ಗುರಿ ಇಟ್ಟುಕೊಂಡಾಗ ಸಾಧನೆ ಹಾದಿ ಸುಗಮ


Team Udayavani, Aug 23, 2018, 7:00 AM IST

2208kdlm6ph.jpg

ಕುಂದಾಪುರ: ಯಾವುದೇ ಆದರೂ ಗುರಿ ಇಟ್ಟುಕೊಳ್ಳಿ. ಅದನ್ನು ಸಾಧಿಸುವ ಛಲ ಇಟ್ಟುಕೊಳ್ಳಿ. ಸಣ್ಣದಾದರೂ ಪರವಾಗಿಲ್ಲ. ಪ್ರಯತ್ನಿಸಿದಾಗಲಷ್ಟೇ ಬದುಕಿನಲ್ಲಿ ಯಶಸ್ಸು ಪಡೆಯುತ್ತೀರಿ ಎಂದು ಕಾರ್ಗಿಲ್‌ ಯುದ್ಧದ  ಜಮ್ಮು ಬೆಟಾಲಿಯನ್‌ ನಾಯಕ ಕ್ಯಾ| ನವೀನ್‌ ನಾಗಪ್ಪ ಹೇಳಿದರು.

ಬುಧವಾರ ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋಟರಿ ಕುಂದಾಪುರ ಮತ್ತು ಜೆಸಿಐ ಕುಂದಾಪುರ ಆಶ್ರಯದಲ್ಲಿ ಮೌಲ್ಯಾಧಾರಿತ ಉಪನ್ಯಾಸ ಅವರು ನೀಡಿದರು.

ತಮ್ಮ ಮೇಲೆ ವಿಶ್ವಾಸವಿದ್ದರೆ ಇತಿಹಾಸ ಸೃಷ್ಟಿ
ಮಗನ ದೇಹದ ಮೇಲೆ ಭಾರತದ ಧ್ವಜ ಹೊದೆಸಿ ಕೊಂಡು ಬರುವಂತಾಗುವುದೇ ಮಗನೊಬ್ಬ ತಾಯಿ ಮತ್ತು ತಾಯಿನಾಡಿಗೆ ಕೊಡಬಹುದಾದ ದೊಡ್ಡ ಉಡುಗೊರೆ ಎಂದು ನನ್ನ ಸಹಯೋಧನನ್ನು ಕಳೆದು ಕೊಂಡಾಗ ಆತನ ತಾಯಿ ಹೇಳಿದ ಮಾತು ನನಗೆ ಹೃದಯ ನೀರಾಗುವಂತೆ ಮಾಡಿತು. ಯಾರಿಗೆ ತಮ್ಮ ಬಗ್ಗೆ ವಿಶ್ವಾಸವಿದೆಯೋ ಅವರಿಗೆ ಇತಿಹಾಸ ಸೃಷ್ಟಿ ಮಾಡಲು ಸಾಧ್ಯವಾಗುತ್ತದೆ. ಅಂತಹ ವಿಶ್ವಾಸವನ್ನು ನಮಗೆ ದೇಶ, ಸೇನೆ ತುಂಬುತ್ತದೆ. ಯುದ್ಧ ಅಥವಾ ಕಾರ್ಯಾಚರಣೆ ಸಂದರ್ಭ ದೇಶ ಮಾತ್ರ ಗುರಿಯಾಗಿರುತ್ತದೆ. ಹೆತ್ತವಳು, ಕುಟುಂಬ ಎರಡನೆ ಆದ್ಯತೆಯಾಗಿರುತ್ತದೆ. ನಮ್ಮ ದೇಶದ ರಕ್ಷಣೆಯ ಹೊಣೆ ಹೊತ್ತು ಕೆಲಸ ಮಾಡುವಾಗ ಶತ್ರು ದೇಶದ ಉಪಟಳವೇ ನಮ್ಮ ಕಿಚ್ಚು ಹೆಚ್ಚಿಸುತ್ತದೆ. ನಮ್ಮ ಸೈನಿಕರ ಮೇಲೆ ಅವರು ಮಾಡುವ ದಾಳಿಯೇ ನಮ್ಮಲ್ಲಿ ರೋಷ ಉಕ್ಕಿಸುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಎಜುಕೇಶನ್‌ ಸೊಸೈಟಿ ಅಧ್ಯಕ್ಷ, ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಮಕ್ಕಳಲ್ಲಿ ಇಚ್ಛಾಶಕ್ತಿ ಹೆಚ್ಚಬೇಕು. ಸ್ವ ಸಾಮರ್ಥ್ಯದಿಂದ ಏನು ಬೇಕಾದರೂ ಮಾಡಬಹುದು. ಅಂತಹ ಸಾಮರ್ಥ್ಯ ವೃದ್ಧಿ ಮಾಡಿಕೊಳ್ಳಬೇಕು ಎಂದರು.

ರೋಟರಿ ಕ್ಲಬ್‌ ಅಧ್ಯಕ್ಷ ಗೋಪಾಲ ಶೆಟ್ಟಿ ಶೇಡಿಮನೆ, ಹಿರಿಯ ನ್ಯಾಯವಾದಿ ಎಸ್‌. ಗೋಪಾಲಕೃಷ್ಣ ಶೆಟ್ಟಿ, ಜೆಸಿಐ ಕುಂದಾಪುರ ಸಿಟಿ ಅಧ್ಯಕ್ಷ ಪಿ. ಜಯಚಂದ್ರ ಶೆಟ್ಟಿ, ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಉಪಸ್ಥಿತರಿದ್ದರು.

ಕಾಲೇಜು ಹಾಗೂ ಜೆಸಿಐ ವತಿಯಿಂದ ಕ್ಯಾ| ನವೀನ್‌ ಅವರನ್ನು ಸಮ್ಮಾನಿಸಲಾಯಿತು. 

ಪ್ರಭಾರ ಪ್ರಾಂಶುಪಾಲ ಚೇತನ್‌ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ನಿರ್ದೇಶಕ ಪ್ರೊ| ದೋಮ ಚಂದ್ರಶೇಖರ್‌ ಪ್ರಸ್ತಾವಿಸಿದರು. ವಾಣಿಜ್ಯ ಉಪನ್ಯಾಸಕಿ ಪೃಥ್ವಿಶ್ರೀ ಜಿ. ಶೆಟ್ಟಿ , ಕ್ಯಾ| ನವೀನ್‌ ಅವರ ಪರಿಚಯ ಮಾಡಿದರು.  ರಾಜ್ಯಶಾಸ್ತ್ರ ವಿಬಾಗ ಮುಖ್ಯಸ್ಥ ಪ್ರವೀಣ್‌ ಮೊಗವೀರ ವಂದಿಸಿದರು. ವಾಣಿಜ್ಯ ಉಪನ್ಯಾಸಕ ಶಿವರಾಜ್‌ ಸಿ. ನಿರ್ವಹಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.