ಹಳ್ಳಿಹೊಳೆ: ಬಾಚುಗುಳಿ ಕೊರಗ ಕಾಲನಿಗೆ ಡಿಸಿ ಭೇಟಿ
Team Udayavani, Sep 26, 2018, 1:45 AM IST
ಸಿದ್ದಾಪುರ: ಕುಂದಾಪುರ ತಾ| ಹಳ್ಳಿಹೊಳೆ ಗ್ರಾ.ಪಂ. ವ್ಯಾಪ್ತಿಯ ಕಮಲಶಿಲೆ ಗ್ರಾಮದ ಬಾಚುಗುಳಿ ಕೊರಗ ಕಾಲನಿಗೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರು ಭೇಟಿ ನೀಡಿ ಕೊರಗರ ಅಹವಾಲುಗಳನ್ನು ಸ್ವೀಕರಿಸಿದರು. ಮೂಲ ಸೌಕರ್ಯಗಳಾದ ಕುಡಿಯುವ ನೀರು, ರಸ್ತೆ ಹಾಗೂ ಮನೆ ಮಂಜೂರಾತಿ ಬಗ್ಗೆ ಸೂಚಿಸಿದರು. ಕುಡಿಯುವ ನೀರಿಗಾಗಿ ರೂ. 10 ಲಕ್ಷ ಮಂಜೂರಾಗಿದ್ದು ಅದರ ಕಾಮಗಾರಿ ಕೂಡಲೆ ನಿರ್ವಹಿಸುವಂತೆ ಸೂಚಿಸಿದರು. ಈಗಾಗಲೆ 3 ಕುಟುಂಬಗಳಿಗೆ ಮನೆ ಮಂಜೂರಾತಿ ಆಗಿದ್ದು, ಉಳಿದ 4 ಕುಟುಂಬಗಳಿಗೆ ಮನೆ ಮಂಜೂರಾತಿ ಮಾಡುವಂತೆ ಐಟಿಡಿಪಿ ಇಲಾಖೆಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರೊಂದಿಗೆ ಜಿ. ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಿವಾನಂದ ಕಾಪಶಿ, ಐಟಿಡಿಪಿ ಇಲಾಖೆ ಅಧಿಕಾರಿ ವಿಶ್ವನಾಥ, ಕುಂದಾಪುರ ತಾ. ಪಂ. ಕಾರ್ಯನಿರ್ವಾಣಾಧಿಕಾರಿ ಕಿರಣ್ ಪಡ್ನೇಕರ್, ಬೈಂದೂರು ತಹಶೀಲ್ದಾರ್ ಕಿರಣ ಗೌರಯ್ಯ, ಕೆಆರ್ಐಡಿಸಿ ನ ಇಇಕೆಎಸ್ ಹೆಪಸೂರ, ಎಇ ದಿನೇಶ, ಅರಣ್ಯಾಧಿಕಾರಿಗಳು, ಪೊಲೀಸ್ ಇನ್ಸ್ ಪೆಕ್ಟರ್, ಕಂದಾಯ ಇಲಾಖೆಯ ಅಧಿಕಾರಿಗಳು, ಪಿಡಿಒ ಅಧಿಕಾರಿಗಳು, ಆಹಾರ ಇಲಾಖೆಯವರು, ಗ್ರಾ. ಪಂ.ನ ಸದಸ್ಯರು, ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು