ಪೊಸ್ರಾಲು: ಪ್ರಯಾಣಿಕರ ತಂಗುದಾಣಕ್ಕೆ ಕಾಯಕಲ್ಪ
Team Udayavani, Aug 29, 2018, 1:30 AM IST
ಬೆಳ್ಮಣ್: ಮುಂಡ್ಕೂರು ಗ್ರಾ.ಪಂ.ನ ಪೊಸ್ರಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಮಹಾದ್ವಾರದ ಬಳಿ ಪ್ರಯಾಣಿಕರ ಅನುಕೂಲತೆಗಾಗಿ ನಿರ್ಮಿಸಿದ ಪ್ರಯಾಣಿಕರ ತಂಗುದಾಣ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಈ ಬಗ್ಗೆ ಉದಯವಾಣಿ ಜನಪರ ಕಾಳಜಿವರದಿ ಪ್ರಕಟಿಸಿದ ಬೆನ್ನಲ್ಲೇ ತಂಗುದಾಣದ ರಿಪೇರಿ ಕಾರ್ಯ ನಡೆದಿದೆ. ತಂಗುದಾಣವನ್ನು ನಿರ್ಮಿಸಿದ್ದ ಶ್ರೀಧರ ಸನಿಲ್ ರಿಪೇರಿ ನಡೆಸಿದ್ದು, ಈ ಮೂಲಕ ತಂಗುದಾಣಕ್ಕೆ ಕಾಯಕಲ್ಪ ಒದಗಿದಂತಾಗಿದೆ. ಪೊಸ್ರಾಲು ದೇಗುಲದ ತಿರುವಿನ ಬಳಿಯಲ್ಲಿ 18 ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಪ್ರಯಾಣಿಕರ ತಂಗುದಾಣ ಪಾಳು ಬಿದ್ದಿದ್ದು ಕೂಡಲೇ ದುರಸ್ತಿಪಡಿಸಿ ಸಾರ್ವಜನಿಕರ ಸೇವೆಗೆ ಒದಗಿಸಿಕೊಡಬೇಕೆಂದಿ ಈ ಭಾಗದ ನೂರಾರು ಜನರ ಬೇಡಿಕೆಯಾಗಿತ್ತು.
ರವಿವಾರ ಪ್ರಯಾಣಿಕರ ತಂಗುದಾಣವನ್ನು ದುರಸ್ತಿಪಡಿಸಿದ ಬಳಿಕ ಪತ್ರಿಕೆಯ ಜತೆ ಶ್ರೀಧರ್ ಅವರು ಮಾತನಾಡಿ, ನನ್ನ ಹಿರಿಯ ಸಹೋದರನ ಸ್ಮರಣಾರ್ಥ ತಂಗುದಾಣವನ್ನು ಈ ಹಿಂದೆ ನಿರ್ಮಿಸಲಾಗಿತ್ತು. ಗ್ರಾ.ಪಂ.ಗೆ ತಂಗುದಾಣವನ್ನು ಈವರೆಗೆ ಹಸ್ತಾಂತರಿಸಿಲ್ಲ. ಸದ್ಯಕ್ಕೆ ನನ್ನ ಸ್ವಂತ ಖರ್ಚಿನಲ್ಲಿ ರಿಪೇರಿ ನಡೆಸಿದ್ದೇನೆ. ಮುಂದೆಯೂ ಕೂಡ ಈ ತಂಗುದಾಣದ ಜವಾಬ್ದಾರಿ ನನ್ನದೇ ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