ಚೋರಾಡಿ-ಹಾಲಾಡಿ ರಸ್ತೆ ಸಂಪರ್ಕ ಕಡಿತದ ಭೀತಿ: ಆತಂಕದಲ್ಲಿ ಗ್ರಾಮಸ್ಥರು


Team Udayavani, Sep 28, 2018, 6:00 AM IST

2509kdpp1b.jpg

ಹಾಲಾಡಿ: ಸೂಕ್ತ ಸಾರಿಗೆ ಸೌಕರ್ಯವಿಲ್ಲದೆ ಸಮಸ್ಯೆ ಎದುರಿಸುತ್ತಿರುವ ಚೋರಾಡಿ ಗ್ರಾಮಸ್ಥರಿಗೆ ಈಗಿರುವ ಸಂಪರ್ಕ ತಪ್ಪುವ ಭೀತಿ ಎದುರಾಗಿದೆ. ಹಾಲಾಡಿಗೆ ಸಂಪರ್ಕ ಕಲ್ಪಿಸುವ ಮುದೂರಿ ತಿರುವಿನಲ್ಲಿ ರಸ್ತೆ ಬದಿಯಲ್ಲಿ ಕುಸಿದಿದ್ದು, ಆತಂಕಕ್ಕೆ ಕಾರಣವಾಗಿದೆ. 

ಹಾಲಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿರುವ ಚೋರಾಡಿಗೆ ಉತ್ತಮವಾದ ಡಾಮರು ರಸ್ತೆಯಿದ್ದರೂ  ಈ ವರೆಗೆ ಬಸ್‌ ವ್ಯವಸ್ಥೆ ಕಲ್ಪಿಸಿಲ್ಲ. ಅದರೊಂದಿಗೆ ಮುದೂರಿ ತಿರುವಿನಲ್ಲಿ ರಸ್ತೆಯ ಬದಿ ಜುಲೈ- ಆಗಸ್ಟ್‌ನಲ್ಲಿ ಸುರಿದ ಭಾರೀ ಮಳೆಗೆ ಕುಸಿದಿದೆ. ಈಗ ಮಳೆ ಕಡಿಮೆಯಿದ್ದು, ಇದನ್ನು ಕೂಡಲೇ ದುರಸ್ತಿ ಪಡಿಸದಿದ್ದರೆ ಮತ್ತಷ್ಟು ಕುಸಿಯುವುದಲ್ಲದೆ, ಸಂಪರ್ಕವೇ ಕಡಿತಗೊಳ್ಳುವ ಸಂಭವವಿದೆ. ಹಾಲಾಡಿಯಿಂದ ಚೋರಾಡಿ ಮೂಲಕವಾಗಿ ವಂಡಾರುಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಸಾಗಿದರೆ, ಚೇರ್ಕಿ, ಮುದೂರಿ, ಬಾಬಿನಾಡಿ, ಗೋರಾಜೆ, ಕಾಸಾಡಿ ಮೊದಲಾದ ಪ್ರದೇಶಗಳಿಗೂ ಸಂಚರಿಸಬಹುದು.

ಅಪಾಯಕಾರಿ ತಿರುವು
ಮುದೂರಿಯ ಈ ತಿರುವು ಅಪಾಯಕಾರಿಯಾಗಿದೆ. ಚೋರಾಡಿಯ ಜನರಿಗೆ ಕುಂದಾಪುರ, ಉಡುಪಿ, ಬೈಂದೂರು, ಆಗುಂಬೆ, ಸಾಗರ ಕಡೆಗೆ ತೆರಳಬೇಕಾದರೆ ಹಾಲಾಡಿ ಮಾರ್ಗವಾಗಿಯೇ ಹೋಗಬೇಕು. ಆದರೆ ಮುದೂರಿನಲ್ಲಿ ರಸ್ತೆ ಕುಸಿದಿರುವುದರಿಂದ ಸಮಸ್ಯೆ ಎದುರಾಗಿದ್ದು, ಕೂಡಲೇ ಸರಿಪಡಿಸದಿದ್ದರೆ, ಮತ್ತಷ್ಟು ಕುಸಿಯುವ ಸಾಧ್ಯತೆಯೂ ಇದ್ದು, ಸಂಚಾರ ವ್ಯವಸ್ಥೆಯೇ ಕಡಿತಗೊಳ್ಳುವ ಆತಂಕ ಈ ಭಾಗದ ಜನರದ್ದು. 

