ಹಲ್ಲೆಗೊಳಗಾದವರನ್ನು ಭೇಟಿ ಮಾಡಿದ ಕೋಟ


Team Udayavani, Aug 29, 2018, 1:05 AM IST

kota-28-8.jpg

ಕುಂದಾಪುರ: ಕಾಲ್ತೋಡಿನಲ್ಲಿ ಹಲ್ಲೆಗೊಳಗಾದವರನ್ನು ಮಂಗಳವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಘಟನೆ ಕುರಿತು ಮಾಹಿತಿ ಪಡೆದರು. ನಾವು ಈ ಹಿಂದೆ ತಾ.ಪಂ. ಸದಸ್ಯ ವಿಜಯ್‌ ಶೆಟ್ಟಿ ಅವರ ವಿರುದ್ಧ ಎಸಿಬಿಗೆ ಕೊಟ್ಟ ದೂರಿಗೆ ಸಾಕ್ಷಿದಾರರಾಗಿದ್ದೇವೆ. ಆದ್ದರಿಂದ ನಮ್ಮ ಮೇಲೆ ಹಲ್ಲೆ ನಡೆದಿದೆ. ಅದಕ್ಕೂ ಮುನ್ನ ಅವರ ಮೇಲೆ 34 ಪ್ರಕರಣಗಳು ದಾಖಲಾಗಿದ್ದಾಗ ರೌಡಿ ಶೀಟ್‌ ದಾಖಲಾಗದಂತೆ ಅವನ್ನೆಲ್ಲ ತೆಗೆಯಲು ನಮಗೆ ವಿನಂತಿ ಮಾಡಿದಂತೆ ನಿಶ್ಶರ್ತವಾಗಿ ದೂರು ವಾಪಸ್‌ ತೆಗೆದಿದ್ದೆ. ಈಗ ಕೊಲೆ ಯತ್ನ ನಡೆದಿದೆ. ನಾನು ಅಂಚೆ ಇಲಾಖೆ ನೌಕರನಾಗಿದ್ದು ಇಂತಹ ಹಲ್ಲೆಯಿಂದ ಕರ್ತವ್ಯ ಮಾಡಲು ಭಯ ಉಂಟಾಗಿದೆ ಎಂದು ಹಲ್ಲೆಗೊಳಗಾದ ಜನಾರ್ದನ ನಾಯಕ್‌ ಹೇಳಿದರು. ನಾನು ಪಂಚಾಯತ್‌ ಸದಸ್ಯೆಯಾಗಿದ್ದು ಸಾಮಾನ್ಯ ಸಭೆಗೆ ನುಗ್ಗಿ ರಾಜೀನಾಮೆಗೆ ಒತ್ತಡ ಹೇರಿದ್ದರು. ನಾವು ಬಿಜೆಪಿ ಪರ ಪ್ರಚಾರ ಮಾಡಿದ್ದಕ್ಕಾಗಿ ಇಂತಹ ಹಲ್ಲೆ ನಡೆದಿದೆ ಎಂದು ಅವರ ಪತ್ನಿ ಹೇಳಿದರು. ನಮಗೆ ಬದುಕಲು ಭೀತಿಯ ವಾತಾವರಣ ಉಂಟಾಗಿದೆ ಎಂದರು. ಬಳಿಕ ಕೋಟ ಅವರು ವೈದ್ಯಾಧಿಕಾರಿ ಜತೆ ಮಾತನಾಡಿದರು. ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ ಎಂದು ವೈದ್ಯರು ತಿಳಿಸಿದರು.

ಅನಂತರ ಸುದ್ದಿಗಾರರ ಜತೆ ಮಾತನಾಡಿದ ಕೋಟ, ಜಿಲ್ಲಾ ಎಸ್‌ಪಿ ಅವರಿಗೆ ಕಾಲಾವಕಾಶ ನೀಡುತ್ತಿದ್ದೇನೆ. ರಾಜಕಾರಣ ಬದಿಗಿಟ್ಟು ತತ್‌ಕ್ಷಣ ಆರೋಪಿಗಳ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರಗಿಸಬೇಕು. ಇಲ್ಲದಿದ್ದರೆ ಗೃಹಸಚಿವರನ್ನು ಭೇಟಿಯಾಗಿ ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಒತ್ತಾಯಿಸುತ್ತೇನೆ. ಗೃಹಮಂತ್ರಿಗಳಿಗೆ ದೂರು ಕೊಡಲು ಅವಕಾಶ ಕೊಡದೇ ಅದಕ್ಕೂ ಮುನ್ನ ಕ್ರಮ ಕೈಗೊಳ್ಳಿ. ಗಾಯಾಳುಗಳನ್ನು ಖುದ್ದು ಭೇಟಿ ಮಾಡಲಿ. ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನವರ ಅಟಾಟೋಪ ಹೆಚ್ಚಾಗಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಯುತ್ತಿರುವುದು ಖಂಡನೀಯ ಎಂದರು. ಈ ಸಂದರ್ಭ ಜಿಲ್ಲಾ ಪಂಚಾಯತ್‌ ಸದಸ್ಯ ಶಂಕರ ಪೂಜಾರಿ, ತಾ. ಪಂ. ಸದಸ್ಯ ಮಹೇಂದ್ರ ಪೂಜಾರಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ದೀಪಕ್‌ ಕುಮಾರ್‌ ಶೆಟ್ಟಿ, ಯುವಮೋರ್ಚಾ ಅಧ್ಯಕ್ಷ ಶರತ್‌ ಕುಮಾರ್‌ ಶೆಟ್ಟಿ, ಉಪಾಧ್ಯಕ್ಷ ಭದ್ರ ಶೆಟ್ಟಿ, ವಿಜಯ ಕುಮಾರ್‌ ಕಂಚಿಕಾನ ಮೊದಲಾದವರಿದ್ದರು. 

ಘಟನೆ ವಿವರ
ಕಂಬದಕೋಣೆಯಿಂದ ಎಂ.ಒ. ಹಣವನ್ನು ತರಲು ಕಂಬದಕೋಣೆಗೆ ರಿಕ್ಷಾದಲ್ಲಿ ಬಡಿಯ ಹಾಂಡ ಹಾಗೂ ಜನಾರ್ದನ ನಾಯಕ್‌ ಹೋಗುತ್ತಿದ್ದಾಗ ಹೆರಂಜಾಲು ಗ್ರಾಮದ ಹೆರಂಜಾಲು ಮೊಬೈಲ್‌ ಟವರ್‌ ಎದುರು ಆರೋಪಿ ಎಚ್‌.ವಿಜಯ ಶೆಟ್ಟಿ ಮತ್ತು ಇತರ ಮೂವರು ಕಾರನ್ನು ರಿಕ್ಷಾಗೆ ಅಡ್ಡವಾಗಿಟ್ಟು ಜನಾರ್ಧನ ನಾಯಕ್‌ ಅವರಿಗೆ ಕೈ ತುಂಡಾಗುವ ರೀತಿಯಲ್ಲಿ ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿದ್ದು ಜತೆಗಿದ್ದ ಬಡಿಯ ಹಾಂಡ ಅವರಿಗೆ  ಹೊಡೆದು ತಲೆಗೆ ಗಂಭೀರ ಗಾಯವಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ. ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಸೋಮವಾರ ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.