ದೇವರಬಾಳು; ಬಸ್‌ ಇಲ್ಲದಿರುವುದೇ ಗೋಳು


Team Udayavani, Sep 22, 2018, 6:00 AM IST

2109kdpp1.jpg

ಹಳ್ಳಿಹೊಳೆ: ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳೆರಡರ ಗಡಿಭಾಗದಲ್ಲಿ ಇರುವ ನಕ್ಸಲ್‌ ಪೀಡಿತ ಪ್ರದೇಶವಾದ ದೇವರಬಾಳುವಿಗೆ ಇನ್ನೂ ಕೂಡ ಬಸ್‌ ಸಂಚಾರ ವ್ಯವಸ್ಥೆಯೇ ಇಲ್ಲ. 

ಹಳ್ಳಿಹೊಳೆಯಿಂದ ಚಕ್ರಾ ಮೈದಾನದವರೆಗೆ ಬಸ್‌ ಸಂಪರ್ಕವಿದೆ. ಆದರೆ ಅಲ್ಲಿಂದ ಮುಂದಕ್ಕೆ ದೇವರಬಾಳು, ಕಬ್ಬಿನಾಲೆ, ಕಟ್ಟಿನಾಡಿ ಊರಿಗೆ ಸುಮಾರು 6 ಕಿ.ಮೀ. ದೂರದವರೆಗೆ ಬಸ್‌ ಸಂಪರ್ಕವೇ ಇಲ್ಲ. ಇಲ್ಲಿನ ನಿವಾಸಿಗಳು ಸ್ವಂತ ವಾಹನವನ್ನೇ ಅವಲಂಬಿಸಬೇಕಾದ ಅನಿವಾರ್ಯತೆಯಿದೆ. 

ಹಳ್ಳಿಹೊಳೆ ಗ್ರಾ.ಪಂ. ವ್ಯಾಪ್ತಿಯ ದೇವರಬಾಳುವಿನಲ್ಲಿ 2005 ರ ಜೂ. 23ರಂದು ನಕ್ಸಲರೆಂದು ಗುರುತಿಸಿಕೊಂಡ ಅಜಿತ್‌ ಹಾಗೂ ಉಮೇಶ್‌ ಅವರನ್ನು ಆಗಿನ ಉಡುಪಿ ಎಸ್ಪಿಯಾಗಿದ್ದ ಮುರುಗನ್‌ ನೇತೃತ್ವದ ವಿಶೇಷ ಪೊಲೀಸ್‌ ತಂಡ ಹಾಗೂ ನಕ್ಸಲ್‌ ನಿಗ್ರಹ ಪಡೆಯ ಜಂಟಿ ಕಾರ್ಯಾಚರಣೆಯಲ್ಲಿ ಎನ್‌ಕೌಂಟರ್‌ ಮಾಡಲಾಗಿತ್ತು. ಅಲ್ಲಿಯವರೆಗೆ ಈ ಊರಿನ ಬಗ್ಗೆ ಹೆಚ್ಚು ಮಂದಿಗೆ ತಿಳಿದಿರಲಿಲ್ಲ. 