ಎಚ್ಚರಿಕೆ ಫಲಕ ಅಳವಡಿಕೆ
ವಾಹನ ಸವಾರರು ಜಾಗರೂಕತೆಯಿಂದ ಸಂಚರಿಸಲು “ಅಪಾಯ – ರಸ್ತೆ ಬದಿ ಕುಸಿದಿದೆ’ ಎನ್ನುವ ಎಚ್ಚರಿಕೆ ಫಲಕಗಳನ್ನು ಎರಡೂ ಬದಿಯಲ್ಲಿಯೂ ಹಾಕಲಾಗಿದೆ. 

ಸಂಪರ್ಕ ರಸ್ತೆ
ಹಾಲಾಡಿಯಿಂದ ಮಂದಾರ್ತಿಗೂ ಸಂಪರ್ಕ ಕಲ್ಪಿಸುವ ಹತ್ತಿರದ ಮಾರ್ಗ ಇದಾಗಿದೆ. ಈ ಮಾರ್ಗವಾಗಿ ಹಾಲಾಡಿಯಿಂದ ಚೋರಾಡಿಗೆ 6 ಕಿ.ಮೀ. ಆದರೆ, ವಂಡಾರಿಗೆ 7 ಕಿ.ಮೀ. ಇದ್ದರೆ, ಮಂದಾರ್ತಿಗೆ 15 ಕಿ.ಮೀ. ದೂರವಾಗಲಿದೆ. ಅದಲ್ಲದೆ ಉಡುಪಿ ಹಾಗೂ ಕುಂದಾಪುರ ತಾಲೂಕುಗಳೆರಡನ್ನು ಬೆಸೆಯುವ ಒಂದು ಮಾರ್ಗವು ಇದಾಗಿದೆ. 

ಹೆಚ್ಚುವರಿ ಅನುದಾನಕ್ಕೆ ಬೇಡಿಕೆ
ಜಿ.ಪಂ.ನಿಂದ ಬಂದ 3 ಲಕ್ಷ ರೂ. ಅನ್ನು ಈಗಾಗಲೇ ಹಾಲಾಡಿ ಗ್ರಾ.ಪಂ.ಗೆ ನೀಡಿದ್ದು, ವಿವಿಧ ಕಾಮಗಾರಿಗಳನ್ನು ನಡೆಸಲಾಗಿದೆ. ಕಡಿಮೆ ಅನುದಾನ ಇರುವುದರಿಂದ ಈ ರಸ್ತೆ ದುರಸ್ತಿಗೆ ಶಾಸಕರಿಗೆ ಹೆಚ್ಚುವರಿ ಅನುದಾನಕ್ಕೆ ಬೇಡಿಕೆ ಸಲ್ಲಿಸಿದ್ದು, ಅವರು ಮುಖ್ಯಮಂತ್ರಿ ನಿಧಿಯಿಂದ ಒದಗಿಸಲಾಗುವುದು ತಿಳಿಸಿದ್ದಾರೆ. 
– ಸುಪ್ರೀತಾ ಉದಯ ಕುಲಾಲ್‌, ಜಿ.ಪಂ. ಸದಸ್ಯರು

ದುರಸ್ತಿ ಮಾಡಲಿ
ಇದು ಜಿ.ಪಂ. ರಸ್ತೆಯಾಗಿದ್ದು, ಹಾಲಾಡಿ ಗ್ರಾ.ಪಂ.ನಿಂದ ಈಗಾಗಲೇ ಈ ರಸ್ತೆಯ ದುರಸ್ತಿಗೆ ನಿರ್ಣಯ ಮಾಡಿ ಕಳುಹಿಸಲಾಗಿದೆ. ಶಾಸಕರ ಗಮನಕ್ಕೂ ಬಂದಿದೆ. ಈಗಾಗಲೇ ಘನ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ರಸ್ತೆ ಕಡಿತಗೊಂಡರೆ ಈ ಮಾರ್ಗದಲ್ಲಿ ನಿತ್ಯ ಸಂಚರಿಸುವ ಸಾವಿರಾರು ಮಂದಿಗೆ ತೊಂದರೆಯಾಗಲಿದೆ. ಕೂಡಲೇ ದುರಸ್ತಿ ಮಾಡಲಿ. 
– ಅಶೋಕ್‌ ಶೆಟ್ಟಿ ಚೋರಾಡಿ,ಸ್ಥಳೀಯ ಗ್ರಾ.ಪಂ. ಸದಸ್ಯ

ಟಾಪ್ ನ್ಯೂಸ್

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.