ಕುವೈಟ್‌ ಸೆರೆಯಲ್ಲಿ ಬಸ್ರುರೂ ವ್ಯಕ್ತಿ: ಇನ್ನೆರಡು ದಿನದಲ್ಲಿ ಸ್ಪಷ್ಟ


Team Udayavani, Aug 30, 2018, 11:01 AM IST

basruru.jpg

ಕುಂದಾಪುರ: ಊರಿನಿಂದ ಮರಳುವಾಗ ಬೇರೆಯವರ ಮಾತ್ರೆ ಪಾರ್ಸೆಲನ್ನು ತೆಗೆದುಕೊಂಡು ಹೋದರೆಂಬ ಕಾರಣಕ್ಕೆ ಕುವೈಟ್‌ ಜೈಲು ಸೇರಿರುವ ಕುಂದಾಪುರ ತಾಲೂಕು ಬಸ್ರುರೂ ನಿವಾಸಿ ಶಂಕರ ಪೂಜಾರಿ (40) ಅವರನ್ನು ಭಾರತಕ್ಕೆ ಕರೆತರುವ ಸಂಬಂಧ ಉಡುಪಿ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಪ್ರಯತ್ನಗಳು ನಡೆಯುತ್ತಿವೆ.

ಶಂಕರ ಪೂಜಾರಿ ಅವರು 3 ತಿಂಗಳಿನಿಂದ ಜೈಲಿನಲ್ಲಿದ್ದು, ಯಾವ ಕಾರಣಕ್ಕೆ ಬಂಧನಕ್ಕೊಳಗಾಗಿದ್ದಾರೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿಗಳು ಲಭಿಸಿಲ್ಲ. ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಶಂಕರ ಪೂಜಾರಿ ಅವರ ಪತ್ನಿ ಜ್ಯೋತಿ ಅವರನ್ನು ಬುಧವಾರವೂ ಕಚೇರಿಗೆ ಕರೆಸಿ ಪೂರಕ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.
ಮಾನವ ಹಕ್ಕುಗಳ ಪ್ರತಿಷ್ಠಾನದ ವತಿಯಿಂದಲೂ ಮಾಹಿತಿ ಕಲೆ ಹಾಕುತ್ತಿದ್ದು, ಅವರು ಕೂಡ ಕುವೈಟ್‌ನಲ್ಲಿರುವ ರಾಯಭಾರ ಕಚೇರಿಯ ಸಂಪರ್ಕದಲ್ಲಿದ್ದಾರೆ.

ವಿದೇಶಾಂಗ ಇಲಾಖೆ ಸ್ಪಂದನೆ
ಈ ನಡುವೆ ಸಂಸದರ ಮೂಲಕ ವಿದೇಶಾಂಗ ಇಲಾಖೆಗೂ ಅವರ ಕುಟುಂಬ ಮನವಿ ಮಾಡಿದ್ದು, ಅದಕ್ಕೆ ಪ್ರತಿಯಾಗಿ ವಿದೇಶಾಂಗ ಇಲಾಖೆಯಿಂದ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಪತ್ರ ಬಂದಿದೆ. ಶಂಕರ ಪೂಜಾರಿ ನಾಪತ್ತೆ ಸಂಬಂಧ ವಿದೇಶಾಂಗ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ. ಪತ್ತೆಗೆ ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ ಎನ್ನುವ ಪತ್ರ ರವಾನೆಯಾಗಿದೆ.

ಕುವೈಟ್‌ನ ಕಂಪೆನಿಯೊಂದರಲ್ಲಿ 4 ವರ್ಷದಿಂದ ಕೆಲಸ ಮಾಡುತ್ತಿದ್ದ ಶಂಕರ ಪೂಜಾರಿ ಅವರು 3 ತಿಂಗಳ ಹಿಂದೆ ಊರಿಗೆ ಬಂದು ವಾಪಸಾಗುವಾಗ ಪರಿಚಯಸ್ಥರೊಬ್ಬರು ಕುವೈಟ್‌ನಲ್ಲಿ ರುವ ಅವರ ಸಂಬಂಧಿಗೆ ನೀಡುವಂತೆ ಪಾರ್ಸೆಲ್‌ ಒಂದನ್ನು ಕೊಟ್ಟಿದ್ದರು. ಕುವೈಟ್‌ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಪೊಲೀಸರಿಗೆ ಮಾತ್ರೆಗಳ 
ಕಟ್ಟು ಪತ್ತೆಯಾದ್ದರಿಂದ ವಿಚಾರಣೆ ನಡೆಸಿದ್ದು, ಸಹೋದ್ಯೋಗಿಯ ವಿನಂತಿಯಂತೆ ಕುವೈಟ್‌ನಲ್ಲಿರುವ ಮಹಿಳೆಗೆ ನೀಡಲು ತಂದಿರುವುದಾಗಿ ಶಂಕರ ಪೂಜಾರಿ ಹೇಳಿದ್ದರು. 

ಪಾರ್ಸೆಲ್‌ ಕೊಟ್ಟ ವ್ಯಕ್ತಿಯಿಂದ ಮಾಹಿತಿ ಬಯಸಿದಾಗ ಆತ ಇದಕ್ಕೂ ತನಗೂ ಸಂಬಂಧವಿಲ್ಲ ಎಂದು ಹೇಳಿದ್ದರಿಂದ ಶಂಕರ ಪೂಜಾರಿ ಅವರನ್ನು  ಪೊಲೀಸರು ಬಂಧಿನದಲ್ಲಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಮಂಗಳವಾರದಿಂದಲೇ ನಾವು ಭಾರತೀಯ ವಿದೇಶಾಂಗ ಇಲಾಖೆ ಅಧಿಕಾರಿಗಳು ಹಾಗೂ ಕುವೈಟ್‌ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದೇವೆ.  ಶಂಕರ ಪೂಜಾರಿ ಕುರಿತು ಸರಿಯಾದ  ಮಾಹಿತಿ ಸಿಗದ ಕಾರಣ ಸಮಸ್ಯೆಯಾಗಿದ್ದು, ಆದರೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಇನ್ನೆರಡು ದಿನಗಳಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ. 
ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌,ಉಡುಪಿ ಡಿಸಿ

ನನ್ನ ಪತಿಯನ್ನು ವಾಪಸು ಭಾರತಕ್ಕೆ ಕರೆ ತರುವ ಸಂಬಂಧ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಜಿಲ್ಲಾಡಳಿತ ಹೇಳಿದ್ದು, ಅದೇ ಭರವಸೆಯಲ್ಲಿ ನಾವೆಲ್ಲ ಇದ್ದೇವೆ.
 ಜ್ಯೋತಿ (ಶಂಕರ ಪೂಜಾರಿ ಅವರ ಪತ್ನಿ)

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.