ನಾಲ್ಕು ವರ್ಷಗಳಿಂದ ಮುಚ್ಚಿದ ಕಳ್ಳಿಗುಡ್ಡೆ ಸಮುದಾಯ ಭವನ


Team Udayavani, Sep 10, 2018, 1:55 AM IST

kalligudde-9-9.jpg

ಬಸ್ರೂರು: ಬಳ್ಕೂರು ಗ್ರಾ.ಪಂ. ವ್ಯಾಪ್ತಿಯ ಕಳ್ಳಿಗುಡ್ಡೆಯಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹತ್ತಿರ ರೂ.40 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ವಿಶಾಲವಾದ ‘ಸಮುದಾಯ ಭವನ’ ಉಪಯೋಗ ಶೂನ್ಯವಾಗಿದೆ. 2014-15 ನೇ ಸಾಲಿನಲ್ಲಿ ವಾರಾಹಿ ನೀರಾವರಿ ಯೋಜನಾ ವಲಯದ ವತಿಯಿಂದ ಪ.ಜಾತಿಯ ಅನುದಾನದಡಿ ಪ.ಜಾತಿ ಮತ್ತು ಪ.ಪಂಗಡದವರಿಗಾಗಿ ನಿರ್ಮಿಸಲಾದ ಈ ಸಮುದಾಯ ಭವನವನ್ನು ಅಂದಿನ ಸಂಸದ ಕೆ.ಜಯಪ್ರಕಾಶ್‌ ಹೆಗ್ಡೆ 2014 ರಲ್ಲಿ ಉದ್ಘಾಟಿಸಿ ಬಳ್ಕೂರು ಗ್ರಾ.ಪಂ.ಗೆ ಹಸ್ತಾಂತರ ಮಾಡಿದ್ದರು. ನಂತರದ ನಾಲ್ಕು ವರ್ಷಗಳಲ್ಲಿ ಈ ಭವನದಲ್ಲಿ ಯಾವುದೇ ಸಭೆ-ಸಮಾರಂಭಗಳು ನಡೆದಿಲ್ಲ!

ಸೌಲಭ್ಯಗಳಿಲ್ಲ
ವಿಶಾಲವಾದ ಸಭಾಂಗಣದಲ್ಲಿ ಸಭಿಕರಿಗೆ ಕುಳಿತುಕೊಳ್ಳಲು ಒಂದೇ ಒಂದು ಕುರ್ಚಿ ಇಲ್ಲ. ಸಭೆ ನಡೆಸಲು ವೇದಿಕೆ ಇಲ್ಲ. ಬಟ್ಟೆ ಬದಲಿಸಲು ಕೊಠಡಿಯಿಲ್ಲ. ವಿಶ್ರಾಂತಿ ಕೋಣೆಯೂ ಇಲ್ಲ. ಮದುವೆ ಇತ್ಯಾದಿ ನಡೆಸುವುದಾದರೆ ಅಡುಗೆ ಕೋಣೆಯಿಲ್ಲ. ಕಳೆದ ವರ್ಷ ಸಮುದಾಯ ಭವನದ ಅವ್ಯವಸ್ಥೆಯ ಬಗ್ಗೆ ಬಳ್ಕೂರಿನಲ್ಲಿ ನಡೆದ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಪ್ರಶ್ನಿಸಿದ್ದರು. ಆದರೆ ಈವರೆಗೆ ಯಾವ ಪ್ರಯೋಜನ ಕೂಡ ಆಗಿಲ್ಲ.

