ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ: ಹೋರಾಟಕ್ಕೆ ಸಿದ್ಧತೆ


Team Udayavani, Sep 13, 2018, 4:50 AM IST

highway-raod-12-9.jpg

ಕುಂದಾಪುರ: ಚತುಷ್ಪಥ ರಸ್ತೆ ಕೆಲಸವೂ ನಡೆ ಯದೆ, ಇತ್ತ ಇದ್ದ ಹೆದ್ದಾರಿಯೂ ಹದಗೆಟ್ಟ ಕಾರಣ ರಾಷ್ಟ್ರೀಯ ಹೆದ್ದಾರಿ 66ರ ವ್ಯವಸ್ಥೆ ವಿರುದ್ಧ ಜನಾಕ್ರೋಶ ಇದೀಗ ತೀವ್ರಗೊಂಡಿದೆ. ಹಂಗಳೂರಿನ ಕೊನೆ ವಿನಾಯಕ ಥಿಯೇಟರ್‌ನಿಂದ ಸಂಗಮ್‌ನ ಕೊನೆ ಸೇತುವೆವರೆಗೆ ಪ್ರಯಾಣ ಅಸಾಧ್ಯವಾಗಿದ್ದು, ಜನ ಈ ಬಗ್ಗೆ ಎಷ್ಟೇ ಬೇಡಿಕೆ ಸಲ್ಲಿಸಿದರೂ ಫ‌ಲಕಾರಿಯಾಗಿಲ್ಲ.

ಪುರಸಭೆ ವ್ಯಾಪ್ತಿ ಆರಂಭವಾಗುವಲ್ಲಿಂದಲೇ ಹದಗೆಟ್ಟ ರಸ್ತೆ ಕುಂದಾಪುರ ನಗರಕ್ಕೆ ಬಿಳಿಧೂಳಿನ ಸ್ವಾಗತ ನೀಡುತ್ತದೆ. ಬಸ್ರೂರು ಮೂರುಕೈಯಲ್ಲಿ ಶಿವಮೊಗ್ಗಕ್ಕೆ ಹೋಗುವ ತಿರುವಿನಲ್ಲೂ ಹದಗೆಟ್ಟಿದೆ. ಸಂಗಮ್‌ವರೆಗೂ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ಮಳೆ ಬಂದಾಗ ರಸ್ತೆಯ ಹೊಂಡಗಳಲ್ಲಿ ನೀರು ತುಂಬಿ ರಸ್ತೆ-ಹೊಂಡ, ರಸ್ತೆ ಅಂಚು ತಿಳಿಯದೆ ವಾಹನ ಸವಾರರು ತ್ರಾಸ ಪಡುತ್ತಾರೆ.

ಮಳೆ ಇಲ್ಲದಿದ್ದರೆ ಧೂಳು
ಮಳೆ ಬಂದಾಗ ಇಂತಹ ದುರವಸ್ಥೆಯಾದರೆ ಬಿಸಿಲಿದ್ದಾಗ ಈ ಪ್ರದೇಶವಿಡೀ ಧೂಳುಮಯ. ನಡೆದಾಡಲೂ ಅಸಾಧ್ಯ. ಜತೆಗೆ ಅಕ್ಕಪಕ್ಕದ ಅಂಗಡಿಯವರಿಗೂ ಧೂಳು ತಿನ್ನುವ ಸಂಕಷ್ಟ. ಇದರಿಂದ ಕಾಯಿಲೆ ಭೀತಿ ಬೇರೆ. ರಾಷ್ಟ್ರೀಯ ಹೆದ್ದಾರಿಯಾದ ಕಾರಣ ವಾಹನಗಳ ಓಡಾಟ ನಿಲ್ಲುವುದೇ ಇಲ್ಲ. ಹಾಗೆ ವಾಹನ ಹೋದಾಗಲೆಲ್ಲ ಧೂಳು ಹಾರಾಡುತ್ತಿರುತ್ತದೆ.

ಸರ್ವಿಸ್‌ ರಸ್ತೆಯೇ ಗತಿ
ಸರ್ವೀಸ್‌ ರಸ್ತೆಯ ಕಾಮಗಾರಿ ಪೂರ್ಣವಾಗಿದ್ದರೂ ಸಂಚಾರಕ್ಕೆ ಬಿಟ್ಟುಕೊಟ್ಟಿಲ್ಲ. ಸರ್ವೀಸ್‌ ರಸ್ತೆ ಸಂಚಾರಕ್ಕೆ ಲಭಿಸಿದರೆ ಮುಖ್ಯ ರಸ್ತೆಯ ವಾಹನಗಳ ದಟ್ಟಣೆ ಕಡಿಮೆಯಾಗಲಿದೆ. ಹೊಂಡಗಳ ಕಾರಣದಿಂದಾಗಿಯೇ ಟ್ರಾಫಿಕ್‌ ಮೇಲೂ ಒತ್ತಡ ಬೀಳುತ್ತದೆ. ಫ್ಲೈ ಓವರ್‌ ಸಮೀಪ ದ್ವಿಚಕ್ರ ವಾಹನ ಸವಾರರಿಗೆ ಘನ ವಾಹನಗಳ ಓಡಾಟ ಹೆದರಿಕೆ ಹುಟ್ಟಿಸುವಂತಿದೆ. ಅಧಿಕೃತವಾಗಿ ಸರ್ವಿಸ್‌ ರಸ್ತೆ ಬಿಟ್ಟುಕೊಟ್ಟಿಲ್ಲವಾದರೂ ಬಹುತೇಕ ವಾಹನಗಳು ಈಗ ಓಡಾಟಕ್ಕೆ ಹೆದ್ದಾರಿ ಬದಲಿಗೆ ಸರ್ವಿಸ್‌ ರಸ್ತೆಯನ್ನೇ ಅವಲಂಬಿಸಿವೆ.

