ಜನಸೇರಿಸುವ ಪೈಪೋಟಿಯಲ್ಲಿ ಅಭ್ಯರ್ಥಿ ಹೈರಾಣ​​​​​​​


Team Udayavani, Aug 28, 2018, 6:00 AM IST

saligrama-town-panchayat-election.jpg

ಕೋಟ: ಸಾಲಿಗ್ರಾಮದಲ್ಲಿ ಪ .ಪಂ. ಚುನಾವಣೆ ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ಚುನಾವಣೆ ಕಾವು ನಿಧಾನವಾಗಿ ಏರುತ್ತಿದೆ. ಕಾರ್ಯಕರ್ತರು, ಬೆಂಬಲಿಗರ ದೊಡ್ಡ  ದಂಡಿನೊಂದಿಗೆ ಅಭ್ಯರ್ಥಿಗಳು  ಮನೆ-ಮನೆ ಪ್ರಚಾರದಲ್ಲಿ ಮಗ್ನರಾಗಿದ್ದಾರೆ. ಹಾಗೆಯೇ  ಪ್ರಚಾರಕ್ಕೆ ಜನ ಸೇರಿಸುವ ಭರಾಟೆಯಲ್ಲಿ ಅಭ್ಯರ್ಥಿಗಳು ಹೈರಾಣಾಗುತ್ತಿದ್ದಾರೆ.

ಇಂದು ಈ ಪಕ್ಷ – ನಾಳೆ ಆ ಪಕ್ಷ
ಮತಬೇಟಿಗೆ ತಮ್ಮ ತಂಡವನ್ನು ಸೇರಿಕೊಳ್ಳುವಂತೆ ಪ್ರತಿ ಮನೆಗಳಿಗೆ ತೆರಳಿ  ಆಹ್ವಾನ ನೀಡಲಾಗುತ್ತದೆ. ಅಭಿಮಾನ, ಆಮಿಷ, ಮುಲಾಜಿಗೆ ಕಟ್ಟುಬಿದ್ದು  ಒಂದು ಪಕ್ಷದ ಪರ ಪ್ರಚಾರದಲ್ಲಿ ಭಾಗವಹಿಸಿದರೆ, ಸಂಜೆ ಎದುರಾಳಿ ಪಕ್ಷದವರು ಆ ಮನೆಗೆ ಬಂದು ನಮ್ಮಿಂದ ಏನು ಅನ್ಯಾಯವಾಗಿದೆ. ಯಾಕೆ ಆ ಪಕ್ಷದವರ ಜತೆ ಗುರುತಿಸಿಕೊಂಡಿದ್ದೀರಿ. ದಯವಿಟ್ಟು ನಮ್ಮ ಜತೆಗೂ ಬನ್ನಿ  ಎಂದು ಮತ್ತೆ  ಆಸೆ, ಆಮಿಷ, ಒತ್ತಡಗಳನ್ನು ಹೇರುತ್ತಾರೆ. ಹೀಗಾಗಿ ಹಿಂದಿನ ದಿನ ಆ ಪಕ್ಷದ ಪರ ಪ್ರಚಾರ ನಡೆಸಿದವರು, ಮಾರನೇ ದಿನ ಮತ್ತೂಂದು ಪಕ್ಷದ ಜತೆ  ಪ್ರಚಾರದಲ್ಲಿ ಭಾಗಿಯಾಗುವ ಸನ್ನಿವೇಶಗಳು ಕೆಲವು ಕಡೆ ಕಂಡುಬರುತ್ತಿದೆ. ನಾವು ಪ್ರಚಾರಕ್ಕೆ ಎರಡು ಕಡೆಯವರ ಜತೆ ಬರ್ತೇವೆ ಆದ್ರೆ ಓಟು ನಿಮಗೇ ಹಾಕ್ತೇವೆ ಎಂದು ಮೊದಲೇ ಭರವಸೆ ನೀಡಿ ಎರಡು ಪಕ್ಷಗಳಿಂದ ಲಾಭಪಡೆಯುವ ಬುದ್ಧಿವಂತರೂ ಇದ್ದಾರೆ.

ಒಟ್ಟಾರೆ ಐನೂರರಿಂದ- ಸಾವಿರ ದೊರೆಗಿನ ಹಣ, ಊಟ ಸಿಗುವುದರಿಂದ ಕೆಲವು ಮಂದಿಗೆ ಚುನಾವಣೆ ಎನ್ನುವುದು ಹಬ್ಬದಂತಾಗಿದೆ. ಇದರ ಜತೆಗೆ ಯಾವುದೇ ಆಸೆ ಆಮಿಷಗಳಿಲ್ಲದೆ  ಪಕ್ಷ ಸಿದ್ಧಾಂತ, ಅಭ್ಯರ್ಥಿಯ ಮೇಲಿನ ಅಭಿಮಾನದಿಂದ ಧರ್ಮಕ್ಕೆ  ಪ್ರಚಾರ ನಡೆಸುವವರೂ ಇದ್ದಾರೆ.

