ಸಾಲಿಗ್ರಾಮ ಪ.ಪಂ.: ಶಾಂತಿಯುತ ಮತದಾನ


Team Udayavani, Sep 1, 2018, 2:00 AM IST

saligrama-election-31-8.jpg

ಕೋಟ: ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ 16 ವಾರ್ಡ್‌ಗಳಲ್ಲಿ ಶುಕ್ರವಾರ ಶಾಂತಿಯುತ ಮತದಾನ ನಡೆಯಿತು. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯ ಜನರು ಮತಕೇಂದ್ರಕ್ಕೆ ಆಗಮಿಸಿದರು. ಆದರೆ 9ರಿಂದ 1ಗಂಟೆಯ ತನಕ ಅಷ್ಟೇನು ಜನಸಂದಣಿ ಇರಲಿಲ್ಲ ಹಾಗೂ ಹಲವು ಮತಗಟ್ಟೆಗಳು ಬಿಕೋ ಎನ್ನುತ್ತಿದ್ದವು. ಮಧ್ಯಾಹ್ನ 3 ಗಂಟೆವರೆಗೆ 62.53ರಷ್ಟು ಮತಚಲಾವಣೆಯಾಗಿತ್ತು. ಇಲ್ಲಿನ ಖಾಸಗಿ ಹಿ.ಪ್ರಾ. ಶಾಲೆ ಪಾರಂಪಳ್ಳಿ-ಪಡುಕರೆ, ಗ್ರಾಮಕರಣಿಕರ ಕಚೇರಿ ಸಾಲಿಗ್ರಾಮ, ಸ.ಹಿ.ಪ್ರಾ. ಶಾಲೆ ಚಿತ್ರಪಾಡಿ, ಗಜಾನನ ಹಿ.ಪ್ರಾ.ಶಾಲೆ ತೋಡ್ಕಟ್ಟು, ಸ.ಹಿ.ಪ್ರಾ.ಶಾಲೆ ಕೋಟ, ನ್ಯೂ ಕಾರ್ಕಡ ಶಾಲೆ, ಗ್ರಂಥಾಲಯ ಕಟ್ಟಡ ಕಾರ್ಕಡ ಕಡಿದ ಹೆದ್ದಾರಿ, ಜಿ.ಸ.ಹಿ.ಪ್ರಾ.ಶಾಲೆ ಕಾರ್ಕಡ, ಪಿ.ಜಿ.ಹಿ. ಪ್ರಾ. ಶಾಲೆ ಪಾತಳಬೆಟ್ಟು ಗುಂಡ್ಮಿ, ಸ.ಪ್ರೌಢಶಾಲೆ ಗುಂಡ್ಮಿಯ ಮತಕೇಂದ್ರಗಳಲ್ಲಿ 16 ವಾರ್ಡ್‌ಗಳ ಮತದಾನ ನಡೆಯಿತು. ರಿಟರ್ನಿಂಗ್‌ ಆಫೀಸರ್‌ಗಳಾಗಿ ಲಲಿತಾ ಬಾೖ, ಲೋಕೇಶ್‌ ಕಾರ್ಯನಿರ್ವಹಿಸಿದರು.


ಕಾರ್ಕಡ ಶಾಲೆಯ ಮತಗಟ್ಟೆಯಲ್ಲಿ106 ವರ್ಷದ ಲಚ್ಚಿ ದೇವಾಡಿಗ ಮತದಾನ ಮಾಡಿದರು.

ಮತದಾನಕ್ಕೆ ಹಿರಿಯರು-ವೃದ್ಧರಿಗೆ ಆಸಕ್ತಿ
80-90 ವರ್ಷದ ವೃದ್ಧರು, ಅನಾರೋಗ್ಯ ಪೀಡಿತರು ಕೂಡ ಮನೆಯವರ ಸಹಾಯದಿಂದ ಆಸಕ್ತಿಯಿಂದ ಮತಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಿದ ದೃಶ್ಯ ಎಲ್ಲ ಕಡೆಗಳಲ್ಲಿ ಕಂಡು ಬಂತು. ಕಾರ್ತಟ್ಟು ವಾರ್ಡ್‌ನಲ್ಲಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ 90 ವರ್ಷದ ರುದ್ರಮ್ಮ ಶೆಡ್ತಿ ಆ್ಯಂಬುಲೆನ್ಸ್‌ನಲ್ಲಿ ಬಂದು ಮತಚಲಾಯಿಸಿ ಪುನಃ ಆಸ್ಪತ್ರೆಗೆ ದಾಖಲಾಗಿದ್ದು ವಿಶೇಷವಾಗಿತ್ತು.

ಶಾಂತ ವಾತಾವರಣ
ಹೆಚ್ಚಿನ ಮತಕೇಂದ್ರದಲ್ಲಿ ಎದುರಾಳಿಗಳು ಹಾಗೂ ಕಾರ್ಯಕರ್ತರು ಒಟ್ಟಾಗಿ ನಿಂತು ತಮಾಷೆಯಾಗಿ ಶಾಂತಿಯುತವಾಗಿ ಮಾತುಕತೆಯಲ್ಲಿ ತೊಡಗಿದ್ದ ದೃಶ್ಯ ಕಂಡು ಬಂತು. ಕೆಲವು ಕಡೆ ಮತದಾರರಿಗೆ ವಾಹನ ವ್ಯವಸ್ಥೆ ಮಾಡಲಾಗಿತ್ತು.

ಪೊಲೀಸ್‌ ಬಂದೋಬಸ್ತ್
ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀಕಾಂತ್‌ ಮತಗಟ್ಟೆಗಳಿಗೆ ತೆರಳಿ ಕಾನೂನು ಸುವ್ಯವಸ್ಥೆಯ ಉಸ್ತುವಾರಿ ನೋಡಿಕೊಂಡರು. ಡಿವೈ.ಎಸ್‌.ಪಿ. ಕುಮಾರಸ್ವಾಮಿ ಮೇಲುಸ್ತುವಾರಿ ಹೊಣೆ ನಿರ್ವಹಿಸಿದರು. 15ಮಂದಿ ಮುಖ್ಯ ಪೇದೆಗಳು, ಒಂದು ಡಿ.ಆರ್‌. ವ್ಯಾನ್‌, 17ಪೇದೆ, ಓರ್ವ ಮುಖ್ಯ ಪೇದೆ ಕೋಟ ಠಾಣಾಧಿಕಾರಿ ನರಸಿಂಹ ಶೆಟ್ಟಿಯವರ ನೇತೃತ್ವದಲ್ಲಿ ಕರ್ತವ್ಯ ನಿರ್ವಹಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.