ನಾನ್‌ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಅವಕಾಶ ನೀಡಲು ಆಗ್ರಹ


Team Udayavani, Sep 9, 2018, 7:00 AM IST

0809kdpp15a.jpg

ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಮರಳು ಸಮಸ್ಯೆ ಗಂಭೀರವಾಗಿದ್ದು,  ಈ ಸಂಬಂಧ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಕಾನೂನಿನ ತೊಡಕಿದ್ದರೂ, ನಾನ್‌ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಅನುಮತಿ ನೀಡಲು ಅವಕಾಶವಿದ್ದು, ಡಿಸಿಯವರು ಅನುಮತಿ ನೀಡಲಿ ಎಂದು ಉಡುಪಿ ಜಿಲ್ಲಾ ರೈತ ಸಂಘ ಆಗ್ರಹಿಸಿದೆ.
 
ಕುಂದಾಪುರದ ಆರ್‌.ಎನ್‌. ಶೆಟ್ಟಿ ಸಭಾಂಗಣದಲ್ಲಿ ಶನಿವಾರ ನಡೆದ ಉಡುಪಿ ಜಿಲ್ಲಾ ರೈತ ಸಂಘದ ಪದಾಧಿಕಾರಿಗಳು ಹಾಗೂ ಕುಂದಾಪುರ ತಾಲೂಕು ಗ್ರಾ.ಪಂ. ಪ್ರತಿನಿಧಿಗಳ ಒಕ್ಕೂಟದ ವತಿಯಿಂದ ನಡೆದ ಸಮಾಲೋಚನಾ ಸಭೆಯಲ್ಲಿ ಮರಳುಗಾರಿಕೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ನಿರ್ಣಯ ಕೈಗೊಳ್ಳಲಾಯಿತು. 

ಮರಳುಗಾರಿಕೆ ಆರಂಭಕ್ಕೆ ಪ್ರಯತ್ನ
ಮತ್ತೆ ಮರಳುಗಾರಿಕೆ ಆರಂಭಿಸಲು ರೈತ ಸಂಘ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಜಿಲ್ಲೆಯ ಎಲ್ಲ ಶಾಸಕರು ಈಗಾಗಲೇ ಸಿಎಂ ಅವರನ್ನು ಭೇಟಿ ಮಾಡಿ ಮರಳುಗಾರಿಕೆಗೆ ಅನುಮತಿ ನೀಡಲು ಒತ್ತಾಯಿಸಲಾಗಿದ್ದು, ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ. ಚೌತಿ ಬಳಿಕ ಬೆಂಗಳೂರಿನಲ್ಲಿ ಸಭೆ ಕರೆದಿದ್ದಾರೆ. ನಾನ್‌ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಅನುಮತಿ ನೀಡಲು ಡಿಸಿಗೆ ಅವಕಾಶವಿದೆ. ಈ ಕುರಿತಂತೆ ಪ್ರಯತ್ನ ಮುಂದುವರಿಸಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ, ರೈತ ಸಂಘದ ಜಿಲ್ಲಾಧ್ಯಕ್ಷ ಪ್ರತಾಪ್‌ಚಂದ್ರ ಶೆಟ್ಟಿ ಹೇಳಿದರು. 

ದೊಡ್ಡ ದೊಡ್ಡ ಗುತ್ತಿಗೆದಾರರಿಗೆ ಯಾರಿಗೂ ಮರಳಿನ ಸಮಸ್ಯೆ ಆಗಿಲ್ಲ. ಆದರೆ ಬಡವರಿಗೆ ಮಾತ್ರ ಸಮಸ್ಯೆ ಯಾಗಿದ್ದು. ಸೌಮ್ಯ ಹೋರಾಟದಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಇದಕ್ಕೆ ಉಗ್ರ ಹೋರಾಟದ ಅಗತ್ಯವಿದೆ. ಡಿಸಿಗೆ ಕಾನೂನಿನ ಸರಳೀಕರಣ ಮಾಡುವ ಅವಕಾಶವಿದ್ದರೂ, ಅವರು ಜನಸಾಮಾನ್ಯರತ್ತ ಚಿಂತಿಸುತ್ತಿಲ್ಲ ಎಂದು ರೈತ ಸಂಘದ ಕೆದೂರು ಸದಾನಂದ ಶೆಟ್ಟಿ ಹೇಳಿದರು. 

ಸಂತೊಷ್‌ ಶೆಟ್ಟಿ, ಪ್ರದೀಪ್‌ ಬಲ್ಲಾಳ್‌, ಜಾನಕಿ ಬಿಲ್ಲವ, ವಂಡಬಳ್ಳಿ ಜಯರಾಂ ಶೆಟ್ಟಿ, ಗ್ರಾ.ಪಂ. ಜನಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಮತ್ತಿತರರು ಮರಳು ನಿಷೇಧ ದಿಂದ ಆಗುತ್ತಿರುವ ಸಮಸ್ಯೆಗಳನ್ನು ಪ್ರಸ್ತಾಪಿಸಿದರು. 

ರೈತ ಸಂಘದ ಮಲ್ಯಾಡಿ ಶಿವರಾಮ ಶೆಟ್ಟಿ, ಸತೀಶ್‌ ಕಿಣಿ ಬೆಳ್ವೆ, ಕೃಷ್ಣರಾಜ ಕಾರಂತ, ಅಣ್ಣಯ್ಯ ಪುತ್ರನ್‌, ವಿಕಾಸ್‌ ಹೆಗ್ಡೆ ಮತ್ತಿತರರು ಪಾಲ್ಗೊಂಡಿದ್ದರು. 

ವಿಶೇಷ ಗ್ರಾಮಸಭೆ: ನಿರ್ಣಯ
ಅನೇಕ ಕಡೆಗಳಲ್ಲಿ ಮನೆ ಕಟ್ಟಲು, ಪಂಚಾಯತ್‌ ಅಭಿವೃದ್ಧಿ ಕಾಮಗಾರಿ ಸೇರಿದಂತೆ ವಸತಿ ಯೋಜನೆಯಡಿ ಮಂಜೂರಾದ ಮನೆಗಳಿಗೆ ಹೊಯ್ಗೆ ಇಲ್ಲದೆ ಸಮಸ್ಯೆಯಾಗುತ್ತಿದೆ. ಈ ಸಂಬಂಧ ಕೂಡಲೇ ಜಿಲ್ಲೆಯ ಎಲ್ಲ ಗ್ರಾ.ಪಂ.ಗಳಲ್ಲಿ ವಿಶೇಷ ಗ್ರಾಮಸಭೆ ಕರೆದು ಮರಳುಗಾರಿಕೆಗೆ ಪಂಚಾಯತ್‌ ವ್ಯಾಪ್ತಿಯಲ್ಲಿ ಅನುಮತಿ ನೀಡುವಂತೆ ನಿರ್ಣಯ ಕೈಗೊಳ್ಳಬೇಕು. ಆ ನಿರ್ಣಯವನ್ನು ಡಿಸಿ ಹಾಗೂ ರಾಜ್ಯ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಇದೇ ವೇಳೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. 

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.