ಸಾಲಿಗ್ರಾಮದಲ್ಲೂ ಮತದಾನಕ್ಕೆ ಸಿದ್ಧತೆ


Team Udayavani, Aug 31, 2018, 6:30 AM IST

3008kota1e.jpg

ಕೋಟ: ಸಾಲಿಗ್ರಾಮ ಪ.ಪಂ.ನ ಸ್ಥಳೀಯಾಡಳಿತ ಸಂಸ್ಥೆಗೆ ಆ.31ರಂದು ಚುನಾವಣೆ ನಡೆಯಲಿದೆ.  ಇಲ್ಲಿನ  16 ವಾರ್ಡ್‌ಗಳಲ್ಲಿ ಬಿಜೆಪಿಯ 16, ಕಾಂಗ್ರೆಸ್‌ 16,  ಜೆಡಿಎಸ್‌ 6, ಪಕ್ಷೇತರ 7, ಸಿ.ಪಿ.ಎಂ.ನಿಂದ ಓರ್ವ ಸಹಿತ  ಒಟ್ಟು 46 ಮಂದಿ ಕಣದಲ್ಲಿದ್ದಾರೆ. 12,869 ಮಂದಿ ಮತದಾರರು ಇವರ ಸೋಲು-ಗೆಲುವು ತೀರ್ಮಾನಿಸಲಿ ದ್ದಾರೆ. ಮತದಾನ ಕೇಂದ್ರಕ್ಕೆ ಗುರುವಾರ ಅಪರಾಹ್ನ 3 ಗಂಟೆಗೆ ಪೊಲೀಸರು, ಬೂತ್‌ನ ಅಧಿಕಾರಗಳ ತಂಡ ಆಗಮಿಸಿ ಪೂರ್ವ ಸಿದ್ಧತೆಯಲ್ಲಿ ತೊಡಗಿತು.

ಎರಡು ಸೂಕ್ಷ್ಮ, ಎರಡು ಅತೀ ಸೂಕ್ಷ್ಮ ಮತಗಟ್ಟೆ
ಇಲ್ಲಿನ ತೋಡ್ಕಟ್ಟು ಹಾಗೂ ಪಡುಕರೆ ವಾರ್ಡ್‌ ನ ಮತಗಟ್ಟೆಯಲ್ಲಿ  ಈ ಹಿಂದೆ ಸಣ್ಣ-ಪುಟ್ಟ ಗಲಾಟೆಗಳು ನಡೆದಿದ್ದು ಇದನ್ನು ಅತಿ ಸೂಕ್ಷ್ಮಮತಗಟ್ಟೆ, ಪೇಟೆ ಗೆಂಡೆಕೆರೆ ವಾರ್ಡ್‌ ಮತಗಟ್ಟೆಗಳನ್ನು ಮುಂಜಾಗ್ರತೆಗಾಗಿ  ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ.

ಪೊಲೀಸ್‌ ಬಂದೋಬಸ್ತ್ 
ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀಕಾಂತ್‌ ಕಾನೂನು ಸುವ್ಯವಸ್ಥೆಯ ಉಸ್ತುವಾರಿ ನೋಡಿಕೊಳ್ಳಲಿದ್ದು, ಡಿವೈ.ಎಸ್‌.ಎಪಿ. ಕುಮಾರಸ್ವಾಮಿ ಮೇಲುಸ್ತುವಾರಿ ನೋಡಿ ಕೊಳ್ಳಲಿದ್ದಾರೆ. 15 ಮಂದಿ ಮುಖ್ಯ ಪೇದೆಗಳು, ಒಂದು ಡಿ.ಆರ್‌. ವ್ಯಾನ್‌, 17 ಪೇದೆ, ಓರ್ವ ಮುಖ್ಯ ಪೇದೆ ಕೋಟ ಠಾಣಾಧಿಕಾರಿ ನರಸಿಂಹ  ಶೆಟ್ಟಿಯವರ ನೇತೃತ್ವದಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.

80 ಮಂದಿ ಚುನಾವಣಾ 
ಸಿಬಂದಿ ಕರ್ತವ್ಯದಲ್ಲಿ 

ವಿಧಾನಸಭಾ ಚುನಾವಣೆಯ ರೀತಿ ಯಲ್ಲಿ ಈ ಬಾರಿ  ಯಾವುದೇ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿಲ್ಲ.  ಪ್ರತಿ ಬೂತ್‌ಗೆ 5ಮಂದಿ ಸಿಬಂದಿಗಳಂತೆ ಒಟ್ಟು  16 ಬೂತ್‌ಗಳಲ್ಲಿ  80ಮಂದಿ ಚುನಾವಣಾ ಕರ್ತವ್ಯ ನಿರ್ವಹಿಸಲಿದ್ದಾರೆ.

ವಿಶೇಷ ಚುನಾವಣಾಧಿಕಾರಿಗಳ ಸಭೆ 
ಪ.ಪಂ.ನ ವಿಶೇಷ ಚುನಾವಣಾಧಿಕಾರಿ ಜ್ಯೋತಿ ಅವರು ಬುಧವಾರ ಸಾಲಿಗ್ರಾಮದಲ್ಲಿ ಉಡುಪಿ ತಹಶೀಲ್ದಾರ್‌ 
ಪ್ರದೀಪ್‌ ಕುಡೇìಕರ್‌,ಬ್ರಹ್ಮಾವರ ತಹಶೀಲ್ದಾರ್‌ ಅನಿಲ್‌, ಪ.ಪಂ. ಮುಖ್ಯಾಧಿಕಾರಿ ಶ್ರೀಪಾದ್‌ ಪುರೋಹಿತ್‌ 
ಮತ್ತು ರಿಟರ್ನಿಂಗ್‌ ಅಧಿಕಾರಿಗಳು,ಸಹಾಯಕ ರಿಟರ್ನಿಂಗ್‌ ಅಧಿಕಾರಿಗಳು, ನೋಡೆಲ್‌ ಅಧಿಕಾರಿಗಳು, ಪ್ಲೈಯಿಂಗ್‌  ಸ್ಕ್ವಾಡ್‌ನ‌ವರೊಂದಿಗೆ ಸಭೆ ನಡೆಸಿ 16 ವಾರ್ಡ್‌ಗಳ ಮತಗಟ್ಟೆಯಲ್ಲಿರುವ ಸೌಲಭ್ಯಗಳು, ಸಮಸ್ಯೆಗಳನ್ನು  ಯಾವ ರೀತಿ ಪರಿಹರಿಸಲಾಗಿದೆ ಎನ್ನುವ ಕುರಿತು ಮಾಹಿತಿ ಪಡೆದರು.ಸಾಲಿಗ್ರಾಮ ಚಿಪ್ಲಪಾಡಿ ಶಾಲೆಯ ಮಾರಿಗುಡಿ ಮತಗಟ್ಟೆಯಲ್ಲಿ  ಮತದಾನಕ್ಕೆ ಅಧಿಕಾರಿಗಳು ತಯಾರಿ ನಡೆಸುತ್ತಿರುವುದು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.