ಹಲ್ಲೆಗೊಳಗಾದವರನ್ನು ಭೇಟಿ ಮಾಡಿದ ಕೋಟ


Team Udayavani, Aug 29, 2018, 1:05 AM IST

kota-28-8.jpg

ಕುಂದಾಪುರ: ಕಾಲ್ತೋಡಿನಲ್ಲಿ ಹಲ್ಲೆಗೊಳಗಾದವರನ್ನು ಮಂಗಳವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಘಟನೆ ಕುರಿತು ಮಾಹಿತಿ ಪಡೆದರು. ನಾವು ಈ ಹಿಂದೆ ತಾ.ಪಂ. ಸದಸ್ಯ ವಿಜಯ್‌ ಶೆಟ್ಟಿ ಅವರ ವಿರುದ್ಧ ಎಸಿಬಿಗೆ ಕೊಟ್ಟ ದೂರಿಗೆ ಸಾಕ್ಷಿದಾರರಾಗಿದ್ದೇವೆ. ಆದ್ದರಿಂದ ನಮ್ಮ ಮೇಲೆ ಹಲ್ಲೆ ನಡೆದಿದೆ. ಅದಕ್ಕೂ ಮುನ್ನ ಅವರ ಮೇಲೆ 34 ಪ್ರಕರಣಗಳು ದಾಖಲಾಗಿದ್ದಾಗ ರೌಡಿ ಶೀಟ್‌ ದಾಖಲಾಗದಂತೆ ಅವನ್ನೆಲ್ಲ ತೆಗೆಯಲು ನಮಗೆ ವಿನಂತಿ ಮಾಡಿದಂತೆ ನಿಶ್ಶರ್ತವಾಗಿ ದೂರು ವಾಪಸ್‌ ತೆಗೆದಿದ್ದೆ. ಈಗ ಕೊಲೆ ಯತ್ನ ನಡೆದಿದೆ. ನಾನು ಅಂಚೆ ಇಲಾಖೆ ನೌಕರನಾಗಿದ್ದು ಇಂತಹ ಹಲ್ಲೆಯಿಂದ ಕರ್ತವ್ಯ ಮಾಡಲು ಭಯ ಉಂಟಾಗಿದೆ ಎಂದು ಹಲ್ಲೆಗೊಳಗಾದ ಜನಾರ್ದನ ನಾಯಕ್‌ ಹೇಳಿದರು. ನಾನು ಪಂಚಾಯತ್‌ ಸದಸ್ಯೆಯಾಗಿದ್ದು ಸಾಮಾನ್ಯ ಸಭೆಗೆ ನುಗ್ಗಿ ರಾಜೀನಾಮೆಗೆ ಒತ್ತಡ ಹೇರಿದ್ದರು. ನಾವು ಬಿಜೆಪಿ ಪರ ಪ್ರಚಾರ ಮಾಡಿದ್ದಕ್ಕಾಗಿ ಇಂತಹ ಹಲ್ಲೆ ನಡೆದಿದೆ ಎಂದು ಅವರ ಪತ್ನಿ ಹೇಳಿದರು. ನಮಗೆ ಬದುಕಲು ಭೀತಿಯ ವಾತಾವರಣ ಉಂಟಾಗಿದೆ ಎಂದರು. ಬಳಿಕ ಕೋಟ ಅವರು ವೈದ್ಯಾಧಿಕಾರಿ ಜತೆ ಮಾತನಾಡಿದರು. ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ ಎಂದು ವೈದ್ಯರು ತಿಳಿಸಿದರು.

ಅನಂತರ ಸುದ್ದಿಗಾರರ ಜತೆ ಮಾತನಾಡಿದ ಕೋಟ, ಜಿಲ್ಲಾ ಎಸ್‌ಪಿ ಅವರಿಗೆ ಕಾಲಾವಕಾಶ ನೀಡುತ್ತಿದ್ದೇನೆ. ರಾಜಕಾರಣ ಬದಿಗಿಟ್ಟು ತತ್‌ಕ್ಷಣ ಆರೋಪಿಗಳ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರಗಿಸಬೇಕು. ಇಲ್ಲದಿದ್ದರೆ ಗೃಹಸಚಿವರನ್ನು ಭೇಟಿಯಾಗಿ ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಒತ್ತಾಯಿಸುತ್ತೇನೆ. ಗೃಹಮಂತ್ರಿಗಳಿಗೆ ದೂರು ಕೊಡಲು ಅವಕಾಶ ಕೊಡದೇ ಅದಕ್ಕೂ ಮುನ್ನ ಕ್ರಮ ಕೈಗೊಳ್ಳಿ. ಗಾಯಾಳುಗಳನ್ನು ಖುದ್ದು ಭೇಟಿ ಮಾಡಲಿ. ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನವರ ಅಟಾಟೋಪ ಹೆಚ್ಚಾಗಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಯುತ್ತಿರುವುದು ಖಂಡನೀಯ ಎಂದರು. ಈ ಸಂದರ್ಭ ಜಿಲ್ಲಾ ಪಂಚಾಯತ್‌ ಸದಸ್ಯ ಶಂಕರ ಪೂಜಾರಿ, ತಾ. ಪಂ. ಸದಸ್ಯ ಮಹೇಂದ್ರ ಪೂಜಾರಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ದೀಪಕ್‌ ಕುಮಾರ್‌ ಶೆಟ್ಟಿ, ಯುವಮೋರ್ಚಾ ಅಧ್ಯಕ್ಷ ಶರತ್‌ ಕುಮಾರ್‌ ಶೆಟ್ಟಿ, ಉಪಾಧ್ಯಕ್ಷ ಭದ್ರ ಶೆಟ್ಟಿ, ವಿಜಯ ಕುಮಾರ್‌ ಕಂಚಿಕಾನ ಮೊದಲಾದವರಿದ್ದರು. 

ಘಟನೆ ವಿವರ
ಕಂಬದಕೋಣೆಯಿಂದ ಎಂ.ಒ. ಹಣವನ್ನು ತರಲು ಕಂಬದಕೋಣೆಗೆ ರಿಕ್ಷಾದಲ್ಲಿ ಬಡಿಯ ಹಾಂಡ ಹಾಗೂ ಜನಾರ್ದನ ನಾಯಕ್‌ ಹೋಗುತ್ತಿದ್ದಾಗ ಹೆರಂಜಾಲು ಗ್ರಾಮದ ಹೆರಂಜಾಲು ಮೊಬೈಲ್‌ ಟವರ್‌ ಎದುರು ಆರೋಪಿ ಎಚ್‌.ವಿಜಯ ಶೆಟ್ಟಿ ಮತ್ತು ಇತರ ಮೂವರು ಕಾರನ್ನು ರಿಕ್ಷಾಗೆ ಅಡ್ಡವಾಗಿಟ್ಟು ಜನಾರ್ಧನ ನಾಯಕ್‌ ಅವರಿಗೆ ಕೈ ತುಂಡಾಗುವ ರೀತಿಯಲ್ಲಿ ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿದ್ದು ಜತೆಗಿದ್ದ ಬಡಿಯ ಹಾಂಡ ಅವರಿಗೆ  ಹೊಡೆದು ತಲೆಗೆ ಗಂಭೀರ ಗಾಯವಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ. ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಸೋಮವಾರ ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.