ನನಸಾಗುವ ಹಂತದಲ್ಲಿ ವಾರಾಹಿ ಎಡದಂಡೆ ಕಾಲುವೆ ವಿಸ್ತರಣೆ ಯೋಜನೆ


Team Udayavani, Sep 9, 2018, 6:00 AM IST

0709kota8e.jpg

ಕೋಟ: ಇಲ್ಲಿನ ಹೋಬಳಿಯ ಜನರಿಗೆ ಕೃಷಿಯೇ ಮೂಲಕಸುಬು. ಆದರೆ ಬೇಸಗೆಯಲ್ಲಿ ಎದುರಾಗುವ ನೀರಿನ ಅಭಾವ ಕೃಷಿ ಚಟುವಟಿಕೆಗೆ ಸಮಸ್ಯೆಯಾಗಿದೆ. ಇದೀಗ ಬಹು ನಿರೀಕ್ಷೆಯ ವಾರಾಹಿ ಎಡದಂಡೆ ಏತ ನೀರಾವರಿ ಕಾಲುವೆ ವಿಸ್ತರಣೆ ಕಾಮಗಾರಿಯ ಹಂತಕ್ಕೆ ತಲುಪಿದ್ದು ಎಲ್ಲಾ ಅಂದುಕೊಂಡಂತೆಯೇ ನಡೆದರೆ 2 ವರ್ಷದಲ್ಲಿ ಕಾಮಗಾರಿ ನಡೆದು ನೀರಿನ ಬವಣೆ ತಪ್ಪಲಿದೆ. 
 
ಏನಿದು ಯೋಜನೆ ? 
ವಾರಾಹಿ ಕಾಮಗಾರಿ ಆರಂಭದ ದಿನಗಳಿಂದ ಶಿರಿಯಾರ, ಯಡ್ತಾಡಿ, ಆವರ್ಸೆ, ಬಿಲ್ಲಾಡಿ, ಕಾವಡಿ, ಅಚ್ಲಾಡಿ ಸೇರಿದಂತೆ ಸುತ್ತಲಿನ ಹತ್ತಾರು ಗ್ರಾಮಗಳ ರೈತರು ತಮ್ಮ ಜಮೀನುಗಳಿಗೆ ವಾರಾಹಿ ನೀರು ಹರಿಯಲಿದೆ ಎನ್ನುವ ಆಸೆಯಲ್ಲಿದ್ದರು. ಆದರೆ 35ವರ್ಷ ಕಳೆದರೂ ಎಡದಂಡೆ ಯೋಜನೆಯ ಮೂಲಕ ಈ ಭಾಗದ ರೈತರಿಗೆ ನೀರು ದೊರೆಯಲಿಲ್ಲ. ಇದೀಗ ಹೈಕಾಡಿ ಸಮೀಪ ಕಾಸಾಡಿಯಿಂದ ಶಿರೂರು ಮೂಕೈì ತನಕ ನೇರ  ಕಾಲುವೆ ಹಾಗೂ ಶಿರೂರು ಮೂಕೈìಯಿಂದ ಎರಡು ಕಾಲುವೆಗಳನ್ನು ನಿರ್ಮಿಸಿ ರೈತರ ಜಮೀನಿಗೆ ನೀರುಣಿಸುವ ಮತ್ತೂಂದು  ಯೋಜನೆ ರೂಪಿಸಲಾಗಿದ್ದು  ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ 2018 ಜ. 1ರಂದು ಬ್ರಹ್ಮಾವರಕ್ಕೆ ಆಗಮಿಸಿದ ಸಂದರ್ಭ ಕಾಮಗಾರಿಗೆ ಚಾಲನೆ ನೀಡಿದ್ದರು. ಈಗ  276.66 ಕೋಟಿ ರೂ. ಟೆಂಡರ್‌ ಪ್ರಕ್ರಿಯೆ ಮುಗಿದು  ಅಂತಿಮ ಹಂತದ ಸರ್ವೆಗೆ ತಯಾರಿ ನಡೆದಿದೆ.  ನವೆಂಬರ್‌ನಲ್ಲಿ ಕಾಮಗಾರಿ ಆರಂಭಗೊಳ್ಳುವ ನಿರೀಕ್ಷೆ ಇದೆ. ಕಾಮಗಾರಿ ಪೂರ್ಣಗೊಳ್ಳಲು 18 ತಿಂಗಳ ಗಡುವು ನೀಡಲಾಗಿದೆ.

