ರಾಷ್ಟ್ರೀಯ ಹೆದ್ದಾರಿಗೆ ತೇಪೆ
Team Udayavani, Sep 18, 2018, 1:50 AM IST
ಕುಂದಾಪುರ: ಕೊನೆಗೂ ಇಲ್ಲಿನ ರಾಷ್ಟ್ರೀಯ ಹೆದ್ದಾರಿಗೆ ತೇಪೆ ಭಾಗ್ಯ ಒದಗಿ ಬಂದಿದೆ. ರವಿವಾರ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸಮೀಪ ನವಯುಗ ಕಂಪೆನಿಯವರು ರಾಷ್ಟ್ರೀಯ ಹೆದ್ದಾರಿ 66ಕ್ಕೆ ಡಾಮರು ಹಾಕಿದ್ದಾರೆ. ಆದರೆ ಅದರ ಅನಂತರ ಸಂಗಂ ಮೊದಲಾದೆಡೆ ಹೆದ್ದಾರಿ ಕಾಮಗಾರಿ ಗುತ್ತಿಗೆ ಪಡೆದುಕೊಂಡ ಐಆರ್ಬಿ ಕಂಪೆನಿಯವರು ಗಮನವೇ ಹರಿಸಿಲ್ಲ.
ಪುರಸಭೆ ವ್ಯಾಪ್ತಿ ಆರಂಭವಾಗುವಲ್ಲಿಂದಲೇ ಹದಗೆಟ್ಟ ರಸ್ತೆ ಕುಂದಾಪುರ ನಗರಕ್ಕೆ ಬಿಳಿಧೂಳಿನ ಸ್ವಾಗತ ನೀಡುತ್ತದೆ. ಬಸ್ರೂರು ಮೂರುಕೈಯಲ್ಲಿ ಶಿವಮೊಗ್ಗಕ್ಕೆ ಹೋಗುವ ತಿರುವಿನಲ್ಲೂ ಹದಗೆಟ್ಟಿದೆ. ಸಂಗಮ್ವರೆಗೂ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ಮಳೆ ಬಂದಾಗ ರಸ್ತೆಯ ಹೊಂಡಗಳಲ್ಲಿ ನೀರು ತುಂಬಿ ರಸ್ತೆ-ಹೊಂಡ, ರಸ್ತೆ ಅಂಚು ತಿಳಿಯದೆ ವಾಹನ ಸವಾರರು ತ್ರಾಸ ಪಡುತ್ತಾರೆ.
ಧೂಳಿನಿಂದ ಸಮಸ್ಯೆ
ಮಳೆ ಬಂದಾಗ ಇಂತಹ ದುರವಸ್ಥೆಯಾದರೆ ಬಿಸಿಲಿದ್ದಾಗ ಈ ಪ್ರದೇಶವಿಡೀ ಧೂಳುಮಯ. ನಡೆದಾಡಲೂ ಅಸಾಧ್ಯ. ಜತೆಗೆ ಅಕ್ಕಪಕ್ಕದ ಅಂಗಡಿಯವರಿಗೂ ಧೂಳು ತಿನ್ನುವ ಸಂಕಷ್ಟ. ಇದರಿಂದ ಕಾಯಿಲೆ ಭೀತಿ ಬೇರೆ. ರಾಷ್ಟ್ರೀಯ ಹೆದ್ದಾರಿಯಾದ ಕಾರಣ ವಾಹನಗಳ ಓಡಾಟ ನಿಲ್ಲುವುದೇ ಇಲ್ಲ. ಹಾಗೆ ವಾಹನ ಹೋದಾಗಲೆಲ್ಲ ಧೂಳು ಹಾರಾಡುತ್ತಿರುತ್ತದೆ. ಈ ಬಗ್ಗೆ ಉದಯವಾಣಿ ಸೆ. 13ರಂದು ವರದಿ ಪ್ರಕಟಿಸಿತ್ತು. ಇದೀಗ ನವಯುಗ ಕಂಪೆನಿ ತೇಪೆ ಕಾರ್ಯ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