ಗಂಗೊಳ್ಳಿ : ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಿಸಲು ಪ್ರಯತ್ನ


Team Udayavani, Sep 29, 2018, 6:20 AM IST

2809kdpp7.jpg

ಗಂಗೊಳ್ಳಿ: ಗಂಗೊಳ್ಳಿ ಗ್ರಾ. ಪಂ. ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಲು ಎಲ್ಲ ಅರ್ಹತೆ ಹೊಂದಿದ್ದು, ಈ ಬಗ್ಗೆ ಸರಕಾರದ ಗಮನ ಸೆಳೆಯಲಾಗುವುದು ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. 

ಅವರು ಶುಕ್ರವಾರ ಗಂಗೊಳ್ಳಿ ಗ್ರಾ.ಪಂ. ಕಚೇರಿಗೆ ಭೇಟಿ ನೀಡಿ, ಗ್ರಾಮ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಕೆಎಫ್‌ಡಿಸಿಯಿಂದ ನಿರ್ಮಾಣಗೊಂಡ ಮೀನು ಮಾರುಕಟ್ಟೆ ಕಾಮಗಾರಿ ಅಪೂರ್ಣಗೊಂಡಿದ್ದು ಮತ್ತು ಪಂಚಾಯತ್‌ ಅನುದಾನದಿಂದ ಪೂರ್ಣಗೊಳಿಸಲಾಗಿದೆ. ಈ ಬಗ್ಗೆ ಕೆಎಫ್‌ಡಿಸಿ ವಿರುದ್ಧ ಸೂಕ್ತ ತನಿಖೆ ನಡೆಸಲು ಸೂಚನೆ ನೀಡಲಾಗುವುದು. ಮ್ಯಾಂಗನೀಸ್‌ ರಸ್ತೆ ಪ್ರದೇಶದ ಜಾಗ ಬಂದರು ಇಲಾಖೆಯಿಂದ ಕಂದಾಯ ಇಲಾಖೆಗೆ ಹಸ್ತಾಂತರಗೊಂಡಿದ್ದು, ಇಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳು, ಮೇಲ್‌ಗ‌ಂಗೊಳ್ಳಿಯ 20 ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸ್ಮಶಾನ ಜಾಗ ವಿಂಗಡಿಸುವಂತೆ ಡಿಸಿಗೆ ಸೂಚನೆ ನೀಡಲಾಗುವುದು ಎಂದರು.

848 ಮಂದಿಗೆ ನಿವೇಶನಕ್ಕೆ ಪ್ರಯತ್ನ
ಗ್ರಾ. ಪಂ. ವ್ಯಾಪ್ತಿಯಲ್ಲಿ ಮಂಜೂರಾದ 63 ಮನೆಗಳ ಪೈಕಿ 18 ಮನೆಗಳು ಪೂರ್ಣಗೊಂಡಿದ್ದು, 848 ನಿವೇಶನ ರಹಿತರಿಗೆ ನಿವೇಶನ ಮತ್ತು 388 ವಸತಿ ರಹಿತರಿಗೆ ವಸತಿ ನೀಡುವ ಸಂಬಂಧ ಸರಕಾರದ ಗಮನ ಸೆಳೆಯಲಾಗುವುದು. 94ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ 18 ಫಲಾನುಭವಿಗಳ ಅರ್ಜಿ ತಿರಸ್ಕೃತಗೊಂಡಿದ್ದು, 5 ಅರ್ಜಿಗಳು ಇತ್ಯರ್ಥಗೊಳ್ಳದೆ ಬಾಕಿಯಿದೆ. ಬೇಲಿಕೇರಿ ಪ್ರದೇಶದ 40 ಅರ್ಜಿಗಳು ಸಿಆರ್‌ಝಡ್‌ ಕಾನೂನಿನಿಂದ ಹಕ್ಕು ಪತ್ರ ವಿತರಿಸಲು ಸಾಧ್ಯವಾಗಿಲ್ಲ ಎಂದವರು ಹೇಳಿದರು. 

ಅಧಿಕಾರಿಗಳ ಸಭೆ
ಬೈಂದೂರು ಶಾಸಕ ಬಿ.ಎಂ.ಸುಕುಮಾರ್‌ ಶೆಟ್ಟಿ ಮಾತನಾಡಿ, ಗಂಗೊಳ್ಳಿಯ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಗ್ರಾಮಕ್ಕೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಲಾಗುವುದು. ಗಂಗೊಳ್ಳಿಯ ದೊಡ್ಡಹಿತ್ಲು ಚರಂಡಿ ಹೂಳೆತ್ತುವ, ಮಲ್ಯರಬೆಟ್ಟು, ದುರ್ಗಾಕೇರಿ ಸ್ಮಶಾನ ದುರಸ್ತಿ ಬಗ್ಗೆ ಕೂಡಲೇ ಕ್ರಮಕೈಗೊಳ್ಳಬೇಕು ಎಂದರು.

