ಬ್ರಹ್ಮಾವರ: ಭೀಕರ ಅಪಘಾತಕ್ಕೆ; ಪಾದಚಾರಿ ಮಹಿಳೆ ಸಾವು
Team Udayavani, Sep 22, 2018, 1:31 PM IST
ಬ್ರಹ್ಮಾವರ: ರಾಷ್ಟೀಯ ಹೆದ್ದಾರಿ 66ರ ಬ್ರಹ್ಮಾವರ ಬಸ್ಸು ನಿಲ್ದಾಣ ಬಳಿ ನಡೆದ ಭೀಕರ ಅಪಘಾತಕ್ಕೆ ಪಾದಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಬ್ರಹ್ಮಾವರ ಬಸ್ಸು ನಿಲ್ದಾಣದಿಂದ ಕುಂದಾಪುರ ಕಡೆಗೆ ಹೊರಟಿದ್ದ ವೇಗದೂತ ಬಸ್ ಕುಂದಾಪುರ ಕಡೆಗೆ ಹೋಗುತ್ತಿದ್ದ ಟೆಂಪೋಗೆ ಹಿಂದಿನಿಂದ ಡಿಕ್ಕಿ ಹೊಡೆಯಿತು. ಟೆಂಪೋ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ದುರ್ದೈವಿ ಮಹಿಳೆ ಹಿರಿಯಡಕದ ಗೀತಾ (36) ಎಂದು ತಿಳಿದು ಬಂದಿದೆ. ಪತಿ ಸುಬ್ರಹ್ಮಣ್ಯ ಮತ್ತು ಪುತ್ರನೊಂದಿಗೆ ಐರೋಡಿಯ ಮನೆಗೆ ಕಾರ್ಯಕ್ರಮವೊಂದಕ್ಕಾಗಿ ತೆರಳಲು ಬಂದಿದ್ದರು. ಈ ವೇಳೆ ಆರೋಗ್ಯ ತಪಾಸಣೆ ಮಾಡಿಕೊಳ್ಳಲೆಂದು ಸರ್ಕಾರಿ ಆಸ್ಪತ್ರೆಗೆ ತೆರಳುವ ವೇಳೆ ಅವಘಡ ಸಂಭವಿಸಿದೆ.
ಬ್ರಹ್ಮಾವರ ಪೊಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