿಸ್‌, ಕಟ್‌ಬೆಲೂ¤ರು ಗ್ರಾ.ಪಂ. ಉಪಾಧ್ಯಕ್ಷ ಶರತ್‌ ಕುಮಾರ್‌ ಶೆಟ್ಟಿ ಉಪಸ್ಥಿತರಿದ್ದರು. ಕೊರಗ ಸಂಘಟನೆಯ ತಾಲೂಕು ಅಧ್ಯಕ್ಷ ಗಣೇಶ್‌ ಪ್ರಸ್ತಾವಿಸಿದರು. ಕಟ್‌ಬೆಲೂ¤ರು ಪಿಡಿಒ ಸುಜಾತಾ ಸ್ವಾಗತಿಸಿ, ಹೆಮ್ಮಾಡಿ ಪಿಡಿಒ ರೂಪಾ ಕಾರ್ಯಕ್ರಮ ನಿರ್ವಹಿಸಿದರು. 

6 ತಿಂಗಳಾದರೂ ಸಿಗದ ಪಿಎಫ್‌
ಕುಂದಾಪುರ ಪುರಸಭೆಯ ಪೌರ ಕಾರ್ಮಿಕ ದಿನೇಶ್‌ ಅವರು 6 ತಿಂಗಳ ಹಿಂದೆ ಕಸ ಸಾಗಾಟದ ವಾಹನ ಪಲ್ಟಿಯಾಗಿ ಮೃತಪಟ್ಟಿದ್ದು, ಆದರೆ ಈವರೆಗೆ ಭವಿಷ್ಯ ನಿಧಿ (ಪಿಎಫ್‌) ಸಿಕ್ಕಿಲ್ಲ. ಅದಲ್ಲದೆ ವಾಹನದ ವಿಮೆ ಕೂಡ ಸಿಕ್ಕಿಲ್ಲ ಎಂದು ಅವರ ಮನೆಯವರು ಡಿಸಿ ಗಮನಕ್ಕೆ ತಂದರು. ಇದಕ್ಕುತ್ತರಿಸಿದ ಡಿಸಿ, ತಾಂತ್ರಿಕ ಕಾರಣದಿಂದ ಪಿಎಫ್‌ ಸಿಗುವಲ್ಲಿ ಸ್ವಲ್ಪ ತಡವಾಗಿದೆ. ಶೀಘ್ರ ಸಿಗುವ ವ್ಯವಸ್ಥೆ ಮಾಡಲಾಗುವುದು ಎಂದರು. ಈ ವೇಳೆ ಪಲ್ಟಿಯಾದ ವಾಹನಕ್ಕೆ ಇನ್ಶೂರೆನ್ಸ್‌ ಮಾಡಿಸಿರಲಿಲ್ಲ. ಇದಕ್ಕೆ ಯಾರು ಹೊಣೆ ಎಂದು ಸಭೆಯಲ್ಲಿ ಕೊರಗ ಮುಖಂಡರು ಪ್ರಶ್ನಿಸಿದರು. 

ಬುಟ್ಟಿಗೆ ಬೇಡಿಕೆಯಿದೆ
ಕೊರಗರ ಮೂಲ ಕಸುಬಾಗಿರುವ ಬುಟ್ಟಿ ನೇಯುವವರ ಸಂಖ್ಯೆ ಕಡಿಮೆಯಾಗುತ್ತಿದೆ. ವಿದ್ಯಾವಂತರಾದರೂ ಮೂಲ ಕಸುಬನ್ನು ನಿರ್ಲಕ್ಷಿಸಬಾರದು. ನಿಮ್ಮ ಬುಟ್ಟಿಗೆ ಈಗಲೂ ಬಹಳಷ್ಟು ಬೇಡಿಕೆಯಿದೆ. ಅದಕ್ಕೂ ಉತ್ತಮ ಮಾರುಕಟ್ಟೆ ಕಲ್ಪಿಸಿ ಕೊಡುವ ವ್ಯವಸ್ಥೆ ಮಾಡಲಾಗುವುದು. ಬುಟ್ಟಿ ನೇಯುವಿಕೆ ಗೊತ್ತಿಲ್ಲದವರಿಗೆ ತರಬೇತಿ ಕೂಡ ಇಲಾಖೆಯಿಂದಲೇ ನೀಡಲಾಗುವುದು.
– ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌,  ಜಿಲ್ಲಾಧಿಕಾರಿ

ಸರಕಾರ, ಸಮುದಾಯ, ಸಮಾಜ…
ಕೊರಗ ಸಮುದಾಯದಲ್ಲಿ ವಿದ್ಯಾವಂತರ ಸಂಖ್ಯೆ ಬಹಳಷ್ಟು ಕಡಿಮೆಯಿದೆ. ಶಿಕ್ಷಣ ಪಡೆದವರು ಬಾಕಿ ಉಳಿದವರಿಗೆ ಮಾಹಿತಿ, ಅರಿವು ಮೂಡಿಸುವ ಕೆಲಸ ಮಾಡಬೇಕು. ಆಗ ಮಾತ್ರ ನಿಮ್ಮ ಸಮುದಾಯ ಮುಂದೆ ಬರಲು ಸಾಧ್ಯ. ಕೊರಗ ಜನರಲ್ಲಿ ಅಪೌಷ್ಟಿಕತೆ, ಶಿಶು ಮರಣ ಹೆಚ್ಚಾಗಿದ್ದು, ಆರೋಗ್ಯ ಕಾಳಜಿ ಕಡಿಮೆಯಿದೆ. ಆದರೆ ಕೊರಗರು ದುರ್ಬಲರಲ್ಲ. ನಿಮ್ಮೊಂದಿಗೆ ಸರಕಾರ, ಸಮುದಾಯ ಹಾಗೂ ಸಮಾಜವಿದೆ.
– ಜಯಪ್ರಕಾಶ್‌ ಶೆಟ್ಟಿ , 
ಉಪನ್ಯಾಸಕರು, ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜು

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.