ಮೂರೇ ತಿಂಗಳಿಗೆ ರಾಡಿಯೆದ್ದ ಕೆರಾಡಿ ರಸ್ತೆ: ಮರು ಡಾಮರಿಗೆ ಆಗ್ರಹ


Team Udayavani, Aug 28, 2018, 6:00 AM IST

2708kdpp1.jpg

ಕೆರಾಡಿ: ಊರವರ ಅನೇಕ ವರ್ಷಗಳ ಬೇಡಿಕೆಗೆ ಸ್ಪಂದಿಸಿ, ತರಾತುರಿಯಲ್ಲಿ ರಸ್ತೆಗೆ ಡಾಮರೇನೋ ಆಯಿತು. ಆದರೆ ಮೂರೇ ತಿಂಗಳಿಗೆ ಡಾಮರು ಕಿತ್ತು ಹೋಗಿದೆ. 10 ಲಕ್ಷ ರೂ. ವೆಚ್ಚದಲ್ಲಿ ನಡೆದ ಕೆರಾಡಿ ರಸ್ತೆಯ ಕಾಮಗಾರಿ ಪ್ರಯೋಜನಕ್ಕಿಲ್ಲದಂತಾಗಿದೆ.
 
ಹಾಡಿಬಿರ್ಗಿ ಕ್ರಾಸ್‌ನಿಂದ ಕೆರಾಡಿಗೆ ಸುಮಾರು 366 ಮೀಟರ್‌ ಉದ್ದದ, 3.75 ಮೀಟರ್‌ ಅಗಲದ ಸಂಪರ್ಕ ರಸ್ತೆಗೆ ಕಳೆದ ಎಪ್ರಿಲ್‌ – ಮೇನಲ್ಲಿ ಡಾಮರೀಕರಣಗೊಂಡಿತ್ತು. ಮುಖ್ಯಮಂತ್ರಿಯವರ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಡಿ ಇದಕ್ಕೆ 10 ಲಕ್ಷ ರೂ. ಕೂಡ ಮಂಜೂರಾಗಿತ್ತು. ಒಂದೇ ಮಳೆಗಾಲಕ್ಕೆ ಆ ರಸ್ತೆಯೆಲ್ಲ ಕಿತ್ತು ಹೋಗಿದೆ. ಅಲ್ಲಲ್ಲಿ ಬೃಹತ್‌ ಹೊಂಡಗಳು ಎದ್ದಿವೆ. ಕೆಲವೆಡೆ ಡಾಮರೇ ಕಾಣುತ್ತಿಲ್ಲ. ವಾಹನ ಸವಾರರಂತೂ ಈ ರಸ್ತೆಯಲ್ಲಿ ಸರ್ಕಸ್‌ ಮಾಡಿ ಸಂಚರಿಸಬೇಕಾದ ಸ್ಥಿತಿ ಇದೆ. ಅದರಲ್ಲೂ 50 ಮೀ. ರಸ್ತೆಗೆ ಡಾಮರು ಹಾಕಿದ ಜಾಗ ತುಂಬಾ ಜೇಡಿಮಣ್ಣೇ ಇದ್ದು, ಅಲ್ಲಿ ಸಂಪೂರ್ಣ ಕೆಸರುಮಯವಾಗಿದೆ. 

ಸರಿಯಾದ ಚರಂಡಿಯಿಲ್ಲ
ಹಾಡಿಬಿರ್ಗಿ ಕ್ರಾಸ್‌ – ಕೆರಾಡಿ ರಸ್ತೆ ಈ ಪರಿ ಹದಗೆಡಲು ಮುಖ್ಯ ಕಾರಣ ರಸ್ತೆಯ ಎರಡೂ ಬದಿಗಳಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆಯಿಲ್ಲ. ಒಂದೆರಡು ಕಡೆಗಳಲ್ಲಿ ಮೋರಿ ಅಗತ್ಯವಿದ್ದರೂ, ಅಲ್ಲಿ ಮೋರಿ ನಿರ್ಮಿಸಲು ಮುಂದಾಗಿಲ್ಲ. 

ಮರು ಡಾಮರು ಕಾಮಗಾರಿಗೆ ಆಗ್ರಹ
ಡಾಮರೀಕರಣಗೊಂಡ ಮೂರೇ ತಿಂಗಳಲ್ಲಿ ಡಾಮರು ಕಿತ್ತುಹೋಗಿರುವುದರಿಂದ ಇದರ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡವರೇ ಮರು ಡಾಮರೀಕರಣ ಮಾಡಿಕೊಡಲಿ. ಈ ಸಂಬಂಧ ಶಾಸಕರು, ಸಂಸದರಿಗೂ ದೂರು ನೀಡಲಾಗುವುದು ಎಂದು ಸ್ಥಳೀಯರು ಹೇಳಿದ್ದಾರೆ.

ಕಳಪೆ ಕಾಮಗಾರಿ: ಆರೋಪ
ಲಕ್ಷಾಂತರ ರೂ. ಖರ್ಚು ಮಾಡಿ ರಸ್ತೆ ಡಾಮರೀಕರಣ ಮಾಡುತ್ತಾರೆ. ಅದು ಒಂದು ಮಳೆಗಾಲಕ್ಕೆ ಕೂಡ ಸರಿಯಾಗಿ ಉಪಯೋಗಕ್ಕೆ ಬರದಿದ್ದರೆ ಹೇಗೆ? 10 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಈ 366 ಮೀಟರ್‌ ಉದ್ದದ ರಸ್ತೆಯು ಕಳಪೆ ಕಾಮಗಾರಿಯಿಂದಾಗಿಯೇ ಮೂರೇ ತಿಂಗಳಿಗೆ ಹಾಳಾಗಿದೆ ಎನ್ನುವುದು ಗ್ರಾಮಸ್ಥರ ಆರೋಪವಾಗಿದೆ.  

ಮತ್ತೆ ಡಾಮರು ಕಾಮಗಾರಿಗೆ ಪ್ರಯತ್ನ
ಕೆರಾಡಿ ಮತ್ತು ಕಂಡ್ಲೂರು ರಸ್ತೆ ಕಳೆದ ಎಪ್ರಿಲ್‌ – ಮೇನಲ್ಲಿ ಡಾಮರೀಕರಣಗೊಂಡಿತ್ತು. ಅದೀಗ ಹಾಳಾಗಿ ಹೋಗಿದ್ದು, ಈ ಸಂಬಂಧ ಮುಖ್ಯ ಎಂಜಿನಿಯರ್‌ ಬಳಿ ಮಾತನಾಡಿದ್ದೇನೆ. ಗುತ್ತಿಗೆ ವಹಿಸಿಕೊಂಡವರೇ ಮತ್ತೆ ಡಾಮರೀಕರಣ ಮಾಡಿಕೊಡುತ್ತಾರೆ ಅಂತ ಹೇಳಿದ್ದಾರೆ. 
– ಬಿ.ಎಂ. ಸುಕುಮಾರ್‌ ಶೆಟ್ಟಿ, 
ಬೈಂದೂರು ಶಾಸಕರು

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.