ಅಂತರ್ಜಲ ವೃದ್ಧಿಗೆ ಸಹಕಾರಿ
ಕಾಲುವೆ ಮೂಲಕ ಹರಿದು ಬರುವ ನೀರು ಕೃಷಿಭೂಮಿ, ನದಿ, ಹಳ್ಳಗಳನ್ನು ಸೇರುವುದರಿಂದ ಭೂಮಿಯಲ್ಲಿ  ನೀರಿನ ಒರತೆ ಹೆಚ್ಚಲಿದೆ. ನದಿ, ಹಳ್ಳಗಳಿಗೆ ಒಡ್ಡುಗಳನ್ನು ನಿರ್ಮಿಸಿ ನೀರನ್ನು ಸಂಗ್ರಹಿಸಿದಲ್ಲಿ  ಅಂತರ್ಜಲ ವೃದ್ಧಿಗೂ ಸಹಕಾರಿಯಾಗಲಿದೆ.  ಕುಡಿಯುವ ನೀರಿನ ಸಮಸ್ಯೆಯೂ ಪರಿಹಾರವಾಗಲಿದೆ.  11ತಿಂಗಳು ಕಾಲುವೆ ಮೂಲಕ ನೀರು ಹರಿಯಲಿದ್ದು, ಹತ್ತಿರದ ಹೊಳೆ, ತೊರೆಗಳಿಗೆ ಸಂಪರ್ಕ ಕಲ್ಪಿಸಲಾಗುತ್ತದೆ.

ರೈತರು ಸಹಕಾರ ನೀಡಿದರೆ ಕಾರ್ಯ ಸುಲಭ 
ಶೀಘ್ರದಲ್ಲಿ  ಕಾಲುವೆ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆ  ಆರಂಭಗೊಳ್ಳಲಿದೆ. ಯೋಜನೆಯ ಯಶಸ್ವಿಗಾಗಿ ರೈತರ ಸಹಕಾರ ಅಗತ್ಯವಿದೆ. ಭೂಸ್ವಾಧೀನ ಪ್ರಕ್ರಿಯೆಗೆ ಕೋಟ್ಯಂರ ರೂ. ಮೀಸಲಿರಿಸಿದ್ದು  ಭೂಮಿ ಕಳೆದುಕೊಳ್ಳುವ ರೈತರಿಗೆ ಸೂಕ್ತ ಪರಿಹಾರ ಸಿಗಲಿದೆ ಹಾಗೂ ಸಾವಿರಾರು ಎಕರೆ ಪ್ರದೇಶಕ್ಕೆ ನೀರಿನಾಸರೆ ದೊರೆಯುವುದರಿಂದ ಭೂಮಿಯ ಬೆಲೆ ಹೆಚ್ಚಳವಾಗುತ್ತದೆ. ಹಲವು ದಶಕಗಳ ತನಕ ಈ ಭಾಗದಲ್ಲಿ  ನೀರಿನ ಸಮಸ್ಯೆ ಎದುರಾಗುವುದಿಲ್ಲ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ಸಹಕಾರ ನೀಡಬೇಕು ಎನ್ನುವುದು ಹೋರಾಟಗಾರರ  ಅಭಿಪ್ರಾಯ. 

