ಉಪ್ಪುಂದ: ಅಂಗಡಿಗೆ ನುಗ್ಗಿದ ಲಾರಿ, ತಪ್ಪಿದ ದುರಂತ
Team Udayavani, Sep 11, 2018, 4:46 PM IST
ಬೈಂದೂರು: ಕೆಂಪು ಕಲ್ಲು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಅಂಗಡಿಗೆ ನುಗ್ಗಿದ ಘಟನೆ ಮಂಗಳವಾರ ಮಧ್ಯಾಹ್ನ ಉಪ್ಪುಂದ ಶಾಲೆಬಾಗಿಲು ಬಳಿ ನಡೆದಿದೆ. ನಡೆಯಬಹುದಾಗಿದ್ದ ಭಾರಿ ಅನಾಹುತವೊಂದು ಅದೃಷ್ಠವಶಾತ್ ತಪ್ಪಿ ಹೋಗಿದೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿಬೈಂದೂರಿನಿಂದ ಕುಂದಾಪುರಕ್ಕೆ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಒಳ ರಸ್ತೆಗೆ ನುಗ್ಗಿ ಅಂಗಡಿಗೆ ಡಿಕ್ಕಿ ಹೊಡೆದಿದೆ. ಒಂದು ಬೇಕರಿ, ಮತ್ತೊಂದು ಕಿರಾಣಿ ಅಂಗಡಿಗೆ ಲಾರಿ ನುಗ್ಗಿದೆ.
ಲಾರಿ ನುಗ್ಗಿದ ರಭಸಕ್ಕೆ ಅಂಗಡಿ ಎದುರು ನಿಲ್ಲಿಸಿದ್ದ 3 ಬೈಕ್ ಮತ್ತು 3 ಸೈಕಲ್ ನುಜ್ಜು ಗುಜ್ಜಾಗಿದೆ. ಅಂಗಡಿಯ ತಡೆಗೋಡೆ, ವಿದ್ಯುತ್ ಮೀಟರ್ ಬೋರ್ಡ್, ಅಂಗಡಿ ಶಟರ್ ಕೂಡಾ ಹಾನಿಯಾಗಿದೆ.
ಅಪಘಾತದಲ್ಲಿ ನಡೆಯಬಹುದಾಗಿದ್ದ ಭಾರೀ ಅನಾಹುತ ತಪ್ಪಿ ಹೋಗಿದೆ. ಅಂಗಡಿ ಎದುರಲ್ಲಿದ್ದ ಮಂದಿ ಕ್ಷಣ ಮಾತ್ರದಲ್ಲಿ ತಪ್ಪಿಸಿಕೊಂಡಿದ್ದರಿಂದ ಅದೃಷ್ಠವಶಾತ್ ಅನಾಹುತ ತಪ್ಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