ಅಭ್ಯರ್ಥಿಗಳ ಭವಿಷ್ಯ ಭದ್ರತಾ ಕೊಠಡಿಯಲ್ಲಿ


Team Udayavani, Sep 2, 2018, 6:00 AM IST

0109kdlm8ph2.jpg

ಕುಂದಾಪುರ: ಪುರಸಭೆಗೆ ನಡೆದ ಚುನಾವಣೆಯಲ್ಲಿ ಬಳಸಿದ ಇವಿಎಂಗಳನ್ನು ಮಿನಿ ವಿಧಾನಸೌಧದ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ. ಈ ಮೂಲಕ ಕಣಕ್ಕಿಳಿದ 74 ಅಭ್ಯರ್ಥಿಗಳ ಪೈಕಿ ಗೆಲ್ಲುವ 23 ಅಭ್ಯರ್ಥಿಗಳು ಯಾರು ಎನ್ನುವುದು ಪ್ರಕಟವಾಗಲಷ್ಟೇ ಬಾಕಿ ಇವೆ. ಸದ್ಯ ರಾಜಕೀಯ ಪಕ್ಷಗಳ ಪಡಸಾಲೆಯಲ್ಲಿ ಯಾರಿಗೆ ಎಷ್ಟು ಮತ ಗಳಿಕೆಯಾಗಬಹುದು ಎಂಬ ಲೆಕ್ಕಾಚಾರ ನಡೆಯುತ್ತಿದೆ. ಸೋಮವಾರವೇ ಈ ಎಲ್ಲ ಕಾತರಗಳಿಗೆ ತೆರೆ ಬೀಳಲಿವೆ.
  
ರಾಜಕೀಯ ನಡೆ
23 ವಾರ್ಡ್‌ಗಳಿಗೆ 74 ಅಭ್ಯರ್ಥಿ ಗಳಿದ್ದರು. ಬಿಜೆಪಿ ಹಾಗೂ ಕಾಂಗ್ರೆಸ್‌ ಮಾತ್ರ  ಎಲ್ಲ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ ಇತರ ಪಕ್ಷಗಳಾದ ಸಿಪಿಐಎಂ, ಬಿಎಸ್‌ಪಿ, ಜೆಡಿಎಸ್‌ ಎಲ್ಲ ಕ್ಷೇತ್ರಗಳ ಕಡೆಗೆ ಆಸಕ್ತಿ ತೋರಿಸಲಿಲ್ಲ. ಜೆಡಿಯು ಅಭ್ಯರ್ಥಿಗಳನ್ನೇ ಹಾಕಲಿಲ್ಲ. ಜೆಡಿಎಸ್‌ ಅಂತಿಮವಾಗಿ ಕಣದಿಂದ ಹಿಂದೆ ಸರಿದದ್ದೂ ನಡೆಯಿತು. ಕಳೆದ ಅವಧಿಯಲ್ಲಿ ಬಿಜೆಪಿ ಅಧಿಕ ಸ್ಥಾನ ಗಳಿಸಿದ್ದರೂ ಅಧಿಕಾರ ನಡೆಸಲು ಬೇಕಾದಷ್ಟು ಬಹುಮತ ಹೊಂದಿರಲಿಲ್ಲ. ಆಗ ನಾಲ್ವರು ಕಾಂಗ್ರೆಸ್‌ನಿಂದ ಹೊರಬಂದು ಬಿಜೆಪಿಗೆ ಬೆಂಬಲ ಕೊಟ್ಟಿದ್ದರು. ಹಾಗೆ ಕಾಂಗ್ರೆಸ್‌ನಿಂದ ಬಂದವರಿಗೇ ಅಧಿಕಾರದ ಮಣೆ ಕೊಡಲಾಗಿತ್ತು. ಈ ಬಾರಿ ನಮಗೇ ಬಹುಮತ ಎನ್ನುತ್ತಾರೆ ಕಾಂಗ್ರೆಸ್‌ ಹಾಗೂ ಬಿಜೆಪಿಯವರು. 

