ಘಾಟಿ ಕುಸಿತ ನಾವೇ ಮಾಡಿಕೊಂಡದ್ದು: ಒಂದಲ್ಲ, ಹತ್ತು ಹಲವು ಕಾರಣ


Team Udayavani, Aug 21, 2018, 9:55 AM IST

shiradi-ghat.jpg

ಕುಂದಾಪುರ: ಪಶ್ಚಿಮ ಘಟ್ಟದ ಮೆತ್ತನೆ ಮಣ್ಣಿನ ಧಾರಣಾ ಸಾಮರ್ಥ್ಯ ಅಳೆಯದೆ ಬೃಹತ್‌ ಕಾಮಗಾರಿಗಳನ್ನು ನಡೆಸುತ್ತಿರುವುದು ಹಾಗೂ ಮಿತಿಮೀರಿದ ಭಾರ ಹೊತ್ತ ಘನ ವಾಹನಗಳ ಎಡೆಬಿಡದ ಸಂಚಾರ ಇಂದಿನ ಭೂ ಕುಸಿತಕ್ಕೆ ಕಾರಣವಾಗುತ್ತಿದೆಯೇ ಎಂಬ ಪ್ರಶ್ನೆಗೆ ಹೌದೆಂಬ ಉತ್ತರ ಎಲ್ಲೆಡೆಯಿಂದ ಲಭ್ಯವಾಗುತ್ತಿದೆ.

ಶಿರಾಡಿ, ಚಾರ್ಮಾಡಿ, ಆಗುಂಬೆ, ಬಾಳೆಬರೆ, ಮಡಿಕೇರಿ ಘಾಟಿ ರಸ್ತೆಗಳಲ್ಲಿ ಸುಮಾರು ನಾಲ್ಕು ತಿಂಗಳಿಂದ ನಿರಂತರವಾಗಿ ಭೂ ಕುಸಿತ ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ತಜ್ಞರನ್ನು ಸಂಪರ್ಕಿಸಿದಾಗ, “ಪಶ್ಚಿಮ ಘಟ್ಟವನ್ನು ಬಗೆದು ಮಾಡುತ್ತಿರುವ ಬೃಹತ್‌ ಕಾಮಗಾರಿಗಳಿಂದ ಭಾರೀ ಘಟ್ಟದ ಬುಡ ಕಂಪನಕ್ಕೆ ಒಳಗಾಗುತ್ತಿದೆ. ಘನ
 ವಾಹನಗಳ ಓಡಾಟ ಸಮಸ್ಯೆಯ ತೀವ್ರತೆಯನ್ನು ಹೆಚ್ಚಿಸಿದೆ. ಇದರೊಂದಿಗೆ ಧಾರಣಾ ಸಾಮರ್ಥ್ಯದ ಬಗ್ಗೆ ಆಳವಾದ ಅಧ್ಯಯನ ನಡೆಸದೆ ನಡೆಸುವ ಕಾಮಗಾರಿಗಳೂ ತನ್ನ ಕೊಡುಗೆ ನೀಡುತ್ತಿವೆ. ಆದ್ದರಿಂದಲೇ ನಾಲ್ಕೈದು ವರ್ಷಗಳಿಂದ ಈ ರಸ್ತೆಗಳಲ್ಲಿ ಭೂ ಕುಸಿತ ಪ್ರಮಾಣ ಹೆಚ್ಚಿದೆ’ ಎನ್ನುತ್ತಾರೆ.
ಮೆತ್ತನೆ ಮಣ್ಣು ಪಶ್ಚಿಮ ಘಟ್ಟದ ಭೌಗೋಳಿಕ ವಿನ್ಯಾಸದಲ್ಲಿ ಪ್ರಮುಖವಾಗಿರುವುದು ಮೆಕ್ಕಲು ಮಣ್ಣು, ಶೋಲಾ ಹುಲ್ಲುಗಾವಲು, ವಿಶಾಲ ಕಾಡು. ಹುಲ್ಲಿನ ಕೆಳಗೆ ಅಭ್ರಕ, ಮ್ಯಾಂಗನೀಸ್‌ನಂಥ ಖನಿಜಗಳನ್ನು ಒಳಗೊಂಡ ಶಿಲಾಪದರವಿದೆ. ಇದರಡಿ ನೀರು ಸಂಗ್ರಹವಾಗುತ್ತದೆ. ಈ ನೀರೇ ನಮ್ಮೂರ ಬಾವಿ, ಕೆರೆಗಳಿಗೆ ಅಂತರ್ಜಲವಾಗಿರುವುದು. ಲಕ್ಷಾಂತರ ವರ್ಷಗಳಿಂದ ಎಲೆ, ಮರಗಳ ತ್ಯಾಜ್ಯ ದಿಂದ ಜೈವಿಕ ಸಂಕುಲದಿಂದ ಸೃಷ್ಟಿಯಾದ ಈ ಮಣ್ಣು ಗಟ್ಟಿ ಮಣ್ಣಲ್ಲ ಎನ್ನುತ್ತಾರೆ ಭೂವಿಜ್ಞಾನ ತಜ್ಞರು. ಹೆದ್ದಾರಿಯಾದ ಕಾಲುದಾರಿ ಟಿಪ್ಪು ಕಾಲದಲ್ಲಿ ಕಾಲುದಾರಿ ಆಗಿದ್ದ ಪ್ರದೇಶ ಬ್ರಿಟಿಷರ ಕಾಲದಲ್ಲಿ ರಸ್ತೆಯಾಯಿತು. ಬಳಿಕ ಹೆದ್ದಾರಿ ಆಯಿತು. ಪ.ಘಟ್ಟಕ್ಕೆ ಇವುಗಳನ್ನು ಸಹಿಸುವ ಸಾಮರ್ಥ್ಯವಿಲ್ಲ.

