ಶಾಲೆಬಾಗಿಲು: ಕಾರು-ಟ್ಯಾಂಕರ್ ಢಿಕ್ಕಿ
Team Udayavani, Jul 30, 2018, 11:30 AM IST
ಉಪ್ಪುಂದ: ಉಪ್ಪುಂದ ರಾ.ಹೆದ್ದಾರಿ 66ರ ಶಾಲೆಬಾಗಿಲು ಬಳಿ ರವಿವಾರ ಮಧ್ಯಾಹ್ನ ಕಾರು ಮತ್ತು ಟ್ಯಾಂಕರ್ ಢಿಕ್ಕಿಯಾಗಿ ಕಾರು ಜಖಂಗೊಂಡಿದೆ.
ಗೋವಾದಿಂದ ಮಂಗಳೂರು ಕಡೆಗೆ ತೆರಳುತ್ತಿರುವ ಮಾರುತಿ ಸುಜುಕಿ ಕಾರಿನಲ್ಲಿದ್ದವರು ಉಪ್ಪುಂದ ಶಾಲೆಬಾಗಿಲು ಬಳಿಯ ಹೊಟೇಲ್ನಲ್ಲಿ ಊಟ ಮಾಡಿ ಮಂಗಳೂರು ಕಡೆಗೆ ಕಾರನ್ನು ತಿರುಗಿಸುವ ಸಂದರ್ಭ ಕುಂದಾಪುರದಿಂದ ಭಟ್ಕಳ ಕಡೆಗೆ ಹೋಗುತ್ತಿರುವ ಟ್ಯಾಂಕರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟದಿಂದಾಗಿ ಕಾರಿನಲ್ಲಿ ಇದ್ದವರಿಗೆ ಯಾವುದೇ ಅಪಾಯವಾಗಿಲ್ಲ.
ಸ್ವಲ್ಪ ಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು. ಬೈಂದೂರು ಪೊಲೀ ಸರು ಸ್ಥಳಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್