ಜನಸೇರಿಸುವ ಪೈಪೋಟಿಯಲ್ಲಿ ಅಭ್ಯರ್ಥಿ ಹೈರಾಣ
Team Udayavani, Aug 28, 2018, 6:00 AM IST
ಕೋಟ: ಸಾಲಿಗ್ರಾಮದಲ್ಲಿ ಪ .ಪಂ. ಚುನಾವಣೆ ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ಚುನಾವಣೆ ಕಾವು ನಿಧಾನವಾಗಿ ಏರುತ್ತಿದೆ. ಕಾರ್ಯಕರ್ತರು, ಬೆಂಬಲಿಗರ ದೊಡ್ಡ ದಂಡಿನೊಂದಿಗೆ ಅಭ್ಯರ್ಥಿಗಳು ಮನೆ-ಮನೆ ಪ್ರಚಾರದಲ್ಲಿ ಮಗ್ನರಾಗಿದ್ದಾರೆ. ಹಾಗೆಯೇ ಪ್ರಚಾರಕ್ಕೆ ಜನ ಸೇರಿಸುವ ಭರಾಟೆಯಲ್ಲಿ ಅಭ್ಯರ್ಥಿಗಳು ಹೈರಾಣಾಗುತ್ತಿದ್ದಾರೆ.
ಇಂದು ಈ ಪಕ್ಷ – ನಾಳೆ ಆ ಪಕ್ಷ
ಮತಬೇಟಿಗೆ ತಮ್ಮ ತಂಡವನ್ನು ಸೇರಿಕೊಳ್ಳುವಂತೆ ಪ್ರತಿ ಮನೆಗಳಿಗೆ ತೆರಳಿ ಆಹ್ವಾನ ನೀಡಲಾಗುತ್ತದೆ. ಅಭಿಮಾನ, ಆಮಿಷ, ಮುಲಾಜಿಗೆ ಕಟ್ಟುಬಿದ್ದು ಒಂದು ಪಕ್ಷದ ಪರ ಪ್ರಚಾರದಲ್ಲಿ ಭಾಗವಹಿಸಿದರೆ, ಸಂಜೆ ಎದುರಾಳಿ ಪಕ್ಷದವರು ಆ ಮನೆಗೆ ಬಂದು ನಮ್ಮಿಂದ ಏನು ಅನ್ಯಾಯವಾಗಿದೆ. ಯಾಕೆ ಆ ಪಕ್ಷದವರ ಜತೆ ಗುರುತಿಸಿಕೊಂಡಿದ್ದೀರಿ. ದಯವಿಟ್ಟು ನಮ್ಮ ಜತೆಗೂ ಬನ್ನಿ ಎಂದು ಮತ್ತೆ ಆಸೆ, ಆಮಿಷ, ಒತ್ತಡಗಳನ್ನು ಹೇರುತ್ತಾರೆ. ಹೀಗಾಗಿ ಹಿಂದಿನ ದಿನ ಆ ಪಕ್ಷದ ಪರ ಪ್ರಚಾರ ನಡೆಸಿದವರು, ಮಾರನೇ ದಿನ ಮತ್ತೂಂದು ಪಕ್ಷದ ಜತೆ ಪ್ರಚಾರದಲ್ಲಿ ಭಾಗಿಯಾಗುವ ಸನ್ನಿವೇಶಗಳು ಕೆಲವು ಕಡೆ ಕಂಡುಬರುತ್ತಿದೆ. ನಾವು ಪ್ರಚಾರಕ್ಕೆ ಎರಡು ಕಡೆಯವರ ಜತೆ ಬರ್ತೇವೆ ಆದ್ರೆ ಓಟು ನಿಮಗೇ ಹಾಕ್ತೇವೆ ಎಂದು ಮೊದಲೇ ಭರವಸೆ ನೀಡಿ ಎರಡು ಪಕ್ಷಗಳಿಂದ ಲಾಭಪಡೆಯುವ ಬುದ್ಧಿವಂತರೂ ಇದ್ದಾರೆ.
ಒಟ್ಟಾರೆ ಐನೂರರಿಂದ- ಸಾವಿರ ದೊರೆಗಿನ ಹಣ, ಊಟ ಸಿಗುವುದರಿಂದ ಕೆಲವು ಮಂದಿಗೆ ಚುನಾವಣೆ ಎನ್ನುವುದು ಹಬ್ಬದಂತಾಗಿದೆ. ಇದರ ಜತೆಗೆ ಯಾವುದೇ ಆಸೆ ಆಮಿಷಗಳಿಲ್ಲದೆ ಪಕ್ಷ ಸಿದ್ಧಾಂತ, ಅಭ್ಯರ್ಥಿಯ ಮೇಲಿನ ಅಭಿಮಾನದಿಂದ ಧರ್ಮಕ್ಕೆ ಪ್ರಚಾರ ನಡೆಸುವವರೂ ಇದ್ದಾರೆ.
