ಮೇಲ್‌ಗ‌ಂಗೊಳ್ಳಿ : ರಸ್ತೆ ಬದಿಯಲ್ಲೇ ಕಸದ ರಾಶಿ


Team Udayavani, Sep 18, 2018, 1:45 AM IST

thyajya-17-9.jpg

ಗಂಗೊಳ್ಳಿ: ದೇಶದೆಲ್ಲೆಡೆ ಸ್ವಚ್ಛ ಭಾರತದ ಕೂಗು ಬಲವಾಗಿ ಕೇಳಿ ಬರುತ್ತಿದ್ದರೂ, ಗಂಗೊಳ್ಳಿ ಗ್ರಾ.ಪಂ. ವ್ಯಾಪ್ತಿಯ ಮೇಲ್‌ ಗಂಗೊಳ್ಳಿಯ ರಸ್ತೆ ಬದಿಯಲ್ಲಿಯೇ ಕಸ ಎಸೆಯುತ್ತಿರುವುದು ಮಾತ್ರ ತಪ್ಪಿಲ್ಲ. ಘನ-ದ್ರವ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕವನ್ನು ಕಳೆದ ತಿಂಗಳಿನಿಂದ ಆರಂಭಿಸಿದ್ದರೂ, ಅದನ್ನು ಎಲ್ಲ ಕಡೆಗೂ ವಿಸ್ತರಿಸದಿದ್ದುದರಿಂದ ಗ್ರಾಮದ ಕಸ ವಿಲೇವಾರಿ ಸಮಸ್ಯೆಯಾಗಿದೆ. ಗಂಗೊಳ್ಳಿಯ ಸಮೀಪದ ಮೇಲ್‌ ಗ‌ಂಗೊಳ್ಳಿ ಭಾಗದಲ್ಲಿ ಅನೇಕ ಮನೆಗಳಿದ್ದು, ಅಲ್ಲಿಯವರೆಲ್ಲ ಕಸ ವಿಲೇವಾರಿಗೆ ಸಮರ್ಪಕವಾದ ವ್ಯವಸ್ಥೆ ಇಲ್ಲದ ಕಾರಣ ರಸ್ತೆ ಬದಿಯೇ ಕಸ ಎಸೆಯುತ್ತಿದ್ದಾರೆ. ಅದಲ್ಲದೆ ಬೇರೆ ಕಡೆಯಿಂದಲೂ ಬಂದು ಇಲ್ಲಿಯೇ ಕಸ ಎಸೆಯುತ್ತಿದ್ದಾರೆ.

ದುರ್ವಾಸನೆ
ತ್ಯಾಜ್ಯ ರಾಶಿಯಿಂದಾಗಿ ಮೇಲ್‌ ಗಂಗೊಳ್ಳಿ ಭಾಗದ ಪರಿಸರವಿಡೀ ದುರ್ವಾಸನೆ ಆವರಿಸಿದ್ದು, ಮೂಗು ಮುಚ್ಚಿಕೊಂಡೇ ದಿನ ಕಳೆಯಬೇಕಾದ ಪರಿಸ್ಥಿತಿ ಬಂದೊದಗಿದೆ.

ರೋಗ ಭೀತಿ
ಕೊಳೆತ ತರಕಾರಿ, ಪ್ಲಾಸ್ಟಿಕ್‌ ಕಸಗಳನ್ನು ಇಲ್ಲಿಯೇ ಎಸೆಯಲಾಗುತ್ತಿದ್ದು, ಇದರಿಂದ ಈ ಪರಿ ಸರವು ಸೊಳ್ಳೆ ಉತ್ಪತ್ತಿ ತಾಣವಾಗಿ ಮಾರ್ಪಾಡಾಗುವ ಸಂಭವವಿದ್ದು, ರೋಗ ಹರಡುವ ಭೀತಿ ಆವರಿಸಿದೆ.


