ಭಾರತ್‌ ಬಂದ್‌: ಸಾರ್ವಜನಿಕರಲ್ಲಿ ಮುಂದುವರಿದ ಗೊಂದಲ


Team Udayavani, Jan 7, 2019, 8:05 PM IST

raviraj-7-1.jpg

ಕುಂದಾಪುರ: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ದೇಶದ 12 ಕಾರ್ಮಿಕ ಸಂಘಟನೆಗಳು ಜ. 8 ಹಾಗೂ 9ರಂದು ದೇಶಾದ್ಯಂತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದ್ದು ಯೂನಿಯನ್‌ಗಳು ಸಿದ್ಧತೆ ನಡೆಸಿವೆ. ತಾಲೂಕಿನಾದ್ಯಂತ ಸಿಐಟಿಯು ಸೇರಿದಂತೆ ವಿವಿಧ ಸಂಘಟನೆಗಳು ಮುಷ್ಕರ ಬೆಂಬಲಿಸುವಂತೆ ಮನವಿ ನೀಡಿವೆ.

ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ‌ ಸಾಧ್ಯತೆ
ಬಸ್‌ ಮೂಲ ಆವಶ್ಯಕತೆಯಾದ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಓಡಿಸಬೇಕೆಂದು ಇದೆ. ಆದರೆ ಬಸ್ಸಿಗೆ ಕಲ್ಲು ಬಿದ್ದರೆ ಆಸ್ತಿ ಪಾಸ್ತಿ ನಷ್ಟ ಮಾಡಿಕೊಂಡು ವಾಹನ ಬಿಡುವಂತಿಲ್ಲ. ಆದ್ದರಿಂದ ಮೇಲಧಿಕಾರಿಗಳಿಂದ ಯಾವುದೇ ಸೂಚನೆ ಬರದಿದ್ದರೆ, ಬಸ್‌ಗೆ ಯಾವುದೇ ಹಾನಿಯಾಗುವುದಿಲ್ಲ ಎಂದಾದರೆ ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗಿಳಿಯಲಿವೆ ಎಂದು ಕುಂದಾಪುರ ಡಿಪೋ ಮ್ಯಾನೇಜರ್‌ ರಾಜೇಶ್‌ ಅವರು ತಿಳಿಸಿದ್ದಾರೆ.

ಖಾಸಗಿ ಬಸ್‌ ಇಲ್ಲ
ಈಗಾಗಲೇ ಎಲ್ಲ ಬಸ್‌ಗಳಲ್ಲಿ ಬಸ್‌ ಬಂದ್‌ ಫ‌ಲಕಗಳನ್ನು ಸಂಘಟನೆಗಳು ಹಾಕಿವೆ. ಗ್ರಾಮಾಂತರ ಪ್ರದೇಶದಿಂದ ಜನರನ್ನು ತಂದು ಪಟ್ಟಣಕ್ಕೆ ಬಿಟ್ಟ ಬಳಿಕ ಬಸ್‌ ಸಂಚಾರ ನಿಲ್ಲಿಸುವಂತಿಲ್ಲ. ಅಥವಾ ಒಮ್ಮೆ ಸಂಚಾರ ಆರಂಭಿಸಿ ನಂತರ ನಿಲ್ಲಿಸಿದರೂ ಜನರಿಗೆ ಅನನುಕೂಲವಾಗುತ್ತದೆ. ಆದ್ದರಿಂದ ಖಾಸಗಿ ಬಸ್‌ಗಳ ಓಡಾಟ ಈ ದಿನ ಇರುವುದಿಲ್ಲ ಎಂದು ಶ್ರೀ ದುರ್ಗಾಂಬಾ ಬಸ್‌ ಮಾಲಕ ಅನಿಲ್‌ ಚಾತ್ರ ತಿಳಿಸಿದ್ದಾರೆ.

ರಜೆ ಇಲ್ಲ, ಬಲವಂತವೂ ಇಲ್ಲ
ಶಾಲೆಗೆ ರಜೆ ಕೊಡುವಂತೆ ಈ ತನಕ ಯಾವುದೇ ಸುತ್ತೋಲೆ ಬಂದಿಲ್ಲ. ಆದರೆ ಬಸ್‌ ಸಂಚಾರ ಇಲ್ಲದಿದ್ದರೆ ವಿದ್ಯಾರ್ಥಿಗಳು ತೊಂದರೆ ಮಾಡಿಕೊಂಡು ಬರಬೇಕೆಂದು ಬಲವಂತವನ್ನೂ ಮಾಡಲಾಗದು. ಮೇಲಧಿಕಾರಿಗಳ ಸೂಚನೆಯಂತೆ ರಜೆ ತೀರ್ಮಾನವಾಗಲಿದೆ ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್‌ ಕಾಮತ್‌ ತಿಳಿಸಿದ್ದಾರೆ. 