ಆಗಾಗ ಪ್ಯಾಚ್‌
2017ರಲ್ಲಿ ರಾಷ್ಟ್ರಪತಿಗಳ ಕೊಲ್ಲೂರು ಭೇಟಿ ಸಂದರ್ಭ ಈ ರಸ್ತೆಗೆ ಪ್ಯಾಚ್‌ವರ್ಕ್‌ ಮಾಡಲಾಗಿದೆ. ಅದಾದ ಬಳಿಕ ಈ ರಸ್ತೆಯ ಕಡೆಗೆ ಯಾರೂ ಗಮನ ಹರಿಸಿಲ್ಲ. ಮಳೆಗಾಲದಲ್ಲಿ ಪ್ಯಾಚ್‌ ಹಾಕಿದಂತೆ ಮಾಡಿದರೂ ಅಂದು ಹಾಕಿದ ಪ್ಯಾಚ್‌ ಅಂದೇ ಎದ್ದು ಹೋಗಿದೆ. ಹೆದ್ದಾರಿ ಬದಿ ಚರಂಡಿ ನಿರ್ಮಾಣ ಕಾರ್ಯವೂ ನಡೆದಿಲ್ಲ. ಇರುವ ಸ್ವಲ್ಪ ಚರಂಡಿಯ ಹೂಳೆತ್ತುವ ಕಾರ್ಯವೂ ನಡೆದಿಲ್ಲ. ಆದ್ದರಿಂದ ಮಳೆ ಬಂದರೆ ನೀರೆಲ್ಲ ರಸ್ತೆಯಲ್ಲೇ ಇರುತ್ತದೆ. ಮಳೆ ಬರದಿದ್ದರೆ ಧೂಳೆಲ್ಲ ಎದ್ದು ಹಾರುತ್ತಿರುತ್ತದೆ. ಜನ ಈ ಅವಸ್ಥೆಯಿಂದ ರೋಸಿ ಹೋಗಿದ್ದು ಹೋರಾಟಕ್ಕೆ ಸಜ್ಜಾಗಿದ್ದಾರೆ. ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಇದಕ್ಕಾಗಿ ಸಹಾಯಕ ಕಮಿಷನರ್‌ ಅವರಿಗೆ ಮನವಿ ನೀಡಲು ಸಿದ್ಧತೆ ನಡೆಸಿದ್ದಾರೆ. 

ವ್ಯವಸ್ಥೆಯ ಅಣಕ
ಶಾಸ್ತ್ರಿ ಸರ್ಕಲ್‌ ಪಕ್ಕದಲ್ಲೇ ನಿಂತ ಅರ್ಧವಾದ ಫ್ಲೈ ಓವರ್‌ ಕಾಮಗಾರಿ ಈ ಎಲ್ಲ ಅವ್ಯವಸ್ಥೆಗಳಿಗೆ ಅಣಕದಂತೆ ಇದೆ. ಮಳೆಗಾಲದಲ್ಲಿ ಹೊಂಡ ಮುಚ್ಚುವ ಕಾರ್ಯ ಎಂದು ಒಮ್ಮೆ ತೇಪೆ ಹಚ್ಚುವ ಕಾರ್ಯ ನಡೆಯಿತು. ಆದರೆ ಅದು ಕೇವಲ ಕಣ್ಣಿಗೆ ಮಣ್ಣೆರಚುವ ತಂತ್ರವಾಗಿದೆ. ಈಗ ಧೂಳಿನ ಸಮಸ್ಯೆ ವಿಪರೀತವಿದೆ. ಮಾರ್ಚ್‌ ಒಳಗೆ ಕಾಮಗಾರಿ ಮುಗಿಸಬೇಕೆಂದು ಸಹಾಯಕ ಕಮಿಷನರ್‌ ಅವರು ಆದೇಶ ಮಾಡಿದ್ದಾರೆ. ಆದರೆ ಏನೂ ಬೆಳವಣಿಗೆ ಆಗಿಲ್ಲ.  

ಪ್ರತಿಭಟನೆ ನಡೆಸಬೇಕೆಂದಿದ್ದೇವೆ
ರಸ್ತೆಯ ಅವ್ಯವಸ್ಥೆ ಕುರಿತು ಪ್ರತಿಭಟನೆ ನಡೆಸಬೇಕೆಂದಿದ್ದೇವೆ. ಇದರ ಹೊರತು ಬೇರೆ ಯಾವುದೇ ಪರಿಹಾರ ಮಾರ್ಗಗಳು ಯಾರಿಂದಲೂ ಲಭಿಸುತ್ತಿಲ್ಲ. 
– ಸಂತೋಷ್‌ ಸುವರ್ಣ, ಸ್ಥಳೀಯರು

— ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.