ಪ್ರತಿಷ್ಠೆಯ ಭರಾಟೆ; ಅಭ್ಯರ್ಥಿ ಹೈರಾಣ
ಪ.ಪಂ. ವ್ಯಾಪ್ತಿಯಲ್ಲಿ ಇದುವರೆಗೆ ಯಾವುದೇ ಪಕ್ಷಗಳು ಸಭೆ, ಸಮಾವೇಶಗಳಿಗೆ ಹೆಚ್ಚು ಒತ್ತು ನೀಡಿಲ್ಲ. ಬದಲಿಗೆ 50-60ಮಂದಿಯ ತಂಡವನ್ನು ಕಟ್ಟಿಕೊಂಡು ಮತದಾರರನ್ನು ನೇರವಾಗಿ ಭೇಟಿಯಾಗುತ್ತಿದ್ದಾರೆ. ನಮಗೆ ಹೆಚ್ಚಿನ ಜನ ಬೆಂಬಲವಿದೆ ಎನ್ನುವುದನ್ನು ತೋರಿಸಲು ಪ್ರಚಾರದ ಜನಸಂಖ್ಯೆಯೇ ಮಾನದಂಡವಾಗುತ್ತಿದೆ ಮತ್ತು ಅಕ್ಕ-ಪಕ್ಕದ ಊರುಗಳಿಂದಲು ಜನರನ್ನು ಕರೆತರಲಾಗುತ್ತದೆ.
ಪಕ್ಷೇತರವಾಗಿ ಸ್ಪರ್ಧೆ ಮಾಡಿದವರು ರಾಷ್ಟ್ರೀಯ ಪಕ್ಷಗಳಿಗಾದರೆ ಆ ಫಂಡ್- ಈ ಫಂಡ್ ಅಂತ ಬರುತ್ತದೆ. ಆದರೆ ನಮಗೆ ಯಾವ ಫಂಡು ಬರೋದಿಲ್ಲ ಎಂದು ಆರೇಳು ಮಂದಿಯ ತಂಡದೊಂದಿಗೆ ಮನೆ-ಮನೆ ತಿರುಗಾಡುತ್ತಿದ್ದಾರೆ.
ಒಟ್ಟಾರೆ ಪ್ರತಿಷ್ಠೆ, ಜನಸೇರಿಸುವ ಭರಾಟೆಯಲ್ಲಿ ಚುನಾವಣೆಗೆ ನಿಂತ ಅಭ್ಯರ್ಥಿ ಹೈರಾಣಾಗಿದ್ದು ಚುನಾ ವಣೆಯೂ ಸಾಕು ಈ ಜನಸೇರಿಸೊ ತಾಪತ್ರೆಯೂ ಸಾಕು ಎನ್ನುವ ಮಾತು ಹೆಚ್ಚಿನ ಕಡೆಗಳಲ್ಲಿ ಕೇಳಿ ಬರುತ್ತಿದೆ.
ಆಮಿಷಗಳಿಗೆ ಬಲಿಯಾಗದಿರಿ
ಈ ರೀತಿ ಚುನಾವಣೆಯ ಸಂದರ್ಭ ಅಭ್ಯರ್ಥಿಗಳು ಪ್ರಚಾರ, ವೋಟಿಗಾಗಿ ಲಕ್ಷಾಂತರ ಹಣ ಸಾಲ-ಸೂಲ ಮಾಡಿ ಖರ್ಚು ಮಾಡುವುದರಿಂದ ಜನಪ್ರತಿನಿಧಿಯಾದವನಿಗೆ ರಾಜಕೀಯದಲ್ಲಿ ಹಣ ಮಾಡಲು ಪ್ರೇರೇಪಣೆಯಾಗುತ್ತದೆ. ಆದ್ದರಿಂದ ಚುನಾವಣೆಯ ಸಂದರ್ಭ ಮತದಾರರು ಈ ರೀತಿ ಆಸೆ-ಆಮಿಷಗಳಿಗೆ ಬಲಿಯಾಗದೆ ತಮ್ಮ ಇಷ್ಟದ ಅಭ್ಯರ್ಥಿಯ ಜತೆ ಪ್ರಾಮಾಣಿಕವಾಗಿ ದುಡಿದರೆ ವ್ಯವಸ್ಥೆಯನ್ನು ಸ್ವಲ್ಪಮಟ್ಟಿಗಾದರು ಸರಿಪಡಿಸಬಹುದು ಎನ್ನುವುದು ಪ್ರಜ್ಞಾವಂತ ಮತದಾರರ ಅಭಿಪ್ರಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