ಹಳ್ಳಿ ಹಳ್ಳಿಗಳಿಗೆ ತೆರಳಿ ಮುಷ್ಕರ ಯಶಸ್ವಿಗೆ ಮನವಿ ಮಾಡಿದ್ದೇವೆ. ಅಂಗಡಿ ಮುಂಗಟ್ಟು ಮುಚ್ಚಿ ಬೆಂಬಲ ನೀಡಬೇಕೆಂದು ವರ್ತಕರಲ್ಲಿ ಕೇಳಿಕೊಂಡಿದ್ದೇವೆ. ರಿಕ್ಷಾ, ಗೂಡ್ಸ್‌ ವಾಹನಗಳು, ಖಾಸಗಿ ಬಸ್‌ಗಳು ಬೆಂಬಲ ನೀಡಿವೆ. ಕಾರ್ಮಿಕರು ಕೂಡಾ ಬೆಂಬಲ ನೀಡಿದ್ದಾರೆ. ಆದ್ದರಿಂದ ಮುಷ್ಕರ ಯಶಸ್ವಿಯಾಗಲಿದೆ ಎಂದು ಸಿಐಟಿಯು ಕಾರ್ಯದರ್ಶಿ ಸುರೇಶ್‌ ಕಲ್ಲಾಗರ ತಿಳಿಸಿದ್ದಾರೆ.

ಬೇಡಿಕೆಗಳು
ಕನಿಷ್ಠ ವೇತನ 18 ಸಾವಿರ ರೂ. ನೀಡಬೇಕು, ಬೆಲೆ ಏರಿಕೆ ತಡೆಗಟ್ಟಬೇಕು, ಹೊಸ ಉದ್ಯೋಗ ಸೃಷ್ಟಿ ಮಾಡಬೇಕು, ಕಾರ್ಮಿಕ ಕಾನೂನುಗಳು ಕಾರ್ಮಿಕರ ಪರವಾಗಿರಬೇಕು, ಅಂಗನವಾಡಿ, ಬಿಸಿಯೂಟ ಮೊದಲಾದ ಸ್ಕೀಂ ನೌಕರರನ್ನು ಖಾಯಂ ಉದ್ಯೋಗಿಗಳಾಗಿಸಬೇಕು, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಸಲ್ಲದು, ಬ್ಯಾಂಕ್‌ ವಿಲೀನ ಸಲ್ಲದು, ಮೋಟಾರು ವಾಹನ ಕಾಯ್ದೆ ಮಾರಕವಾಗಿ ತಿದ್ದುಪಡಿ ಸಲ್ಲದು ಮೊದಲಾದ ಬೇಡಿಕೆಗಳಿವೆ. ಜತೆಗೆ ಸ್ಥಳೀಯ ಬೇಡಿಕೆಗಳೂ ಸೇರಿಕೊಂಡಿವೆ. ಮರಳು ಸಮಸ್ಯೆ ನಿವಾರಣೆ, ಮೀನುಗಾರರ ಕಲ್ಯಾಣ ಮಂಡಳಿ, ಕೃಷಿ ಬಿಕ್ಕಟ್ಟು ನಿವಾರಣೆ, ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ರಕ್ಷಣೆ ಇತ್ಯಾದಿ.

ಅಂಗನವಾಡಿ ನೌಕರರ ಬೇಡಿಕೆಗಳಿಗೆ ರಾಜ್ಯ ಸಚಿವರು 1 ವಾರದಲ್ಲಿ ಈಡೇರಿಸುವ ಭರವಸೆ ನೀಡಿ ಗೌರವಧನ ಬಿಡುಗಡೆ ಮಾಡುವುದಾಗಿ ಹೇಳಿದ ಕಾರಣ ಅಂಗನವಾಡಿ ನೌಕರರ ಬೆಂಬಲ ಇಲ್ಲ. ಆ ದಿನಗಳಲ್ಲಿ ಅಂಗನವಾಡಿ ತೆರೆದಿರುತ್ತದೆ ಎಂದು ಕಾರ್ಯಕರ್ತೆಯರ, ಸಹಾಯಕಿಯರ ಸಂಘದ ಪ್ರಕಟನೆ ಹೇಳಿದೆ.

ಕಾರ್ಕಳದಲ್ಲಿ ಮಿಶ್ರ ಪ್ರತಿಕ್ರಿಯೆ ಸಾಧ್ಯತೆ
ಕಾರ್ಕಳ:
ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಜ. 8 ಹಾಗೂ 9ರಂದು ಕರೆ ನೀಡಿರುವ ಭಾರತ್‌ ಬಂದ್‌ಗೆ ಕಾರ್ಕಳ ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುವ ಸಾಧ್ಯತೆ ಇದೆ. ಖಾಸಗಿ ಬಸ್ಸುಗಳು ಹಾಗೂ ಇತರ ಬಸ್ಸುಗಳು ಓಡಾಟವಿದ್ದರೆ ಮಾತ್ರ ನಗರದಲ್ಲಿ ಜನಸಂಚಾರ ಇರುತ್ತದೆ. ಹೀಗಾಗಿ ಜನಸಂಚಾರವಿದ್ದರೆ ಮಾತ್ರ ನಮಗೆ ವ್ಯಾಪಾರ ವಹಿವಾಟು ಆಗುವ ಸಾಧ್ಯತೆಯಿದ್ದು, ಇಲ್ಲದಿದ್ದರೆ ನಾವು ಸಹಜವಾಗಿಯೇ ಬಂದ್‌ ಮಾಡಬೇಕಾಗುತ್ತದೆ ಎನ್ನುತ್ತಾರೆ ಕೆಲವು ವ್ಯಾಪಾರಸ್ಥರು.

