ಟೋಲ್‌ ಸಂಗ್ರಹ ತಾತ್ಕಾಲಿಕ ಮುಂದೂಡಿಕೆ 


Team Udayavani, Aug 17, 2018, 9:16 AM IST

1608kota2m.jpg

ಕೋಟ/ಹೆಜಮಾಡಿ: ರಾಷ್ಟ್ರೀಯಹೆದ್ದಾರಿ 66ರಲ್ಲಿ ಸ್ಥಳೀಯರಿಗೂ ಟೋಲ್‌ ವಸೂಲು ಮಾಡುವ ನವಯುಗ ಕಂಪೆನಿ ಕ್ರಮಕ್ಕೆ ಸ್ಥಳೀಯರ, ರಾಷ್ಟ್ರೀಯ ಹೆದ್ದಾರಿ ಹೋರಾಟ ಗಾರರು, ವಿವಿಧ ಸಂಘಟನೆಗಳಿಂದ  ತೀವ್ರ ವಿರೋಧ ವ್ಯಕ್ತವಾಗಿದೆ.
 
ಗುರುವಾರ ಟೋಲ್‌ ಸಂಗ್ರ ಹಣೆ ಕ್ರಮಕ್ಕೆ ಕೋಟ ಮತ್ತು ಪಡುಬಿದ್ರಿಯ ಹೆಜಮಾಡಿಯಲ್ಲಿ ಕಂಪೆನಿ ಮುಂದಾಗುತ್ತಿದ್ದಂತೆ ಜನರು ಜಮಾಯಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ. ಕಂಪೆನಿ ಎರಡೂ ಕಡೆ ಮುಂದಾಗುತ್ತಿದ್ದಂತೆ, ಪೊಲೀಸರು, ತಹಶೀಲ್ದಾರರು ಆಗಮಿಸಿದ್ದು ಪರಿ ಸ್ಥಿತಿ ತಹಬಂದಿಗೆ ತರುವ ಯತ್ನ ಮಾಡಿದ್ದಾರೆ.  

ಮಾತುಕತೆಯ ಬಳಿಕ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಯಲ್ಲಿ ನಡೆಸಲಾಗುವ ಸಭೆಯ ಬಳಿಕಷ್ಟೇ ಟೋಲ್‌ ಸಂಗ್ರಹದ ಕುರಿತಾಗಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು. ಅದುವರೆಗೆ ಹೆಜಮಾಡಿ, ಸಾಸ್ತಾನ ಟೋಲ್‌ ಗೇಟ್‌ಗಳಲ್ಲಿ ಯಥಾಸ್ಥಿತಿಯನ್ನು ಕಾಪಾಡಿ ಕೊಳ್ಳಬೇಕೆಂದು ಅಧಿಕಾರಿಗಳ ಸಮಕ್ಷಮ ತೀರ್ಮಾನಿಸಲಾಯಿತು. 

ಕೆಎ 20 ವಾಹನಕ್ಕೂ ಟೋಲ್‌ 
ಕಳೆದ ಒಂದು ವರ್ಷದಿಂದ ಕೆಎ. 20 ವಾಹನಗಳಿಗೆ ಉಚಿತ ಪ್ರವೇಶ ನೀಡಲಾಗಿತ್ತು. ಇದರಿಂದ ಕಂಪೆನಿಗೆ 200 ಕೋಟಿ ರೂ. ನಷ್ಟವಾಗಿದೆ. ಅದನ್ನು ಸರಕಾರ ನೀಡಬೇಕು ಎಂದು ಕಂಪೆನಿ ಆಗ್ರಹ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್‌ ಭದ್ರತೆಯೊಂದಿಗೆ ಎಲ್ಲಾ ವಾಹನಗಳಿಂದ ಟೋಲ್‌ ಸಂಗ್ರಹಕ್ಕೆ ಆದೇಶ ನೀಡಲಾಗಿತ್ತು ಎನ್ನಲಾಗಿದೆ. 

500 ಮೀ. ಒಳಗೂ ಟೋಲ್‌!
ನೂತನ ನಿಯಮ ಜಾರಿಯಾದರೆ 500 ಮೀ. ಹೋಗಲೂ ಟೋಲ್‌ ಕಟ್ಟಿ ಹೋಗಬೇಕಾದ ಸ್ಥಿತಿ ಬರಲಿದೆ. ಪೆಟ್ರೋಲ್‌ ಹಾಕಿಸಲು, ಅಂಗಡಿಯಿಂದ ಸಾಮಾನು ತರಲೂ ಟೋಲ್‌ ಕಟ್ಟಬೇಕಾಗುತ್ತದೆ ಎನ್ನುವ ಆತಂಕ ಸ್ಥಳೀಯರದ್ದು.

ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಎಕಾಏಕಿ ಟೋಲ್‌ ಸಂಗ್ರಹಕ್ಕೆ ಮುಂದಾಗಿದ್ದು ಸರಿಯಲ್ಲ ಹಾಗೂ ಕಾಮಗಾರಿ ಪೂರ್ಣಗೊಳ್ಳುವ ತನಕ ಯಾವುದೇ ಕಾರಣಕ್ಕೆ ಶುಲ್ಕ ಸಂಗ್ರಹಿಸಲು ಬಿಡುವುದಿಲ್ಲ. ಅನಂತರವೂ  5ಕಿ.ಮೀ. ಒಳಗಿನ ವಾಣಿಜ್ಯ ಮತ್ತು 8 ಕಿ.ಮೀ ವರೆಗಿನ ವಾಣಿಜ್ಯೇತರ ಎಲ್ಲಾ  ವಾಹನಗಳಿಗೆ ಉಚಿತ ಪ್ರವೇಶ ನೀಡಬೇಕು. ಈ ಕುರಿತು ಹೋರಾಟ ಮುಂದುವರಿಯಲಿದೆ.
– ಪ್ರತಾಪ್‌ ಶೆಟ್ಟಿ,
ಅಧ್ಯಕ್ಷರು ಹೆದ್ದಾರಿ ಜಾಗೃತಿ ಸಮಿತಿ

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.