ಪ್ರತಿಷ್ಠೆಯ ಭರಾಟೆ; ಅಭ್ಯರ್ಥಿ ಹೈರಾಣ
ಪ.ಪಂ. ವ್ಯಾಪ್ತಿಯಲ್ಲಿ  ಇದುವರೆಗೆ ಯಾವುದೇ ಪಕ್ಷಗಳು ಸಭೆ, ಸಮಾವೇಶಗಳಿಗೆ ಹೆಚ್ಚು ಒತ್ತು ನೀಡಿಲ್ಲ. ಬದಲಿಗೆ 50-60ಮಂದಿಯ ತಂಡವನ್ನು ಕಟ್ಟಿಕೊಂಡು ಮತದಾರರನ್ನು ನೇರವಾಗಿ ಭೇಟಿಯಾಗುತ್ತಿದ್ದಾರೆ.  ನಮಗೆ ಹೆಚ್ಚಿನ ಜನ ಬೆಂಬಲವಿದೆ ಎನ್ನುವುದನ್ನು ತೋರಿಸಲು ಪ್ರಚಾರದ ಜನಸಂಖ್ಯೆಯೇ ಮಾನದಂಡವಾಗುತ್ತಿದೆ ಮತ್ತು ಅಕ್ಕ-ಪಕ್ಕದ ಊರುಗಳಿಂದಲು ಜನರನ್ನು ಕರೆತರಲಾಗುತ್ತದೆ.

ಪಕ್ಷೇತರವಾಗಿ ಸ್ಪರ್ಧೆ ಮಾಡಿದವರು ರಾಷ್ಟ್ರೀಯ ಪಕ್ಷಗಳಿಗಾದರೆ  ಆ ಫ‌ಂಡ್‌- ಈ ಫ‌ಂಡ್‌ ಅಂತ ಬರುತ್ತದೆ. ಆದರೆ ನಮಗೆ ಯಾವ ಫ‌ಂಡು ಬರೋದಿಲ್ಲ ಎಂದು ಆರೇಳು ಮಂದಿಯ ತಂಡದೊಂದಿಗೆ ಮನೆ-ಮನೆ ತಿರುಗಾಡುತ್ತಿದ್ದಾರೆ.
ಒಟ್ಟಾರೆ ಪ್ರತಿಷ್ಠೆ, ಜನಸೇರಿಸುವ ಭರಾಟೆಯಲ್ಲಿ ಚುನಾವಣೆಗೆ ನಿಂತ ಅಭ್ಯರ್ಥಿ ಹೈರಾಣಾಗಿದ್ದು ಚುನಾ ವಣೆಯೂ ಸಾಕು ಈ ಜನಸೇರಿಸೊ ತಾಪತ್ರೆಯೂ ಸಾಕು ಎನ್ನುವ ಮಾತು ಹೆಚ್ಚಿನ ಕಡೆಗಳಲ್ಲಿ ಕೇಳಿ ಬರುತ್ತಿದೆ.

ಆಮಿಷಗಳಿಗೆ ಬಲಿಯಾಗದಿರಿ 
ಈ ರೀತಿ ಚುನಾವಣೆಯ ಸಂದರ್ಭ ಅಭ್ಯರ್ಥಿಗಳು ಪ್ರಚಾರ, ವೋಟಿಗಾಗಿ  ಲಕ್ಷಾಂತರ ಹಣ ಸಾಲ-ಸೂಲ ಮಾಡಿ ಖರ್ಚು ಮಾಡುವುದರಿಂದ  ಜನಪ್ರತಿನಿಧಿಯಾದವನಿಗೆ  ರಾಜಕೀಯದಲ್ಲಿ  ಹಣ ಮಾಡಲು ಪ್ರೇರೇಪಣೆಯಾಗುತ್ತದೆ. ಆದ್ದರಿಂದ ಚುನಾವಣೆಯ ಸಂದರ್ಭ ಮತದಾರರು ಈ ರೀತಿ ಆಸೆ-ಆಮಿಷಗಳಿಗೆ ಬಲಿಯಾಗದೆ  ತಮ್ಮ ಇಷ್ಟದ ಅಭ್ಯರ್ಥಿಯ ಜತೆ ಪ್ರಾಮಾಣಿಕವಾಗಿ ದುಡಿದರೆ ವ್ಯವಸ್ಥೆಯನ್ನು ಸ್ವಲ್ಪಮಟ್ಟಿಗಾದರು ಸರಿಪಡಿಸಬಹುದು ಎನ್ನುವುದು ಪ್ರಜ್ಞಾವಂತ ಮತದಾರರ ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.