ಗಂಗೊಳ್ಳಿ: ಬ್ರೇಕ್‌ ವಾಟರ್‌ ತುದಿಯಲ್ಲಿಲ್ಲ ವಿದ್ಯುತ್‌ ದೀಪ


Team Udayavani, Aug 29, 2018, 1:20 AM IST

gangolli-boat-28-8.jpg

ವಿಶೇಷ ವರದಿ – ಗಂಗೊಳ್ಳಿ: ಕೋಡಿ, ಗಂಗೊಳ್ಳಿಯ ಬ್ರೇಕ್‌ ವಾಟರ್‌ ಕಾಮಗಾರಿ ಮುಗಿಯುವ ಹಂತದಲ್ಲಿದೆ. ಆದರೆ ಬ್ರೇಕ್‌ವಾಟರ್‌ ತುದಿಯಲ್ಲಿ ಯಾವುದೇ ಬೆಳಕಿನ ವ್ಯವಸ್ಥೆ ಅಳವಡಿಸಲು ಕ್ರಮ ಕೈಗೊಳ್ಳದಿರುವುದರಿಂದ ರಾತ್ರಿ ವೇಳೆ ಬೋಟುಗಳ ಸಂಚಾರಕ್ಕೆ ಅಡ್ಡಿಯಾಗುವ ಆತಂಕ ಮೀನುಗಾರರದ್ದಾಗಿದೆ. ಕೋಡಿ ಹಾಗೂ ಗಂಗೊಳ್ಳಿಯ ಸಮುದ್ರ ತೀರದಲ್ಲಿ ಕಡಲ್ಕೊರೆತದ ಶಾಶ್ವತ ತಡೆಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಮಂಜೂರಾದ 102 ಕೋ.ರೂ. ವೆಚ್ಚದ ಬ್ರೇಕ್‌ ವಾಟರ್‌ ಕಾಮಗಾರಿ 2015ರಲ್ಲಿ ಆರಂಭಗೊಂಡಿತ್ತು. ಕೋಡಿಯಲ್ಲಿ 900 ಮೀಟರ್‌ ಹಾಗೂ ಗಂಗೊಳ್ಳಿಯ ಕಡಲಿನಲ್ಲಿ 700 ಮೀಟರ್‌ ಉದ್ದದ ಬ್ರೇಕ್‌ ವಾಟರ್‌ ನಿರ್ಮಾಣ ಕಾಮಗಾರಿ ಈ ತಿಂಗಳಾಂತ್ಯಕ್ಕೆ ಮುಗಿಯುವ ಸಾಧ್ಯತೆಯಿದೆ.

ಗಂಗೊಳ್ಳಿ ಬಂದರಿನಿಂದ 338 ಟ್ರಾಲರ್‌, 36 ಪರ್ಸಿನ್‌, 1,945 ಗಿಲ್‌ನೆಟ್‌ ಹಾಗೂ ಮಾಟುಬಲೆ, 1,456 ಯಾಂತ್ರೀಕೃತವಲ್ಲದ ದೋಣಿಗಳು ಹಾಗೂ ಬೀಡುಬಲೆ, 23 ಪಾತಿ ದೋಣಿಗಳು ಸೇರಿ ಒಟ್ಟು 3,798 ಬೋಟುಗಳು ಮೀನುಗಾರಿಕೆಗೆ ತೆರಳುತ್ತವೆ. ಈಗ ಸದ್ಯಕ್ಕೆ ಮೀನುಗಾರರೇ ಗಂಗೊಳ್ಳಿಯ ಬ್ರೇಕ್‌ ವಾಟರ್‌ ಕೊನೆಯಲ್ಲಿ ತಾತ್ಕಾಲಿಕವಾಗಿ ಸಣ್ಣ ವಿದ್ಯುತ್‌ ದೀಪವೊಂದನ್ನು ಅಳವಡಿಸಿದ್ದಾರೆ. ಆದರೆ ಇದರಿಂದೇನೂ ಪ್ರಯೋಜನವಾಗುತ್ತಿಲ್ಲ. ಮತ್ತೆ ಇದು ಹೆಚ್ಚು ದಿನ ಬಾಳಿಕೆಯು ಬರುವುದಿಲ್ಲ. ಇದಕ್ಕೆ ಶಾಶ್ವತ ಪರಿಹಾರವಾಗಿ ಈ ಬ್ರೇಕ್‌ ವಾಟರ್‌ ಕಾಮಗಾರಿ ನಿರ್ವಹಿಸುವವರೇ ಬೆಳಕಿನ ವ್ಯವಸ್ಥೆಯನ್ನು ಅಳವಡಿಸಲಿ ಅಥವಾ ಮೀನುಗಾರಿಕಾ ಮತ್ತು ಬಂದರು ಇಲಾಖೆ ವಿದ್ಯುತ್‌ ದೀಪ ಅಳವಡಿಸಲಿ ಎಂದು ಇಲ್ಲಿನ ಮೀನುಗಾರರು ಒತ್ತಾಯಿಸಿದ್ದಾರೆ.


