ಗಂಗೊಳ್ಳಿ ಕಿರು ಬಂದರು: ಹೂಳೆತ್ತದಿರುವುದೇ ಸಮಸ್ಯೆ


Team Udayavani, Aug 17, 2018, 6:00 AM IST

1608kdpp2a.jpg

ವಿಶೇಷ ವರದಿ- ಗಂಗೊಳ್ಳಿ: ಸುಮಾರು 3 ಕೋ.ರೂ. ವೆಚ್ಚದಲ್ಲಿ ಗಂಗೊಳ್ಳಿಯ ಕಿರು ಬಂದರು ನಿರ್ಮಾಣವಾಗಿ 4-5 ವರ್ಷಗಳಾದರೂ ಅಲ್ಲಿರುವ ಹೂಳು ಹಾಗೂ ಕಲ್ಲು ತೆಗೆಯದ ಕಾರಣ ಅದು ಈವರೆಗೆ ಮೀನುಗಾರರ ಪ್ರಯೋಜನಕ್ಕೆ ಬಾರದೇ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ. 

ಯಾಂತ್ರೀಕೃತ ಮೀನುಗಾರಿಕೆ  ಋತು ಈಗಾಗಲೇ ಆರಂಭವಾಗಿ ದ್ದರೂ, ಭಾರೀ ಮಳೆಯಿಂದಾಗಿ ಕಡಲಬ್ಬರ ಹೆಚ್ಚಾಗಿರುವುದರಿಂದ ಇನ್ನು ಕೆಲವು ದಿನಗಳ ಕಾಲ ಮೀನುಗಾರಿಕೆ ನಡೆಯುವುದು ಅನುಮಾನವೆನಿಸಿದೆ. 

ಗಂಗೊಳ್ಳಿ ಮೀನುಗಾರಿಕಾ ಬಂದರಿನ ಹಳೆಯ ಜೆಟ್ಟಿ, ಗಂಗೊಳ್ಳಿ- ಕೋಡಿ ನಡುವಿನ ಅಳಿವೆ, ಮ್ಯಾಂಗನೀಸ್‌ ವಾರ್ಫ್‌, ಬ್ರೇಕ್‌ ವಾಟರ್‌ ಇಕ್ಕೆಲಗಳಲ್ಲಿ ಹೂಳು ಆವ‌ರಿಸಿದ್ದು, ಆದರೆ ಇಷ್ಟೊತ್ತಿಗಾಗಲೇ ತೆರವು ಮಾಡಬೇಕಿತ್ತು. ಬೋಟುಗಳು ಜೆಟ್ಟಿಯಲ್ಲಿ ನಿಲ್ಲಲು ಹಾಗೂ ಅಳಿವೆ ಮೂಲಕ ಸಾಗಲು ತೊಂದರೆಯಾಗುವ ಸಾಧ್ಯತೆ ಇದೆ. ಹೀಗಾಗಿ ಜೆಟ್ಟಿ ಹಾಗೂ ಅಳಿವೆ ಪ್ರದೇಶಗಳಲ್ಲಿ ಹೂಳೆತ್ತಲು ಸರಕಾರ ಕ್ರಮ ವಹಿಸಬೇಕಿದೆ. 

50 ಬೋಟುಗಳು ನಿಲ್ಲಬಹುದು
ಕಿರು ಬಂದರಿನ ಹೂಳು ಹಾಗೂ ಬೋಟುಗಳ ಸಂಚಾರಕ್ಕೆ ಅಡ್ಡಿಯಾಗಿರುವ ಕಲ್ಲುಗಳನ್ನು ತೆರವು ಮಾಡಿದರೆ ಸುಮಾರು 50 ರಿಂದ 60 ಬೋಟುಗಳು ಅಲ್ಲಿ ನಿಲ್ಲಬಹುದು. ಇದರಿಂದ ಗಂಗೊಳ್ಳಿ ಬಂದರಿನಲ್ಲಿ ಬೋಟುಗಳ ನಿಲುಗಡೆಗೆ ಇರುವ ಸ್ಥಳಾವಕಾಶದ ಸಮಸ್ಯೆ ಸ್ವಲ್ಪ ಮಟ್ಟಿಗೆ ನೀಗಲಿದೆ. 

ಸಚಿವರಿಗೂ ಮನವಿ
ಈ ಸಂಬಂಧ ಇತ್ತೀಚೆಗೆ ಗಂಗೊಳ್ಳಿ ಬಂದರಿಗೆ ಭೇಟಿ ನೀಡಿದ್ದ ಮೀನುಗಾರಿಕಾ ಸಚಿವ ವೆಂಕಟರಾವ್‌ ನಾಡಗೌಡ ಅವರಿಗೆ ಇಲ್ಲಿನ ಮೀನುಗಾರರು ಹೂಳೆತ್ತಲು ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದರು. ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ
ಅವರು ಕೂಡ ಸಚಿವರನ್ನು ಒತ್ತಾಯಿಸಿದ್ದರು. 

ದುರಸ್ತಿಯಾಗದ ಮೇಲ್ಛಾವಣಿ
ಬಂದರಿನಲ್ಲಿರುವ ಎರಡು ಮೀನು ಗಾರಿಕಾ ಹರಾಜು ಪ್ರಾಂಗಣದ ಪೈಕಿ 1ನೇ ಪ್ರಾಂಗಣದ ಮೇಲ್ಛಾವಣಿಯ ಸಿಮೆಂಟ್‌ ಶೀಟು ಕಳೆದ ಜೂನ್‌ನಲ್ಲಿ ಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋಗಿದೆ. ಆದರೆ ಈವರೆಗೆ ಅದರ ದುರಸ್ತಿ ಮಾತ್ರ ಆಗಿಲ್ಲ. 

