ಕಸ್ತೂರಿ ರಂಗನ್‌ ವರದಿ:ವಸ್ತುನಿಷ್ಠ ಅಭಿಪ್ರಾಯಕ್ಕೆ ಶಾಸಕ ಪೂಂಜಾ ಆಗ್ರಹ


Team Udayavani, Aug 13, 2018, 11:55 AM IST

kasuri.jpg

ಬೆಳ್ತಂಗಡಿ: ಕಸ್ತೂರಿರಂಗನ್‌ ವರದಿ ಜಾರಿಗೆ ಸಂಬಂಧಿಸಿ ರಾಜ್ಯ ಸರಕಾರವು ದ.ಕ. ಜಿಲ್ಲೆಯಲ್ಲಿ ತೊಂದರೆ ಅನುಭವಿಸುವ 44 ಗ್ರಾಮಗಳಲ್ಲಿ ಮರು ಸರ್ವೇ ನಡೆಸಿ, ಜನವಸತಿ ರಹಿತ ಪ್ರದೇಶವನ್ನು ಬೇರ್ಪಡಿಸಿ ಶೀಘ್ರ ವಸ್ತುನಿಷ್ಠ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲು ಕೇಂದ್ರಕ್ಕೆ ನೀಡಬೇಕಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಆ. 25ರೊಳಗೆ ತನ್ನ ಅಭಿಪ್ರಾಯ ಮಂಡಿಸಬೇಕಾದ ರಾಜ್ಯ ಸರಕಾರ ಗಾಢನಿದ್ದೆಯಲ್ಲಿದೆ. ಕೇರಳ ಸೇರಿದಂತೆ ವಿವಿಧ ಸರಕಾರಗಳು ಈಗಾಗಲೇ ವಸ್ತುನಿಷ್ಠ ವರದಿ ಸಲ್ಲಿಸಿದ್ದರೂ ನಮ್ಮ ಸರಕಾರ ಸುಮ್ಮನಿದೆ ಎಂದರು. ಗ್ರಾಮಗಳಿಗೆ ತೊಂದರೆಯಾಗುವ ಕುರಿತು ವಸ್ತುನಿಷ್ಠ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ. ಈಗಾಗಲೇ ಎಲ್ಲ ಗ್ರಾಮಗಳಲ್ಲೂ ವಿಶೇಷ ಗ್ರಾಮಸಭೆ ನಡೆಸಿ ವರದಿ ವಿರೋಧಿಸಿ ನಿರ್ಣಯ ಕೈಗೊಂಡು ಜಿಲ್ಲಾಡಳಿತಕ್ಕೆ ಸಲ್ಲಿಸಲಾಗಿದೆ. ಆದರೆ ಅದನ್ನು ಮುಂದುವರಿಸುವ ಕುರಿತು ಹಿಂದಿನ ಉಸ್ತುವಾರಿ ಸಚಿವರಾಗಲಿ, ಶಾಸಕರಾಗಲಿ ಪ್ರಯತ್ನಿಸಲಿಲ್ಲ. ವರದಿ ಜಾರಿಯಾದರೆ ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕಿನ 44 ಗ್ರಾಮಗಳ ಜನರು ಮೂಲ ಸೌಕರ್ಯ ವಂಚಿತರಾಗಲಿದ್ದಾರೆ. ಇದಕ್ಕೆ ರಾಜ್ಯ ಸರಕಾರ, ಅಧಿಕಾರಿಗಳೇ ಹೊಣೆಯಾಗಲಿದ್ದಾರೆ ಎಂದರು.ರಕ್ಷಿತಾರಣ್ಯದ ನಿರ್ದಿಷ್ಟ ಸ್ಥಳ (ಝೀರೋ ಪಾಯಿಂಟ್ ) ಗುರುತಿಸಿ ವಸತಿ ರಹಿತ ಪ್ರದೇಶದ ವರೆಗೆಕಸ್ತೂರಿ ವರದಿಗೆ ಸೇರಿಸಿ ಕೊಳ್ಳುವಂತೆ ಸರ್ವೇ ನಡೆಸಬೇಕಿದೆೆ ಎಂದರು.

ಹೋರಾಟಕ್ಕೆ ಸಿದ್ಧತೆ?
ಈ ಕುರಿತು ಸರಕಾರ, ಜಿಲ್ಲಾಡಳಿತ ಯಾವುದೇ ಪ್ರತಿಕ್ರಿಯೆ ನೀಡದೇ ಇದ್ದಲ್ಲಿ ಹೋರಾಟ ರೂಪಿಸುವ ಕುರಿತು 44 ಗ್ರಾಮಗಳ ಪ್ರತಿನಿಧಿಗಳನ್ನು ಸೇರಿಸಿ ಆ. 17ರಂದು ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ನಡೆಸಲಿದ್ದೇವೆ. ಸಭೆಗೆ ಶಾಸಕರು, ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರನ್ನೂ ಆಹ್ವಾನಿಸುತ್ತೇವೆ ಎಂದು ಪೂಂಜಾ ತಿಳಿಸಿದರು.

ಬೈದು ಕಳುಹಿಸಿದ್ದರು!
ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್‌ ಶಿರಾಡಿ ಮಾತನಾಡಿ, ವರದಿಯಿಂದ ತೊಂದರೆ ಯಾಗುವ ಕುರಿತು ಹಿಂದಿನ ಅರಣ್ಯ ಸಚಿವರ ಬಳಿ ಹೋದಾಗ ಇದರಿಂದ ಏನೂ ತೊಂದರೆ ಆಗುವುದಿಲ್ಲ, ನಿಮಗೇನೂ ಗೊತ್ತಿಲ್ಲ ಎಂದು ನಮ್ಮನ್ನು ಬೈದು ಕಳುಹಿಸಿದ್ದರು. ಮುಂದೆ ವರದಿ ಜಾರಿಯಾದರೆ ನಾವು ಅರಣ್ಯ ಅಧಿಕಾರಿಗಳನ್ನು ಕಾರ್ಯಪ್ರವೃತ್ತರಾಗಲು ಬಿಡೆವು ಎಚ್ಚರಿಸಿದರು.ಪತ್ರಿಕಾಗೋಷ್ಠಿಯಲ್ಲಿ ಕೃಷ್ಣಪ್ಪ ಬೇಂಗಾಲ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.