ನಾಲ್ಕು ವರ್ಷಗಳಿಂದ ಮುಚ್ಚಿದ ಕಳ್ಳಿಗುಡ್ಡೆ ಸಮುದಾಯ ಭವನ


Team Udayavani, Sep 10, 2018, 1:55 AM IST

kalligudde-9-9.jpg

ಬಸ್ರೂರು: ಬಳ್ಕೂರು ಗ್ರಾ.ಪಂ. ವ್ಯಾಪ್ತಿಯ ಕಳ್ಳಿಗುಡ್ಡೆಯಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹತ್ತಿರ ರೂ.40 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ವಿಶಾಲವಾದ ‘ಸಮುದಾಯ ಭವನ’ ಉಪಯೋಗ ಶೂನ್ಯವಾಗಿದೆ. 2014-15 ನೇ ಸಾಲಿನಲ್ಲಿ ವಾರಾಹಿ ನೀರಾವರಿ ಯೋಜನಾ ವಲಯದ ವತಿಯಿಂದ ಪ.ಜಾತಿಯ ಅನುದಾನದಡಿ ಪ.ಜಾತಿ ಮತ್ತು ಪ.ಪಂಗಡದವರಿಗಾಗಿ ನಿರ್ಮಿಸಲಾದ ಈ ಸಮುದಾಯ ಭವನವನ್ನು ಅಂದಿನ ಸಂಸದ ಕೆ.ಜಯಪ್ರಕಾಶ್‌ ಹೆಗ್ಡೆ 2014 ರಲ್ಲಿ ಉದ್ಘಾಟಿಸಿ ಬಳ್ಕೂರು ಗ್ರಾ.ಪಂ.ಗೆ ಹಸ್ತಾಂತರ ಮಾಡಿದ್ದರು. ನಂತರದ ನಾಲ್ಕು ವರ್ಷಗಳಲ್ಲಿ ಈ ಭವನದಲ್ಲಿ ಯಾವುದೇ ಸಭೆ-ಸಮಾರಂಭಗಳು ನಡೆದಿಲ್ಲ!

ಸೌಲಭ್ಯಗಳಿಲ್ಲ
ವಿಶಾಲವಾದ ಸಭಾಂಗಣದಲ್ಲಿ ಸಭಿಕರಿಗೆ ಕುಳಿತುಕೊಳ್ಳಲು ಒಂದೇ ಒಂದು ಕುರ್ಚಿ ಇಲ್ಲ. ಸಭೆ ನಡೆಸಲು ವೇದಿಕೆ ಇಲ್ಲ. ಬಟ್ಟೆ ಬದಲಿಸಲು ಕೊಠಡಿಯಿಲ್ಲ. ವಿಶ್ರಾಂತಿ ಕೋಣೆಯೂ ಇಲ್ಲ. ಮದುವೆ ಇತ್ಯಾದಿ ನಡೆಸುವುದಾದರೆ ಅಡುಗೆ ಕೋಣೆಯಿಲ್ಲ. ಕಳೆದ ವರ್ಷ ಸಮುದಾಯ ಭವನದ ಅವ್ಯವಸ್ಥೆಯ ಬಗ್ಗೆ ಬಳ್ಕೂರಿನಲ್ಲಿ ನಡೆದ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಪ್ರಶ್ನಿಸಿದ್ದರು. ಆದರೆ ಈವರೆಗೆ ಯಾವ ಪ್ರಯೋಜನ ಕೂಡ ಆಗಿಲ್ಲ.

