ಸಚಿವರಿಂದ ಭತ್ತದ ಯಾತ್ರೀಕೃತ ನಾಟಿ ಪ್ರಾತ್ಯಕ್ಷಿಕೆ ವೀಕ್ಷಣೆ


Team Udayavani, Aug 21, 2018, 6:00 AM IST

2008kdpp5.jpg

ಕುಂದಾಪುರ: ಹೆಮ್ಮಾಡಿಯ ಸಂತೋಷನಗರದ ಬುಗ್ರಿಕಡುವಿಗೆ ಸೋಮವಾರ ಭೇಟಿ ನೀಡಿದ ರಾಜ್ಯ ಕೃಷಿ ಸಚಿವ ಶಿವಶಂಕರ ರೆಡ್ಡಿ ಅವರಿಗೆ ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಉಡುಪಿ ಜಿಲ್ಲಾ ಕೃಷಿಕ ಸಮಾಜದ ವತಿಯಿಂದ ಮನವಿ ಸಲ್ಲಿಸಲಾಯಿತು. 
ಈ ಸಂದರ್ಭದಲ್ಲಿ ಸಚಿವರು ಭತ್ತದ ಯಾಂತ್ರೀಕೃತ ನಾಟಿ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದರು.
 
ಸಮ್ಮಾನ
ಈ ಸಂದರ್ಭದಲ್ಲಿ 10 ಎಕರೆ ಜಾಗದಲ್ಲಿ ಕೃಷಿ ಮಾಡಿರುವ ರೈತ ಶೀನ ಪೂಜಾರಿ ಅವರನ್ನು ಸಚಿವರು ಸಮ್ಮಾನಿಸಿದರು. 

ಸಚಿವರಿಗೆ ಸಲ್ಲಿಸಿದ ಮನವಿ ಪಟ್ಟಿ ಇಂತಿದೆ
– ಕೃಷಿ ಬೆಳೆಗೆ ಕಾಡು ಪ್ರಾಣಿಗಳ ಹಾವಳಿಯಿದ್ದು, ಅದರ ನಿಯಂತ್ರಣಕ್ಕಾಗಿ ಕೋವಿ ಕಾನೂನು ಸಡಿಲಿಕೆ, ಶೆ. 90ರ ಸಹಾಯಧನದಲ್ಲಿ ಸೋಲಾರ್‌ ಐಬೆಕ್ಸ್‌ ತಂತಿ ಬೇಲಿ ಒದಗಿಸಿ. 
–   ಕರಾವಳಿಯ ರೈತರನ್ನು ಗಮನದಲ್ಲಿಟ್ಟು ಕೊಂಡು ರಾಜ್ಯ ಸರಕಾರ ಬೆಂಬಲ ಬೆಲೆಯನ್ನು ಅಕ್ಟೋಬರ್‌- ನವೆಂಬರ್‌ನಲ್ಲಿ ಘೋಷಿಸಬೇಕು. 
–  ಕೃಷಿ ಇಲಾಖೆಯಲ್ಲಿ ಸಿಬಂದಿ ಕೊರತೆಯಿಂದ ಸೌಲಭ್ಯ ಪಡೆಯುವಲ್ಲಿ ವಿಳಂಬ.
–  ಜಿಲ್ಲೆಯಲ್ಲಿ ಕೃಷಿಗೆ ಕೂಲಿಯಾಳುಗಳ ಸಮಸ್ಯೆಯಿದ್ದು, ಸಣ್ಣ ಹಾಗೂ ಅತೀ ಸಣ್ಣ ರೈತರನ್ನು ಪ್ರೋತ್ಸಾಹಿಸಲು ಕಂಬೈನಡ್‌ ಹಾರ್ವೆಸ್ಟರ್‌ ಮೂಲಕ ಕಟಾವು ಮಾಡಿದ ರೈತರಿಗೆ ಎಕರೆವಾರು ಪ್ರೋತ್ಸಾಹಧನ ಸರಕಾರ ನೀಡಬೇಕು. 