ಖಾರ್ವಿಕೇರಿಯಲ್ಲಿ ಹೆಚ್ಚು 
ಖಾರ್ವಿಕೇರಿ ವಾರ್ಡ್‌ನಲ್ಲಿ ಅತಿ ಹೆಚ್ಚು ಮತದಾನವಾಗಿದೆ. ಇಲ್ಲಿ ಶೇ.82.45ರಷ್ಟು ಮತದಾನವಾಗಿದ್ದು ಸಂಜೆ ಮತದಾನ ಅವಧಿ ಮುಗಿದ ಮೇಲೂ ಸರಣಿ ಇದ್ದುದರಿಂದ ಅವರಿಗೆ ಚೀಟಿ ಕೊಟ್ಟು ಮತದಾನ ಮಾಡಿಸಲಾಗಿತ್ತು. ಅತ್ಯಂತ ಹೆಚ್ಚು ಮಹಿಳಾ ಮತದಾರರು ಅಧಿಕಾರ ಚಲಾಯಿಸಿದ್ದು ಕೂಡಾ ಇಲ್ಲಿಯೇ. ಶೇ. 85.07ರಷ್ಟು ಪ್ರಮಾಣದಲ್ಲಿದೆ. ಅನಂತರದ ಅಧಿಕ ಮತದಾನ ನಡೆದ ಕೇಂದ್ರ ಮದ್ದುಗುಡ್ಡೆ ವಾರ್ಡ್‌.ಇಲ್ಲಿ ಶೇ 80.56ರಷ್ಟು ಮತದಾನವಾಗಿದೆ. ಅತಿ ಕಡಿಮೆ ಮತದಾನ ಎಂದರೆ ಜೆಎಲ್‌ಬಿ ವಾರ್ಡ್‌ನಲ್ಲಿ ಶೇ. 66.18ರಷ್ಟು ಮಾತ್ರ ಮತ ಚಲಾವಣೆಯಾಗಿದೆ. ಮಹಿಳಾ ಮತದಾರರ ಪ್ರಮಾಣ ಕೂಡಾ ಇಲ್ಲಿಯೇ ದಾಖಲಾದ್ದು. ಇಲ್ಲಿ ಶೇ.65.51 ಮಹಿಳಾ ಮತದಾರರು ಮತ ಹಾಕಿದ್ದಾರೆ. ಅತಿಹೆಚ್ಚು ಪುರುಷ ಮತದಾರರು ಮತದಾನ ಮಾಡಿದ ವಾರ್ಡ್‌ ಎಂದರೆ ಮದ್ದುಗುಡ್ಡೆ ವಾರ್ಡ್‌. ಶೇ.82.68ರಷ್ಟು. ಅತಿ ಕಡಿಮೆ ಎಂದರೆಚರ್ಚ್‌ರೋಡ್‌ವಾರ್ಡ್‌ನಲ್ಲಿ ಶೇ.66.51 ಮತದಾನ ಮಾಡಿದ್ದಾರೆ.

ಭದ್ರತೆ
ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಭದ್ರತಾ ಕೊಠಡಿಗೆ ಭದ್ರತೆ ಒದಗಿಸಲಾಗಿದೆ. ಇದಕ್ಕಾಗಿ 1 ಎಸ್‌ಐ, 2 ಎಎಸ್‌ಐ, 3 ಹೆಡ್‌ಕಾನ್ಸ್‌ ಟೇಬಲ್‌, 4 ಸಿಬಂದಿ, 1 ಕೆಎಸ್‌ಆರ್‌ಪಿ ಬೆಟಾಲಿಯನ್‌ರನ್ನು ನಿಯೋಜಿಸಲಾಗಿದೆ. ಹಗಲು 10 ಮಂದಿ, ರಾತ್ರಿ 10 ಮಂದಿ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. 

ಮತದಾನ ವಿವರ
23 ಮತಗಟ್ಟೆಗಳಲ್ಲಿ  ಒಟ್ಟು 23,302 ಮತದಾರರು ಮತ ಚಲಾಯಿಸಬೇಕಿತ್ತು. ಉತ್ತಮ ಪ್ರಮಾಣದಲ್ಲಿ ಮತದಾನ ನಡೆದಿದ್ದು ಶೇ.73.81 ಮತದಾನವಾಗಿದೆ. 17,200 ಮಂದಿ ಮತ ಚಲಾಯಿಸಿದ್ದಾರೆ. 11,292 ಪುರುಷ ಮತದಾರರ ಪೈಕಿ 8,331 ಮಂದಿ ಮತ ಚಲಾಯಿಸಿದ್ದು 12,010 ಮಹಿಳಾ ಮತದಾರರ ಪೈಕಿ 8,869 ಮಂದಿ ಮತದಾನ ಮಾಡಿದ್ದಾರೆ. ಈ ಮೂಲಕ ಮತದಾನದಲ್ಲೂ ಮಹಿಳೆಯರೇ ಮುಂದು ಎಂದು ಸಾಬೀತಾಗಿದೆ. 

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.