ಪ್ರತಿಕ್ರಿಯೆ ಶೂನ್ಯ 
ಉಡುಪಿಯಲ್ಲಿ ದಲಿತ ಕುಂದು-ಕೊರತೆಗಳ ಸಭೆಯಲ್ಲಿ ಈ ಸಮುದಾಯ ಭವನದ ಅವ್ಯವಸ್ಥೆಯ ಬಗ್ಗೆ ಪ್ರಶ್ನಿಸಿದಾಗ ಪೋಲೀಸ್‌ ವರಿಷ್ಠಾಧಿಕಾರಿಗಳು ಶಾಸಕರಿಗೆ ಈ ಬಗ್ಗೆ ಕೊಟ್ಟ ಮನವಿ ಪತ್ರವನ್ನು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ನೀಡುವಂತೆ ಸೂಚಿಸಿದ್ದರು.  ಕಳ್ಳಿಗುಡ್ಡೆಯ ಸಮುದಾಯ ಭವನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶಶಿಧರ್‌ ಕಳ್ಳಿಗುಡ್ಡೆ ಅವರು ಶಾಸಕರ ಮನವಿಯನ್ನು ಜಿಲ್ಲಾ ಸಮಾಜ ಕಲ್ಯಾಣಿಧಿಕಾರಿಗಳಿಗೂ ಮತ್ತು ಜಿಲ್ಲಾಧಿಕಾರಿಗಳಿಗೂ ನೀಡಿದ್ದರು. ಆದರೆ ಫಲಿತಾಂಶ ಮಾತ್ರ ಶೂನ್ಯ.

ನಾವು ಇನ್ನೇನು ಮಾಡಬೇಕು?
ಬಳ್ಕೂರು ಗ್ರಾಮದ ಕಳ್ಳಿಗುಡ್ಡೆಯ ಸಮುದಾಯ ಭವನಕ್ಕೆ ಹಲವು ಮೂಲ ಸೌಕರ್ಯಗಳನ್ನು ಒದಗಿಸಿ ಕಾಯಕಲ್ಪಗೊಳಿಸುವುದಕ್ಕಾಗಿ ಅಭಿವೃದ್ಧಿ ಸಮಿತಿಯನ್ನು ಸ್ಥಳೀಯರಾದ ನಾವು ರಚಿಸಿಕೊಂಡಿದ್ದೇವೆ. ಈಗಾಗಲೇ ಶಾಸಕರಲ್ಲಿ ಚರ್ಚಿಸಿ ಅವರ ಮನವಿಯನ್ನು ಸಂಬಂಧಪಟ್ಟವರಿಗೆ ನೀಡಿದ್ದೇವೆ. ಉದ್ಘಾಟನೆಯಾಗಿ ನಾಲ್ಕು ವರ್ಷಗಳಾದರೂ ಈ ಭವನದಲ್ಲಿ ಯಾವುದೇ ಸಭೆ-ಸಮಾರಂಭಗಳು ನಡೆದಿಲ್ಲ. ನಾವು ಇನ್ನೇನು ಮಾಡಬೇಕು ಎಂದು ತೋಚುತ್ತಿಲ್ಲ.
– ಶಶಿಧರ್‌ ಕಳ್ಳಿಗುಡ್ಡೆ, ಅಧ್ಯಕ್ಷ, ಅಭಿವೃದ್ಧಿ ಸಮಿತಿ, ಸಮುದಾಯ ಭವನ

ಅನುದಾನದ ಕೊರತೆ
ಕಳ್ಳಿಗುಡ್ಡೆಯ ಸಮುದಾಯ ಭವನದ ಅವವ್ಯಸ್ಥೆಯನ್ನು ನೋಡಿದ್ದೇವೆ. ಈ ಭವನದ ಕಾರ್ಯಕಲ್ಪಕ್ಕಾಗಿ ಜಿಲ್ಲಾ ಸಮಾಜ ಕಲ್ಯಾಧಿಕಾರಿಗಳಿಗೆ ಮನವಿಯನ್ನು ನೀಡಿದ್ದೇವೆ ಗ್ರಾ.ಪಂ. ನಿಂದ ಹಲವು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅನುದಾನದ ಕೊರತೆಯಿದೆ.
– ಅಕ್ಷಶ್‌ ಶೇರೆಗಾರ್‌, ಅಧ್ಯಕ್ಷರು, ಗ್ರಾ.ಪಂ. ಬಳ್ಕೂರು

ಟಾಪ್ ನ್ಯೂಸ್

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.