ಇದಲ್ಲದೆ ಸೇರಿದ್ದ ರೈತರ ಪರ ಪ್ರಭಾಕರ ಶೆಟ್ಟಿ ಅವರು, ನೆಲಗಡಲೆಗೆ ಪ್ರೋತ್ಸಾಹಧನ, ಕೃಷಿಕರಿಗೆ ಸಬ್ಸಿಡಿ ದರದಲ್ಲಿ ಡೀಸೆಲ್‌ ನೀಡಲಿ ಎಂದರು. 

ಇಲಾಖೆಯಿಂದ ಸಿಗುವ ಸವಲತ್ತುಗಳು ರೈತರಿಗೆ ಸುಲಭವಾಗಿ ಸಿಗುವಂತೆ, ಇರುವ ವ್ಯವಸ್ಥೆಯನ್ನು ಸರಳ ಮಾಡುವಂತೆ ಕೃಷಿಕರಾದ ಡಾ| ಅತುಲ್‌ ಹೇಳಿದರು. 

ಎಪಿಎಂಸಿ ಅಧ್ಯಕ್ಷ ಶರತ್‌ ಕುಮಾರ್‌ ಶೆಟ್ಟಿ ಈ ಭಾಗದಲ್ಲಿ ಕೃಷಿ ನೀರಿಗೆ ಉಪ್ಪು ನೀರಿನ ಸಮಸ್ಯೆಯಾಗುತ್ತಿದ್ದು, ಹೊಳೆ ದಂಡೆಗೆ ಬದುಗಳನ್ನು ನಿರ್ಮಿಸಿದರೆ ಅನುಕೂಲವಾಗಲಿದೆ. ಗದ್ದೆಗಳಿಗೆ ರಸ್ತೆ ಸಂಪರ್ಕ ಇಲ್ಲದಿರುವುದರಿಂದ ಯಂತ್ರೀಕೃತ ಕೃಷಿಗೆ ತೊಂದರೆಯಾಗುತ್ತಿದೆ ಎಂದರು. 

ಉಡುಪಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎ. ಅಶೋಕ್‌ ಕುಮಾರ್‌ ಕೊಡ್ಗಿ ಸಚಿವರಿಗೆ ಮನವಿ ಸಲ್ಲಿಸಿದರು. ತಾಲೂಕು ಎಪಿಎಂಸಿ ಅಧ್ಯಕ್ಷ ಶರತ್‌ ಕುಮಾರ್‌ ಶೆಟ್ಟಿ,  ಕೃಷಿ ಇಲಾಖೆಯ ಅಧಿಕಾರಿಗಳು, ನೂರಾರು ಮಂದಿ ರೈತರು ಉಪಸ್ಥಿತರಿದ್ದರು.  

ಕೋವಿ ಕಾನೂನು ಸಡಿಲಿಕೆಗೆ ಪ್ರಯತ್ನ
ರೈತರ ಸಮಸ್ಯೆಗಳನ್ನು ಆಲಿಸಿದ ಸಚಿವರು ಕೋವಿ ಕಾನೂನು ಸಡಿಲಿಕೆ ಅಧಿಕಾರ ಡಿಸಿಯವರಿಗೆ ಮಾತ್ರವಿದ್ದು, ಅವರೊಂದಿಗೆ ಮಾತನಾಡಿ, ಸಡಿಲಿಕೆಗೆ ಪ್ರಯತ್ನ ಮಾಡಲಾಗುವುದು. ಉಪ್ಪು ನೀರಿನ ಸಮಸ್ಯೆಗೆ ಪರಿಹಾರವಾಗಿ ಹೊಳೆ ದಂಡೆಗೆ ಏರಿಸುವ ಸಂಬಂಧ ನೀರಾವರಿ ಸಚಿವರೊಂದಿಗೆ ಮಾತನಾಡಲಾಗುವುದು ಎಂದ ಅವರು, ತಾಲೂಕು ಮಟ್ಟದಲ್ಲಿ ಕೃಷಿ ಯಂತ್ರ ದುರಸ್ತಿಗೆ ಸಿಬಂದಿ ನೇಮಿಸಲಾಗುವುದು ಎಂದು ಸಚಿವರು ಹೇಳಿದರು. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.