ಸ್ಲಾÂಬ್‌ ಕುಸಿತ
ಸುಮಾರು 400 ಮೀಟರ್‌ ಉದ್ದದ ಜೆಟ್ಟಿ ಪ್ರದೇಶದಲ್ಲಿ ಸುಮಾರು 150 ಮೀ. ಜೆಟ್ಟಿ ಪ್ರದೇಶದ ಸ್ಲಾéಬ್‌ ಕುಸಿದಿದ್ದು, ಮೀನುಗಾರರಿಗೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಇದೆ. ದಕ್ಷಿಣ ದಿಕ್ಕಿನಲ್ಲಿ ಸ್ಲಾÂಬ್‌ ಕುಸಿದು ಆರೇಳು ತಿಂಗಳು ಕಳೆದಿ ದ್ದರೂ ಅದನ್ನು ದುರಸ್ತಿ§ಪಡಿಸಿಲ್ಲ. ಈಗ ಇದಕ್ಕೆ ತಾಗಿಕೊಂಡಿರುವ ಸ್ಲಾÂಬ್‌ಗಳು ಕುಸಿತದ ಭೀತಿಯಲ್ಲಿದ್ದು, ಈ ಬಗ್ಗೆ ಕೂಡಲೇ ಸೂಕ್ತ ಕ್ರಮಕೈಗೊಳ್ಳುವಂತೆ ಮೀನುಗಾರರು ಆಗ್ರಹಿಸಿದ್ದಾರೆ. 

ಕಳೆದ ಸಾಲಿನ ಮೀನುಗಾರಿಕಾ ಋತು ನಿರಾಸೆಯಲ್ಲಿ ಅಂತ್ಯಗೊಂಡಿದ್ದು, ಈ ಬಾರಿಯ ಮಳೆಗಾಲದ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಯೂ ಕೆಲವು ದಿನಗಳು ಮಾತ್ರನಡೆದಿರುವುದು ಮೀನುಗಾರರಲ್ಲಿ ನಿರಾಸೆ ಮೂಡಿಸಿದೆ. ಹೊಸ ಭರವಸೆಯೊಂದಿಗೆ ಕಡಲಿಗಿಳಿಯಲು ಸಿದ್ಧರಾಗಿರುವ ಮೀನುಗಾರರ ಬೇಡಿಕೆ ಈಡೇರಿಸಲು ಆಳುವ ವರ್ಗ ಮನಸ್ಸು ಮಾಡಬೇಕಿದೆ. 

 ಈವರೆಗೆ ಪ್ರಯೋಜನಕ್ಕಿಲ್ಲ
4 ವರ್ಷಗಳ ಹಿಂದೆ ನಿರ್ಮಿಸಿದ್ದ ಕಿರು ಬಂದರು, ಈವರೆಗೆ ನಮ್ಮ ಉಪಯೋಗಕ್ಕೆ ಬಂದಿಲ್ಲ. ಹೂಳೆತ್ತದೇ ಇರುವುದರಿಂದ ಮೀನುಗಾರಿಕೆಗೆ ತೊಂದರೆಯಾಗಲಿದೆ. ಸಚಿವರು ಬಂದಿದ್ದಾಗ ಅವರ ಗಮನಕ್ಕೂ ತರಲಾಗಿದೆ. 
– ರಮೇಶ್‌ ಕುಂದರ್‌
ಅಧ್ಯಕ್ಷರು, ಪರ್ಸಿನ್‌ ಮೀನುಗಾರರ ಸ್ವಸಹಾಯ ಸಂಘ

ಕೂಡಲೇ ಹೂಳೆತ್ತುವ ಕಾರ್ಯ
ಹೊಸ ಜೆಟ್ಟಿ, ಕೋಡಿ ಭಾಗದಲ್ಲಿ ಹೂಳು ತುಂಬಿ ಮೀನುಗಾರಿಕೆ ದೋಣಿಗಳ ಸಂಚಾರಕ್ಕೆ ತೊಂದರೆಯಾಗಲಿದ್ದು, ಮಳೆ ಕಡಿಮೆಯಾದ ತತ್‌ಕ್ಷಣ ಹೂಳೆತ್ತುವ ಕಾರ್ಯ ಆಗಲಿದೆ. ಈಗ ಬಾರ್ಜ್‌ ಮಲ್ಪೆಯಲ್ಲಿದ್ದು, ಕಡಲಬ್ಬರಕ್ಕೆ ಅಲ್ಲಿಂದ ಗಂಗೊಳ್ಳಿಗೆ ಕೊಂಡೊಯ್ಯುವುದು ಕಷ್ಟ. ಮಳೆ ಕಡಿಮೆಯಾದ ಅನಂತರ ಹೂಳೆತ್ತಲಾಗುವುದು. 
– ನಾಗರಾಜ್‌
ಎಂಜಿನಿಯರ್‌, ಬಂದರು ಮತ್ತು ಮೀನುಗಾರಿಕಾ ಇಲಾಖೆ ಉಡುಪಿ

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.