ಕೋಟೇಶ್ವರ: ಹಾವು ತಂದಿಟ್ಟ ಸಾವು: ಬೈಕ್ ಸವಾರ ದುರ್ಮರಣ
Team Udayavani, Sep 23, 2018, 3:08 PM IST
ಕುಂದಾಪುರ: ಕಾರು ಹರಿದು ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ಭಾನುವಾರ ಮಧ್ಯಾಹ್ನ ಕೋಟೇಶ್ವರ ಬಳಿಯ ಕಾಳಾವರದಲ್ಲಿ ನಡೆದಿದೆ. ಹಾಲಾಡಿ ನಿವಾಸಿ ಗಂಗಾಧರ (34) ಮೃತ ದುರ್ದೈವಿ.
ಹಾಲಾಡಿ- ಕೋಟೇಶ್ವರ ರಸ್ತೆಯ ಕಾಳಾವರದಲ್ಲಿ ಮಾರ್ಗ ಮಧ್ಯೆ ಹಾವು ಬಂತೆಂದು ಕಾರು ಚಾಲಕ ದಿಢೀರನೆ ಬ್ರೇಕ್ ಹಾಕಿದಾಗ ಹಿಂದಿನಿಂದ ಬರುತ್ತಿದ್ದ ಗಂಗಾಧರ ಬೈಕ್ ಕಾರಿಗೆ ಡಿಕ್ಕಿ ಹೊಡೆಯಿತು. ಇದೇ ಸಂದರ್ಭದಲ್ಲಿ ಅವರ ಹಿಂದಿನಿಂದ ಬಂದ ಮತ್ತೊಂದು ಕಾರು ಗಂಗಾಧರ ಅವರ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟರು ಎನ್ನಲಾಗಿದೆ.
ಮೃತ ಗಂಗಾಧರ ಅವರು ಹಾಲಾಡಿಯಲ್ಲಿ ಗ್ಯಾರೇಜ್ ಮಾಲಕ ರುದ್ರ ಆಚಾರ ಅವರ ಮಗನಾಗಿದ್ದು, ಎರಡು ವರ್ಷದ ಹಿಂದೆ ಮದುವೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