ಬ್ರೇಕ್‌ ತುದಿಯಲ್ಲಿ ಈಗಿರುವ ತಾತ್ಕಾಲಿಕ ಸಣ್ಣ ವಿದ್ಯುತ್‌ ದೀಪ.

ಸಮಸ್ಯೆಯೇನು?
ಆದರೆ ಇದರಿಂದ ಒಂದು ಸಮಸ್ಯೆ ಪರಿಹಾರವಾದರೆ ಮತ್ತೂಂದು ಸಮಸ್ಯೆ ಉದ್ಭವವಾದಂತಾಗಿದೆ. ರಾತ್ರಿ ವೇಳೆ ಮೀನುಗಾರಿಕೆ ಮುಗಿಸಿ ವಾಪಸ್ಸು ಗಂಗೊಳ್ಳಿ ಬಂದರು ಕಡೆಗೆ ಬೋಟುಗಳು ಬರುವಾಗ ಈ ಬ್ರೇಕ್‌ ವಾಟರ್‌ ಇರುವುದು ಕಾಣಿಸುವುದಿಲ್ಲ. ಇದರಿಂದ ಬೋಟುಗಳು ಬ್ರೇಕ್‌ ವಾಟರ್‌ಗೆ ಢಿಕ್ಕಿ ಹೊಡೆಯುವ ಸಾಧ್ಯತೆಯಿರುತ್ತದೆ. ಇದರಿಂದ ಬೋಟುಗಳ ಅವಘಢ ಸಂಭವಿಸುವ ಸಾಧ್ಯತೆಯಿರುತ್ತದೆ.

ಅವಘಡಕ್ಕೆ ಯಾರು ಹೊಣೆ?
ರಾತ್ರಿ ವೇಳೆ ಮೀನುಗಾರಿಕೆ ಮುಗಿಸಿ ಬಂದರಿಗೆ ಬರುವಾಗ ಈ ಬ್ರೇಕ್‌ ವಾಟರ್‌ ತುದಿ ಕಾಣುವುದಿಲ್ಲ. ಆಗ ಅದಕ್ಕೆ ಬೋಟುಗಳು ಢಿಕ್ಕಿ ಹೊಡೆಯುವ ಸಾಧ್ಯತೆಯಿರುತ್ತದೆ. ಏನಾದರೂ ಅವಘಢ ಸಂಭವಿಸಿದರೆ ಯಾರು ಹೊಣೆ.
– ರಮೇಶ್‌ ಕುಂದರ್‌, ಅಧ್ಯಕ್ಷರು, ಗಂಗೊಳ್ಳಿ ಪರ್ಸಿನ್‌ ಮೀನುಗಾರರ ಸ್ವಸಹಾಯ ಸಂಘ

ವಹಿಸಿಕೊಂಡವರೇ ಮಾಡಿಕೊಡಬೇಕು
ಬ್ರೇಕ್‌ ವಾಟರ್‌ ಕಾಮಗಾರಿ ವಹಿಸಿಕೊಂಡವರೇ ಅಲ್ಲಿ ಬೆಳಕಿನ ವ್ಯವಸ್ಥೆಯನ್ನು ಮಾಡಿಕೊಡಬೇಕಿದೆ. ಈ ಸಂಬಂಧ ಬಂದರು ಮತ್ತು ಮೀನುಗಾರಿಕಾ ಇಲಾಖೆ ಗುತ್ತಿಗೆದಾರರಿಗೆ ಸೂಚನೆ ನೀಡಬೇಕಿದೆ. ಬ್ರೇಕ್‌ವಾಟರ್‌ ತುದಿಯಲ್ಲಿ ಅಗತ್ಯವಾಗಿ ವಿದ್ಯುತ್‌ ದೀಪ ಅಳವಡಿಸಬೇಕಿದೆ. 
– ಅಂಜನಾದೇವಿ, ಗಂಗೊಳ್ಳಿ ಬಂದರಿನ ಮೀನುಗಾರಿಕಾ ಸಹಾಯಕ ನಿರ್ದೇಶಕಿ 

ಮೀನುಗಾರಿಕಾ ಇಲಾಖೆಯ ಜವಾಬ್ದಾರಿ
ನಮಗೆ ಬ್ರೇಕ್‌ ವಾಟರ್‌ ನಿರ್ಮಾಣ ಯೋಜನೆ ಸಿದ್ಧಪಡಿಸುವ ಜವಾಬ್ದಾರಿ ಮಾತ್ರ ಇರುವುದು. ವಿದ್ಯುತ್‌ ದೀಪ ಅಳವಡಿಕೆ, ಬೆಳಕಿನ ವ್ಯವಸ್ಥೆ ಮಾಡಿಸುವುದು ಮೀನುಗಾರಿಕಾ ಇಲಾಖೆಗೆ ಸಂಬಂಧಪಟ್ಟದ್ದು. ಅವರೇ ಪ್ರಸ್ತಾವನೆ ಕಳುಹಿಸಿಕೊಡಲಿ.
– ನಾಗರಾಜ್‌, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಎಂಜಿನಿಯರ್‌

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.