ತ್ಯಾಜ್ಯ ವಿಲೇವಾರಿಗೆ ವ್ಯವಸ್ಥೆಯಿಲ್ಲ

ಗಂಗೊಳ್ಳಿ ಗ್ರಾ.ಪಂ. ವತಿಯಿಂದ ಕಳೆದ ಆಗಸ್ಟ್‌ನಲ್ಲಿ ಘನ-ದ್ರವ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕ ಆರಂಭಿಸಲಾಗಿದೆ. ಇದು ಪ್ರಾಯೋಗಿಕವಾಗಿದ್ದು, ಕೇವಲ 210 ಮನೆಗಳಿಂದ ಹಸಿ- ಒಣ ಕಸವನ್ನು ಸಂಗ್ರಹಿಸಲಾಗುತ್ತಿದೆ. ಗಂಗೊಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಒಟ್ಟು ಇರುವ 13 ವಾರ್ಡ್‌ ಗಳಲ್ಲಿ ಒಟ್ಟು 4,600 ಮನೆ ಹಾಗೂ ವಾಣಿಜ್ಯ ಮಳಿಗೆಗಳಿವೆ. ಅದರಲ್ಲಿ 275 ಅಂಗಡಿಗಳು, 10-12 ಹೊಟೇಲ್‌ಗ‌ಳು, 30 ಮಾಂಸದ ಅಂಗಡಿಗಳಿವೆ. 

ಪಂ. ಸೂಕ್ತ ಕ್ರಮ ಕೈಗೊಳ್ಳಲಿ
ಇಲ್ಲಿ ಈಗ ಕಸದ ರಾಶಿಯೇ ಆಗಿದೆ. ಎಲ್ಲರೂ ಬಂದು ಇಲ್ಲಿ ಕಸ ಎಸೆದು ಹೋಗುತ್ತಾರೆ. ಪಂಚಾಯತ್‌ಗೂ ಈ ಬಗ್ಗೆ ಗೊತ್ತಿದ್ದರೂ, ಕಸ ಎಸೆಯದಂತೆ ಯಾವುದೇ ಕಠಿನ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಎಸೆದ ಕಸವನ್ನು ವಿಲೇವಾರಿ ಮಾಡುವ ಕೆಲಸವನ್ನು ಕೂಡ ಅವರು ಮಾಡುತ್ತಿಲ್ಲ. ಇನ್ನಾದರೂ ಎಚ್ಚೆತ್ತುಕೊಂಡು ಗ್ರಾ.ಪಂ.ನವರು ಸೂಕ್ತ ಕ್ರಮಕೈಗೊಳ್ಳಲಿ. 
– ದಿನೇಶ್‌ ನಾಯಕ್‌, ಮೇಲ್‌ಗ‌ಂಗೊಳ್ಳಿ

ಶೀಘ್ರ ಕಸ ವಿಲೆೇವಾರಿಗೆ ಕ್ರಮ
ಮೊದಲಿಗೆ 210 ಮನೆಗಳಿಂದ ಕಸ ಸಂಗ್ರಹಿಸಲಾಗುತ್ತಿದ್ದು, ಈಗ ಅದನ್ನು 640 ಮನೆಗಳಿಗೆ ವಿಸ್ತರಿಸಲಾಗಿದೆ. ಪಂಚಾಯತ್‌ಗೆ ಕಸ ಸಂಗ್ರಹ ವಾಹನವೊಂದು ಸಿಕ್ಕರೆ ಎಲ್ಲ ಮನೆಗಳಿಂದಲೂ ತ್ಯಾಜ್ಯ ಸಂಗ್ರಹಿಸಲಾಗುವುದು. ಬ್ಯಾಂಕ್‌, ಉದ್ಯಮಿಗಳು ಅದನ್ನು ಕೊಡುತ್ತೇನೆಂದು ಮುಂದೆ ಬಂದಿದ್ದಾರೆ. ಗ್ರಾ.ಪಂ. ವ್ಯಾಪ್ತಿಯ ಎಲ್ಲ ಕಡೆಗಳ ಕಸ ವಿಲೇವಾರಿಗೆ ಶೀಘ್ರ ಪರಿಹಾರ ಕಂಡುಕೊಳ್ಳಲಾಗುವುದು. 
– ಮಾಧವ ಬಿ., ಗಂಗೊಳ್ಳಿ ಪಿಡಿಒ

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.