ಕಾರ್ಕಳ ಆಟೋ ಚಾಲಕರ ಸಂಘ ಬಂದ್‌ಗೆ ಪರೋಕ್ಷವಾಗಿ ಬೆಂಬಲ ನೀಡಲಿದೆ. ಆದರೆ ಪಾರ್ಕಿಂಗ್‌ನಲ್ಲಿ ಆಟೋಗಳು ಸೇವೆಗೆ ಲಭ್ಯವಿರಲಿವೆೆ. ಸಂಘವು ಯಾವುದೇ ನಿರ್ಧಾರ ಕೈಗೊಂಡು ಪ್ರಕಟಿಸಿಲ್ಲ. ಹೀಗಾಗಿ ವೈಯಕ್ತಿವಾಗಿ ಬೆಂಬಲ ನೀಡುವವರು ಪಾರ್ಕಿಂಗ್‌ ಮಾಡದೇ ಇರಬಹುದೆಂದು ತಾ| ರಿಕ್ಷಾ ಚಾಲಕ ಮಾಲ ಕರ ಸಂಘದ ಕಾರ್ಯದರ್ಶಿ ಸಂತೋಷ್‌ ರಾವ್‌ ತಿಳಿಸಿದ್ದಾರೆ. ಆಸ್ಪತ್ರೆ, ಮೆಡಿಕಲ್‌ಗ‌ಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಹೋಟೇಲ್‌ಗ‌ಳು ಹೆಚ್ಚಾಗಿ ಬಂದ್‌ ದಿನದ ಪರಿಸ್ಥಿತಿ ನೋಡಿ, ನಿರ್ಣಯ ತೆಗೆದುಕೊಳ್ಳಲಿವೆ. ಬ್ಯಾಂಕ್‌ ಸೇವೆ ಲಭ್ಯವಿರಲಿದೆ. ತಾಲೂಕಿನ ಸಿಐಟಿಯು ಘಟಕ ಹಾಗೂ ಇಂಟಕ್‌ ಬಂದ್‌ಗೆ ಪೂರ್ಣ ಬೆಂಬಲ ನೀಡಲಿವೆ.

ಯಾವುದೆಲ್ಲ  ಬೆಂಬಲ
ದೇಶದ 10 ಪ್ರಮುಖ ಕೇಂದ್ರ ಕಾರ್ಮಿಕ ಸಂಘಗಳು, 50ಕ್ಕೂ ಹೆಚ್ಚು ಸ್ವತಂತ್ರ ನೌಕರರ ಒಕ್ಕೂಟಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿವೆ. ಸಿಐಟಿಯು, ರಿಕ್ಷಾ ಚಾಲಕರ ಸಂಘ, ಗೂಡ್ಸ್‌ವಾಹನ ಮಾಲಕ ಚಾಲಕರ ಸಂಘ, ಖಾಸಗಿ ಬಸ್‌ಗಳ ನೌಕರರು ಬೆಂಬಲ ನೀಡಿದ್ದಾರೆ.

ಯಾವುದೆಲ್ಲ ಬಂದ್‌
ಖಾಸಗಿ ಬಸ್‌ಗಳಲ್ಲಿ ಬಸ್‌ ಬಂದ್‌ ಎಂದು ಫ‌ಲಕ ಅಳವಡಿಸಲಾಗಿದೆ. ಜತೆಗೆ ರಿಕ್ಷಾ, ಗೂಡ್ಸ್‌ ವಾಹನಗಳಲ್ಲಿ ಬಂದ್‌ ಫ‌ಲಕ ಇದೆ. ಶಾಲೆ, ಕಾಲೇಜುಗಳಿಗೆ ರಜೆ ಕುರಿತು ಯಾವುದೇ ನಿರ್ಧಾರವಾಗಿಲ್ಲ. ಸರಕಾರಿ ಬಸ್‌ ನೌಕರರ ಬೆಂಬಲ ಇದ್ದರೂ ದ.ಕ. ಉಡುಪಿಯಲ್ಲಿ ಬಸ್‌ಗಳ ಓಡಾಟ ಕುರಿತು ಸ್ಪಷ್ಟ  ತೀರ್ಮಾನವಾಗಿಲ್ಲ. ಬಿಎಂಎಸ್‌ ಕಾರ್ಮಿಕ ಸಂಘಟನೆ ಮುಷ್ಕರಕ್ಕೆ ಬೆಂಬಲ ನೀಡಿಲ್ಲ.ಆದ್ದರಿಂದ ಆ ಸಂಘಟನೆಯ ರಿಕ್ಷಾಗಳು ಓಡಾಡಲಿವೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.