ದಶಕ ಕಳೆದರೂ ಮಂಜೂರಾಗಿಲ್ಲ 2ನೇ ಹಂತದ ಕಾಮಗಾರಿ


Team Udayavani, Sep 8, 2018, 6:00 AM IST

0709kdpp1a.jpg

ಗಂಗೊಳ್ಳಿ: ಕುಂದಾಪುರದ ಪ್ರಮುಖ ಮೀನುಗಾರಿಕಾ ನೆಲೆಯಾದ ಗಂಗೊಳ್ಳಿಯ ಬಂದರಿನ ಕಟ್ಟಡದ ಶೀಟು ಹಾರಿ ಹೋಗಿ, ಜೆಟ್ಟಿಯ ಸ್ಲ್ಯಾಬ್ ಕುಸಿದು ತಿಂಗಳುಗಳೇ ಕಳೆದಿವೆ. ಯಾಂತ್ರೀಕೃತ ಬೋಟುಗಳು, ದೋಣಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಎರಡನೇ ಹಂತದ ಕಾಮಗಾರಿಯ ಅವಶ್ಯಕತೆಯಿದೆ. ಈ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಕೆಯಾದರೂ ಕೂಡ ಇದನ್ನು ಸರಿಪಡಿಸಬೇಕಾದವರೂ ಮಾತ್ರ ಇನ್ನೂ ಇತ್ತ ಗಮನವೇ ಕೊಟ್ಟಿಲ್ಲ. 

ಮೀನುಗಾರಿಕಾ ರಜೆಯ ಅವಧಿ ಮುಗಿದು ಈಗಷ್ಟೇ ಹೊಸ ಮೀನುಗಾರಿಕಾ ಋತು ಆರಂಭವಾಗಿದೆ. ಆದರೆ ಅದಕ್ಕೂ ಮುನ್ನ ಆಗಬೇಕಾದ ಕಾಮಗಾರಿ ಮಾತ್ರ ಇನ್ನೂ ಆಗಿಲ್ಲ.

ಎರಡನೇ ಹಂತದ ಕಾಮಗಾರಿ ಎಂದು?
ಈ ಬಂದರು 2007 ರಲ್ಲಿ ಸುಮಾರು 9.21 ಕೋ.ರೂ. ವೆಚ್ಚದಲ್ಲಿ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದೆ. ಆದರೆ ಈಗ ವರ್ಷದಿಂದ ವರ್ಷಕ್ಕೆ ಯಾಂತ್ರೀಕೃತ ಬೋಟುಗಳು, ದೋಣಿಗಳು, ಹಾಗೂ ಇದರ ಗಾತ್ರ ಕೂಡ ಹೆಚ್ಚಾಗಿರುವುದರಿಂದ ಧಕ್ಕೆಯಲ್ಲಿ ಇದರ ನಿಲುಗಡೆಗೆ ಜಾಗದ ಕೊರತೆಯಿದೆ. ಇದರಿಂದ ಶೀಘ್ರ ಎರಡನೇ ಹಂತದ ಕಾಮಗಾರಿಯ ಅಗತ್ಯತೆಯಿದೆ. 

ಮೊದಲ ಹಂತದ ಕಾಮಗಾರಿ ನಡೆದು ಸುಮಾರು 12 ವರ್ಷಗಳು ಕಳೆದರೂ, ಎರಡನೇ ಹಂತದ ಕಾಮಗಾರಿ ಮಾತ್ರ ಇನ್ನೂ ಆರಂಭಗೊಂಡಿಲ್ಲ. ಇನ್ನಾದರೂ ಇತ್ತ ಜನಪ್ರತಿನಿಧಿಗಳು, ಅಧಿಕಾರಿಗಳು ಇತ್ತ ಗಮನಹರಿಸಲಿ. ಉಡುಪಿ ಜಿಲ್ಲೆಯ ಎರಡನೇ ದೊಡ್ಡ ಮೀನುಗಾರಿಕಾ ಬಂದರಿನ ಅಭಿವೃದ್ಧಿಗೆ ಮುಂದಾಗಲಿ. 

ಗಂಗೊಳ್ಳಿ ಬಂದರಿನ ಪ್ರಮುಖ ಸಮಸ್ಯೆಗಳು
ಈ ಸಮಸ್ಯೆಗಳ ಪಟ್ಟಿಯಲ್ಲಿರುವ ಹೆಚ್ಚಿನೆಲ್ಲದರ ಕುರಿತಾಗಿ ಈಗಾಗಲೇ ಗಂಗೊಳ್ಳಿಯ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರು ಸರಕಾರಕ್ಕೆ ಕರಡು ಸಿದ್ದಪಡಿಸಿ, ಪ್ರಸ್ತಾವನೆ ಕಳುಹಿಸಿದ್ದಾರೆ. ಆದರೆ ಇದ್ಯಾವುದಕ್ಕೂ ಮಂಜೂರಾತಿ ಸಿಕ್ಕಿಲ್ಲ. 