ಅಸಲಿಗೆ ಪಶ್ಚಿಮ ಘಟ್ಟದಲ್ಲಿ ರಸ್ತೆ ಮಾಡುವಾಗ ನೀರ ಹರಿವಿಗೆ ಸೂಕ್ತ ವ್ಯವಸ್ಥೆ ಮಾಡಬೇಕಿತ್ತು. ನೀರು ಭೂಮಿಯಲ್ಲಿ ಇಂಗುವುದು ಮತ್ತು ಗುಡ್ಡದಿಂದ ಇಳಿಯುವ ನೀರಿನಿಂದಾಗಿ ಮಣ್ಣು ಸಡಿಲವಾಗುತ್ತದೆ. ಅದನ್ನು ತಡೆಯಲು ನೀರು ಹರಿಯುವಿಕೆಗೆ ವೈಜ್ಞಾನಿಕವಾಗಿ ರೂಪುರೇಷೆ ತಯಾರಿಸಿದರೆ ಭೂ ಕುಸಿತ ತಡೆಯಬಹುದು. ಇದಲ್ಲದೆ ಘಟ್ಟದಲ್ಲಿ ಅವ್ಯಾಹತವಾಗಿ ನಡೆಯುವ ಅರಣ್ಯ ಲೂಟಿಯಿಂದ ಮರಗಳ ಕೊರತೆಯಿಂದ ಮಣ್ಣು ಸಡಿಲಾಗುತ್ತದೆ. ಜತೆಗೆ ಎತ್ತಿನಹೊಳೆ, ಪೈಪ್‌ಲೈನ್‌ನಂತಹ ಕಾಮಗಾರಿ, ಕಪ್ಪು ಕಲ್ಲಿನ ಗಣಿಗಾರಿಕೆಯೂ ಕಾರಣವಾಗು
ತ್ತಿದೆ. ಕಾಮಗಾರಿ ಸಂದರ್ಭ ರಸ್ತೆ ಬಗ್ಗೆ ಮಾತ್ರ ಗಮನಹರಿಸಿ ಭೂವಿಜ್ಞಾನಿಗಳ ಅಭಿಪ್ರಾಯ ಪಡೆಯದಿರುವುದು, ಮಳೆಗಾಲದ ಅವಧಿಯಲ್ಲಿ ನಡೆಯುವ ಕಾರ್ಯಾಚರಣೆ ಮುಂದಿನ ವರ್ಷದ ಮಳೆಯನ್ನು ಆಧರಿಸದೇ ತಾತ್ಕಾಲಿಕ ಶಮನ ಕಾರ್ಯ ನಡೆಸುವುದು. ನದಿ ಆರಂಭವಾಗುವ ಗುಡ್ಡದಲ್ಲಿ ಮೂಲವನ್ನು ತಿರುಗಿಸಿ ಇತರ ಕಾಮಗಾರಿ ನಡೆಸುವುದೂ ಈ ಅನಾಹುತಗಳಿಗೆ ಕಾರಣವಾಗುತ್ತಿದೆ ಎನ್ನುತ್ತಾರೆ ಪರಿಣಿತರು.

ಪಶ್ಚಿಮ ಘಟ್ಟ ಮೆತ್ತನೆ ಮಣ್ಣಿಗೆ ಭಾರೀ ರಸ್ತೆಗಳು ಒಗ್ಗವು. ಇಲ್ಲಿ ನೀರ ಹರಿವಿಗೆ ಬೇಕಾದಂತೆ ವೈಜ್ಞಾನಿಕವಾಗಿ ಕಾಮಗಾರಿ ನಡೆಸದ ಕಾರಣ ಭೂ ಕುಸಿತ ಸಂಭವಿಸುತ್ತದೆ. ರಸ್ತೆಯ ಅಡಿಯ ಮಣ್ಣು ಸಡಿಲಗೊಳ್ಳದಂತೆ ನೀರು ಹರಿದು ಹೋಗಲು ಅನುವು ಮಾಡಿಕೊಟ್ಟರೆ ರಸ್ತೆ ಕುಸಿಯದು.
-ಪ್ರೊ| ಎಸ್‌.ಜಿ. ಮಯ್ಯ,  ಎನ್‌ಯಟಿಕೆ, ನಿವೃತ್ತ ಪ್ರಾಧ್ಯಾಪಕರು

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.