ಪ್ರತಿಕ್ರಿಯೆ ಶೂನ್ಯ 
ಉಡುಪಿಯಲ್ಲಿ ದಲಿತ ಕುಂದು-ಕೊರತೆಗಳ ಸಭೆಯಲ್ಲಿ ಈ ಸಮುದಾಯ ಭವನದ ಅವ್ಯವಸ್ಥೆಯ ಬಗ್ಗೆ ಪ್ರಶ್ನಿಸಿದಾಗ ಪೋಲೀಸ್‌ ವರಿಷ್ಠಾಧಿಕಾರಿಗಳು ಶಾಸಕರಿಗೆ ಈ ಬಗ್ಗೆ ಕೊಟ್ಟ ಮನವಿ ಪತ್ರವನ್ನು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ನೀಡುವಂತೆ ಸೂಚಿಸಿದ್ದರು.  ಕಳ್ಳಿಗುಡ್ಡೆಯ ಸಮುದಾಯ ಭವನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶಶಿಧರ್‌ ಕಳ್ಳಿಗುಡ್ಡೆ ಅವರು ಶಾಸಕರ ಮನವಿಯನ್ನು ಜಿಲ್ಲಾ ಸಮಾಜ ಕಲ್ಯಾಣಿಧಿಕಾರಿಗಳಿಗೂ ಮತ್ತು ಜಿಲ್ಲಾಧಿಕಾರಿಗಳಿಗೂ ನೀಡಿದ್ದರು. ಆದರೆ ಫಲಿತಾಂಶ ಮಾತ್ರ ಶೂನ್ಯ.

ನಾವು ಇನ್ನೇನು ಮಾಡಬೇಕು?
ಬಳ್ಕೂರು ಗ್ರಾಮದ ಕಳ್ಳಿಗುಡ್ಡೆಯ ಸಮುದಾಯ ಭವನಕ್ಕೆ ಹಲವು ಮೂಲ ಸೌಕರ್ಯಗಳನ್ನು ಒದಗಿಸಿ ಕಾಯಕಲ್ಪಗೊಳಿಸುವುದಕ್ಕಾಗಿ ಅಭಿವೃದ್ಧಿ ಸಮಿತಿಯನ್ನು ಸ್ಥಳೀಯರಾದ ನಾವು ರಚಿಸಿಕೊಂಡಿದ್ದೇವೆ. ಈಗಾಗಲೇ ಶಾಸಕರಲ್ಲಿ ಚರ್ಚಿಸಿ ಅವರ ಮನವಿಯನ್ನು ಸಂಬಂಧಪಟ್ಟವರಿಗೆ ನೀಡಿದ್ದೇವೆ. ಉದ್ಘಾಟನೆಯಾಗಿ ನಾಲ್ಕು ವರ್ಷಗಳಾದರೂ ಈ ಭವನದಲ್ಲಿ ಯಾವುದೇ ಸಭೆ-ಸಮಾರಂಭಗಳು ನಡೆದಿಲ್ಲ. ನಾವು ಇನ್ನೇನು ಮಾಡಬೇಕು ಎಂದು ತೋಚುತ್ತಿಲ್ಲ.
– ಶಶಿಧರ್‌ ಕಳ್ಳಿಗುಡ್ಡೆ, ಅಧ್ಯಕ್ಷ, ಅಭಿವೃದ್ಧಿ ಸಮಿತಿ, ಸಮುದಾಯ ಭವನ

ಅನುದಾನದ ಕೊರತೆ
ಕಳ್ಳಿಗುಡ್ಡೆಯ ಸಮುದಾಯ ಭವನದ ಅವವ್ಯಸ್ಥೆಯನ್ನು ನೋಡಿದ್ದೇವೆ. ಈ ಭವನದ ಕಾರ್ಯಕಲ್ಪಕ್ಕಾಗಿ ಜಿಲ್ಲಾ ಸಮಾಜ ಕಲ್ಯಾಧಿಕಾರಿಗಳಿಗೆ ಮನವಿಯನ್ನು ನೀಡಿದ್ದೇವೆ ಗ್ರಾ.ಪಂ. ನಿಂದ ಹಲವು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅನುದಾನದ ಕೊರತೆಯಿದೆ.
– ಅಕ್ಷಶ್‌ ಶೇರೆಗಾರ್‌, ಅಧ್ಯಕ್ಷರು, ಗ್ರಾ.ಪಂ. ಬಳ್ಕೂರು

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.