ಚರಂಡಿ ವ್ಯವಸ್ಥೆ : ದುರ್ವಾಸನೆಗೆ ಹೈರಾಣಾದ ಗೋಧಿಹಿತ್ಲು ನಿವಾಸಿಗರು


Team Udayavani, Aug 30, 2018, 6:00 AM IST

2808kdpp5.jpg

ಗಂಗೊಳ್ಳಿ: ಚರಂಡಿಯಿದೆ. ಆದರೆ ಮಳೆ ನೀರು ಮಾತ್ರ ಹರಿದು ಹೋಗುತ್ತಿಲ್ಲ. ಚರಂಡಿಯಲ್ಲೇ ಕಸ, ಕಡ್ಡಿ, ಪ್ಲಾಸ್ಟಿಕ್‌ ತ್ಯಾಜ್ಯ ಶೇಖರಣೆಗೊಂಡು ಕೊಳಚೆ ನೀರು ಸಂಗ್ರಹವಾಗಿದೆ. ಇದರಿಂದ ನಿತ್ಯ ಅನೇಕ ದಿನಗಳಿಂದ ಗಂಗೊಳ್ಳಿಯ ಮ್ಯಾಂಗನೀಸ್‌ ರಸ್ತೆಯಲ್ಲಿರುವ ಗೋಧಿಹಿತ್ಲು ನಿವಾಸಿಗಳು ನರಕಯಾತನೆ ಅನುಭವಿಸುತ್ತಿದ್ದಾರೆ. 

ಮ್ಯಾಂಗನೀಸ್‌ ರಸ್ತೆಯಲ್ಲಿರುವ ಗೋಧಿಹಿತ್ಲುವಿನಲ್ಲಿ ಸುಮಾರು 25ರಿಂದ 30 ಮನೆಗಳಿವೆ. ಮಳೆ ನೀರು ಹೋಗಲು ಚರಂಡಿಯಿದೆ. ಆದರೆ ಈ ಚರಂಡಿಯನ್ನು ಸರಿಯಾಗಿ ನಿರ್ವಹಿಸದ ಹಿನ್ನೆಲೆಯಲ್ಲಿ ಹಾಗೂ ಮಳೆಗಾಲಕ್ಕೂ ಮುನ್ನ ಸ್ವತ್ಛ ಮಾಡದ ಹಿನ್ನೆಲೆಯಲ್ಲಿ ನೀರು ಹರಿದು ಹೋಗುತ್ತಿಲ್ಲ. ಗೋಧಿಹಿತ್ಲು ಪರಿಸರದಲ್ಲಿಯೇ ಶೇಖರಣೆಯಾಗಿ ಕೊಳಚೆಯಾಗಿದೆ. 

ದುರ್ವಾಸನೆಗೆಂದು ಮುಕ್ತಿ
ಚರಂಡಿಯಲ್ಲಿ ಕೊಳಚೆ ನೀರು ನಿಂತು ಈ ಗೋಧಿಹಿತ್ಲು ಪರಿಸರವಿಡೀ ದುರ್ವಾಸನೆ ಬರುತ್ತದೆ. ಇದರಿಂದ ದಿನವಿಡೀ ಇಲ್ಲಿನ ನಿವಾಸಿಗಳು ಮನೆ, ಕಿಟಕಿ ಬಾಗಿಲು ಮುಚ್ಚಿಕೊಂಡೇ ಇರಬೇಕಾದ ದುಃಸ್ಥಿತಿಯಿದೆ. ಬಾಗಿಲು ಮುಚ್ಚಿದರೂ ಈ ದುರ್ವಾಸನೆ ಮಾತ್ರ ಹೋಗುವುದಿಲ್ಲ ಎನ್ನುವುದು ಸ್ಥಳೀಯರ ಅಳಲು. 

ಈ ಸಂಬಂಧ ಹಿಂದೆ ಆಗಿನ ಶಾಸಕರಿಗೂ ಮನವಿ ಕೊಟ್ಟಿದ್ದರು. ಆ ಬಳಿಕ ಚುನಾವಣೆ ಬಂದಿದ್ದರಿಂದ ಇದಕ್ಕೆ ಪರಿಹಾರ ಕಂಡಿಲ್ಲ. ಈಗಿನ ಶಾಸಕರಾದರೂ ನಮ್ಮ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಿ ಎಂಬುದು ಇಲ್ಲಿನ ನಿವಾಸಿಗಳ ಆಗ್ರಹವಾಗಿದೆ.

ಸಾಂಕ್ರಾಮಿಕ ರೋಗ ಭೀತಿ
ಚರಂಡಿಯಲ್ಲಿ ಕೊಳಚೆ ನೀರು ನಿಂತು ಈ ಗೋಧಿಹಿತ್ಲು ಪ್ರದೇಶ ಸೊಳ್ಳೆ ಉತ್ಪತ್ತಿ ಕೇಂದ್ರವಾಗಿ ಮಾರ್ಪಡಾಗುತ್ತಿದೆ. ಇದರಿಂದ ಇಲ್ಲಿನ ವಾಸಿಗರಲ್ಲಿ ಸಾಂಕ್ರಾಮಿಕ ರೋಗ ಭೀತಿ ಆವರಿಸಿದೆ. 

ಪರಿಶೀಲಿಸಿ ಕ್ರಮ
ಈ ಸಂಬಂಧ ಸ್ಥಳೀಯರು ಕೊಟ್ಟ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಅಲ್ಲಿಗೆ ತೆರಳಿ ಪರಿಶೀಲನೆ ನಡೆಸುತ್ತೇನೆ. ತತ್‌ಕ್ಷಣ ಅಲ್ಲಿನ ಜನರ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು. 
– ಮಾಧವ,ಗಂಗೊಳ್ಳಿ ಪಿಡಿಒ

ನಿತ್ಯ ಸಂಕಷ್ಟ
ಊಟ ಮಾಡಲು ಕುಳಿತರೆ ಹೊರಗಿನಿಂದ ಕೆಟ್ಟ ವಾಸನೆ ಬರುತ್ತದೆ. ಊಟವು ಸರಿಯಾಗಿ ಮಾಡುವುದಕ್ಕೆ ಆಗುವುದಿಲ್ಲ. 1 ವರ್ಷದ ಮಗುವಿಗೆ ಹುಷಾರಿಲ್ಲದೆ ರಾತೋರಾತ್ರಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಯಿತು. ಮನೆಯಲ್ಲಿರುವ ಎಲ್ಲ ಮಕ್ಕಳಿಗೂ ಹುಷಾರಿಲ್ಲ. ದಿನಾ ಈ ದುರ್ವಾಸನೆಯಿಂದ ಸಂಕಷ್ಟ ಅನುಭವಿಸುತ್ತಿದ್ದೇವೆ. 
– ಸಾವಿತ್ರಿ, ಅರ್ಚನಾ,ಸುಧಾ,ಸ್ಥಳೀಯರು 

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.