ಭರವಸೆ ಮಾತ್ರ
ಆ ಎನ್‌ಕೌಂಟರ್‌ ಪ್ರಕರಣ ನಡೆದು 13 ವರ್ಷಗಳು ಕಳೆದಿವೆ. ಆ ಬಳಿಕ ನಕ್ಸಲ್‌ ಪ್ಯಾಕೇಜ್‌ನಡಿ ಅನುದಾನ ಬಂದರೂ ಇಲ್ಲಿನ ಅರಣ್ಯ ವಾಸಿ ಜನರ ಬದುಕು ಮಾತ್ರ ಯಾವುದೇ ಅಭಿವೃದ್ಧಿ ಕಂಡಿಲ್ಲ. ದೇವರಬಾಳು, ಕಬ್ಬಿನಾಲೆ, ಕಟ್ಟಿನಾಡಿ, ಭಾಗದಲ್ಲಿ ಸುಮಾರು 40 ರಿಂದ 50 ಮನೆಗಳಿವೆ. ಇಲ್ಲಿನ ಜನರಿಗೆ ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸಲು ಜನಪ್ರತಿನಿಧಿಗಳು, ಸರಕಾರ ಅನೇಕ ಭರವಸೆಗಳನ್ನು ನೀಡಿತ್ತು. 5 ವರ್ಷಗಳ ಹಿಂದೆ ನಕ್ಸಲ್‌ ಪ್ಯಾಕೇಜ್‌ ಅನುದಾನದಡಿ ಇಲ್ಲಿನ ಮನೆಗಳಿಗೆ ವಿದ್ಯುತ್‌ ಸಂಪರ್ಕವನ್ನು ಕಲ್ಪಿಸಿದ್ದು, ಬಿಟ್ಟರೆ ಬೇರೆ ಯಾವುದೇ ಅಭಿವೃದ್ಧಿಯಾಗಿಲ್ಲ. 

ಬಸ್‌ ಸೌಕರ್ಯ ವಿಸ್ತರಿಸಲಿ
ಹಳ್ಳಿಹೊಳೆಯಿಂದ ದೇವರಬಾಳುವಿಗೆ ಸುಮಾರು 8 ಕಿ.ಮೀ. ದೂರವಿದ್ದು, ಈಗಿರುವ ಚಕ್ರಾ ಮೈದಾನದವರೆಗೆ ಇರುವ ಬಸ್‌ ಸೌಕರ್ಯವನ್ನು ದೇವರಬಾಳುವರೆಗೂ ವಿಸ್ತರಿಸಿದರೆ ಇಲ್ಲಿನ ನೂರಾರು ಮಂದಿಗೆ ಪ್ರಯೋಜನವಾಗಲಿದೆ. ಇಲ್ಲಿಂದ ಶಂಕರನಾರಾಯಣ, ಕೊಲ್ಲೂರು ಕಡೆಗೆ ತೆರಳುವವರಿಗೂ ಪ್ರಯೋಜನವಾಗಲಿದೆ.  
-ಶಂಕರ, ದೇವರಬಾಳು ನಿವಾಸಿ

ಬಸ್‌ ಬೇಡಿಕೆ ಸಲ್ಲಿಕೆ
ಹಳ್ಳಿಹೊಳೆಯಿಂದ ದೇವರಬಾಳುವಿಗೆ ಬಸ್‌ ಸೌಕರ್ಯ ಕಲ್ಪಿಸುವ ಸಂಬಂಧ ಹಳ್ಳಿಹೊಳೆ ಗ್ರಾ.ಪಂ. ವತಿಯಿಂದ ಈಗಾಗಲೇ ಕೆಎಸ್‌ಆರ್‌ಟಿಸಿಗೆ ಬೇಡಿಕೆಯನ್ನು ಸಲ್ಲಿಸಲಾಗಿದೆ. 
– ಸುದರ್ಶನ್‌, ಹಳ್ಳಿಹೊಳೆ ಗ್ರಾ.ಪಂ. ಪಿಡಿಒ

ಹಲವೆಡೆಯಿಂದ ಬೇಡಿಕೆಗಳಿವೆ
ದೇವರಬಾಳು ಸೇರಿದಂತೆ ಕರಾವಳಿಯ ಅನೇಕ ಕಡೆಗಳಿಗೆ ಬಸ್‌ ಸಂಪರ್ಕ ಕಲ್ಪಿಸಲು ಬೇಡಿಕೆಗಳು ಬಂದಿವೆ. ಆದರೆ ಈಗ ಸದ್ಯಕ್ಕೆ ಹೊಸ ಬಸ್‌ ಆರಂಭಿಸುವ ಯಾವುದೇ ಪ್ರಸ್ತಾವನೆ ಇಲಾಖೆ ಮುಂದಿಲ್ಲ. 
– ಜೈಶಾಂತ್‌, ಕೆಎಸ್‌ಆರ್‌ಟಿಸಿ ಡಿಟಿಒ

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.