ಸಾವಿರಾರು ಹೆಕ್ಟೇರ್‌ ಕೃಷಿಭೂಮಿಗೆ ನೀರಿನಾಸರೆ
ಹೈಕಾಡಿ ಸಮೀಪ ಕಾಸಾಡಿಯಿಂದ ಶಿರೂರುಮೂಕೈ ತನಕ ಒಂದು ಕಾಲುವೆ ಹಾಗೂ ಅಲ್ಲಿಂದ 9 ಕಿ.ಮೀ. ಹಾಗೂ 26 ಕಿ.ಮೀ.ಉದ್ದದ ಎರಡು ಪ್ರತ್ಯೇಕ ಕಾಲುವೆಗಳು ಜಿಲ್ಲಾ ಮುಖ್ಯ ರಸ್ತೆಯ ಪಕ್ಕದಲ್ಲಿ  ಹಾದು ಹೋಗಲಿದೆ 9 ಕಿ.ಮೀ. ಉದ್ದದ ಕಾಲುವೆ ಶಿರೂರುಮೂಕೈì, ಹೆಗ್ಗುಂಜೆ, ಯಡ್ತಾಡಿ ಸಂಪರ್ಕಿಸಲಿದ್ದು, 26 ಕಿ.ಮೀ. ಕಾಲುವೆ ಆವರ್ಸೆ, ವಂಡಾರು, ಬಿಲ್ಲಾಡಿ, ಶಿರಿಯಾರ, ಯಡ್ತಾಡಿ, ಕಾವಡಿ, ಅಚಾÉಡಿ ರೈಲ್ವೇ ಸೇತುವೆ ವರೆಗೆ ನಿರ್ಮಾಣಗೊಳ್ಳಲಿದೆ. ಈ ಮೂಲಕ 26 ಕಿ.ಮೀ. ನಾಲೆ 1921 ಹೆಕ್ಟೇರ್‌( 4744 ಎಕ್ರೆ)  ಪ್ರದೇಶಕ್ಕೆ  ಹಾಗೂ 9 ಕಿ.ಮೀ. ನಾಲೆ 802 ಹೆಕ್ಟೇರ್‌(1980 ಎಕ್ರೆಗೆ) ಒಟ್ಟು 6724 ಕೃಷಿಭೂಮಿಗೆ ನೀರುಣಿಸುವ ಯೋಜನೆ ಇದಾಗಿದೆ.

ಅಂತಿಮ ಸರ್ವೆ 
ವಾರಾಹಿ  ಎಡದಂಡೆ ಏತನೀರಾವರಿ ಯೋಜನೆಗೆ ಈಗಾಗಲೇ ಪೂರ್ವ ತಯಾರಿಗಳು ನಡೆದಿದ್ದು  ಶೀಘ್ರದಲ್ಲಿ ಕಾಲುವೆ ನಿರ್ಮಾಣದ ಸ್ಥಳದ ಅಂತಿಮ ಸರ್ವೆ, ಭೂ ಸ್ವಾಧೀನ ಪ್ರಕ್ರಿಯೆಗಳು ನಡೆಯಲಿವೆ. ಟೆಂಡರ್‌ ಪ್ರಕ್ರಿಯೆ ನಡೆದಿದೆ. 18 ತಿಂಗಳೊಳಗೆ ಕಾಮಗಾರಿ ಮುಗಿಸುವ ಗಡುವು ಕೂಡ ನೀಡಲಾಗಿದೆ.
– ಪ್ರಸನ್‌ ಕುಮಾರ್‌, 
ಎ.ಇ.ಇ. ವಾರಾಹಿ ಯೋಜನೆ

ಕನಸು ನನಸಾಗುವ ಹಂತದಲ್ಲಿದೆ
ವಾರಾಹಿ ನೀರು ಲಭ್ಯವಾಗಬೇಕು ಎನ್ನುವುದು ಇಲ್ಲಿನ ರೈತರ ಬಹುದಿನಗಳ ಕನಸಾಗಿದೆ. ಮುಖ್ಯ ಕಾಲುವೆಯ ಮೂಲಕ ಇಲ್ಲಿಗೆ  ನೀರು ಹರಿಯದಿದ್ದರೂ  ಎಡದಂಡೆ ಏತನೀರಾವರಿ ಕಾಲುವೆ ಮೂಲಕ ನೀರು ಪೂರೈಕೆಗೆ  ತಯಾರಿ ನಡೆದಿದೆ.  ಸ್ಥಳೀಯರು ಸಹಕಾರ ನೀಡಿದಲ್ಲಿ  ಕಾಮಗಾರಿ ಆದಷ್ಟು ಶೀಘ್ರ ಕೈಗೂಡಲಿದೆ. ನಮ್ಮ  38 ವರ್ಷಗಳ ಹೋರಾಟಕ್ಕೆ ಫಲಸಿಗಲಿದೆ.
– ಸತೀಶ್‌ ಶೆಟ್ಟಿ ಯಡ್ತಾಡಿ, ವಾರಾಹಿ ನೀರಾವರಿ ಹೋರಾಟಗಾರರು

– ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.