– ಜೆಟ್ಟಿಯ ಹಲವೆಡೆ ಸ್ಲ್ಯಾಬ್ಗಳು ಕುಸಿದಿದ್ದು, ತ್ವರಿತ ಕಾಮಗಾರಿ ಆಗಬೇಕಾಗಿದೆ.
– ಬಂದರು ವಿಸ್ತರಣೆಗೆ ಎರಡನೇ ಹಂತದ ಕಾಮಗಾರಿ ಆಗಬೇಕಾಗಿದೆ.
– ಬ್ರೇಕ್‌ವಾಟರ್‌ 300 ಮೀಟರ್‌ ವಿಸ್ತರಣೆ.
– ಕಿರು ಬಂದರು ಮುಂಭಾಗದಲ್ಲಿ ಹೂಳೆತ್ತದಿರುವುದರಿಂದ ನಿರ್ಮಾಣವಾಗಿ 3 ವರ್ಷ ಕಳೆದರೂ ಉಪಯೋಗಕ್ಕೆ ಬಂದಿಲ್ಲ. 
– ಬಂದರು ಇಲಾಖೆಯ ಸುಪರ್ದಿಯಲ್ಲಿರುವ ಮ್ಯಾಂಗನೀಸ್‌ ವಾರ್ಫ್‌ ಜಾಗವನ್ನು ಮೀನುಗಾರಿಕಾ ಇಲಾಖೆಗೆ ಹಸ್ತಾಂತರಿಸಿದರೆ, ಬೋಟುಗಳ ನಿಲುಗಡೆಗೆ ಪ್ರಯೋಜನವಾಗಲಿದೆ.
–  ಬಂದರಿಗೆ ತುರ್ತಾಗಿ ಹೈಮಾಸ್ಕ್ ದೀಪ
–  ಮೀನುಗಾರ ಮಹಿಳೆಯರಿಗೆ ವಿಶ್ರಾಂತಿ ಗೃಹದ ಅವಶ್ಯಕತೆಯಿದೆ.
– ಈಗ ಬಂದರು ಪ್ರದೇಶದಲ್ಲಿ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ.
– ಬಂದರಿನಲ್ಲಿ ಪ್ರತ್ಯೇಕ ಪುರುಷ ಹಾಗೂ ಮಹಿಳೆಯರ ಶೌಚಾಲಯ ನಿರ್ಮಾಣದ ಅಗತ್ಯವಿದೆ.
– ಭದ್ರತೆ ದೃಷ್ಟಿಯಿಂದ ಬಂದರು ಸುತ್ತ ಆವರಣ ಗೋಡೆಯ ಅವಶ್ಯಕವಿದೆ.
– ವಾಹನ ನಿಲುಗಡೆಗೆ ಪ್ರತ್ಯೇಕ ನಿಲ್ದಾಣದ ವ್ಯವಸ್ಥೆ.
– ಮೀನುಗಾರಿಕಾ ಬಂದರಿನ ಜೆಟ್ಟಿಯ ಭಾಗದಲ್ಲಿ ಹೂಳೆತ್ತಬೇಕಿದೆ. 
– ಎಕ್ಸ್‌ಪೋರ್ಟ್‌ ಇನ್‌ಸ್ಪೆಕ್ಷನ್‌ ಮಾನದಂಡದಂತೆ ಚರಂಡಿ ವ್ಯವಸ್ಥೆಯಾಗಬೇಕಿದೆ.

ಇಲಾಖೆ, ಸಚಿವರಿಗೆ ಮನವಿ
ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ

ಗಂಗೊಳ್ಳಿ ಬಂದರಿನಲ್ಲಿರುವ ಕಟ್ಟಡದ ಮಾಡಿನ ದುರಸ್ತಿ, ಸ್ಲಾéಬ್‌ ಕಾಮಗಾರಿ ಹಾಗೂ ಬಂದರಿನ ಇನ್ನಿತರ ಅಭಿವೃದ್ಧಿ ಕಾಮಗಾರಿ ಕುರಿತಂತೆ ಈಗಾಗಲೇ ಕರಡು ಸಿದ್ಧಪಡಿಸಿ ಇಲಾಖೆಗೆ ಕಳುಹಿಸಲಾಗಿದೆ. ಮೀನುಗಾರಿಕಾ ಸಚಿವರಿಗೂ ಮನವಿ ಸಲ್ಲಿಸಲಾಗಿದೆ. 
– ಅಂಜನಾದೇವಿ, ಮೀನುಗಾರಿಕಾ ಸಹಾಯಕ ನಿರ್ದೇಶಕಿ, ಗಂಗೊಳ್ಳಿ ಬಂದರು

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.