ಚರ್ಚ್‌ ರಸ್ತೆಯಲ್ಲಿರುವ ಮಡಿವಾಳರ ಕೆರೆ ಮತ್ತು ಬಂದರು ಸಮೀಪದ ಕೆರೆ ಒತ್ತುವರಿ ತೆರವು ಹಾಗೂ ಸೂಕ್ತ ಭದ್ರತಾ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದರು.

ಜಿ.ಪಂ. ಸದಸ್ಯೆ ಶೋಭಾ ಪುತ್ರನ್‌, ತಾ. ಪಂ. ಸದಸ್ಯ ಸುರೇಂದ್ರ ಖಾರ್ವಿ, ತಾ. ಪಂ. ಸಹಾಯಕ ನಿರ್ದೇಶಕ ಎಚ್‌.ವಿ.ಇಬ್ರಾಹಿಂಪುರ, ಗ್ರಾ. ಪಂ. ಆಡಳಿತಾಧಿಕಾರಿ ಚಂದ್ರಶೇಖರ್‌, ಕಂದಾಯ ಇಲಾಖೆಯ ರೆವಿನ್ಯೂ ಇನ್ಸ್‌ಪೆಕ್ಟರ್‌ ಅಶೋಕ ಕುಮಾರ್‌, ಗ್ರಾಮಕರಣಿಕ ರಾಘವೇಂದ್ರ ದೇವಾಡಿಗ, ‌ ವೈದ್ಯಾಧಿಕಾರಿ ಡಾ| ಶ್ವೇತಾ, ಮೆಸ್ಕಾಂನ ಗಂಗೊಳ್ಳಿ ಶಾಖೆಯ ಜೆಇ ವಿಶ್ವನಾಥ, ಬಂದರು ಇಲಾಖೆಯ ಅಂತೋನಿ, ಸಿಆರ್‌ಪಿ ತಿಲೋತ್ತಮ ನಾಯಕ್‌, ಜಿ.ಪಂ. ಸಹಾಯಕ ಇಂಜಿನಿಯರ್‌ ಶ್ರೀಕಾಂತ್‌, ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು.ಪಿಡಿಒ ಬಿ.ಮಾಧವ ಸ್ವಾಗತಿಸಿದರು. ಸಿಬಂದಿ ಶೇಖರ್‌ ಜಿ. ವಂದಿಸಿದರು.

ಮೇಲ್ದರ್ಜೆಗೇರಿಸಲು ಮನವಿ
ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲು ಮತ್ತು ಖಾಲಿ ಇರುವ ಹುದ್ದೆಗಳನ್ನು ಭರ್ತಿಗೆ ಸರಕಾರಕ್ಕೆ ಮನವಿ ಮಾಡುತ್ತೇನೆ. ಮ್ಯಾಂಗನೀಸ್‌ ವಾರ್ಫ್‌ ಪ್ರದೇಶದಲ್ಲಿ ದಾರದೀಪ ಅಳವಡಿಕೆ ಹಾಗೂ ಚರಂಡಿ ದುರಸ್ತಿ ಬಗ್ಗೆ ಬಂದರು ಇಲಾಖೆಯ ನಿರ್ದೇಶಕರೊಂದಿಗೆ ಚರ್ಚೆ ನಡೆಸಿ ಸೂಕ್ತ ಕ್ರಮ, ಗಂಗೊಳ್ಳಿ ವಿದ್ಯುತ್‌ ಉಪಕೇಂದ್ರವನ್ನು 24*7 ಆಗಿ ಮಾಡಲು ಇಲಾಖೆಯ ಮೇಲೆ ಒತ್ತಡ ತರಲಾಗುವುದು, ಗಂಗೊಳ್ಳಿ ಮೀನುಗಾರಿಕಾ ಬಂದರಿನ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಮುಂದಿನ ವಾರ ಬಂದರಿಗೆ ಭೇಟಿ ನೀಡಲಾಗುವುದು. ಗಂಗೊಳ್ಳಿಗೆ ಅಗತ್ಯವಿರುವ ರಿಂಗ್‌ ರೋಡ್‌ ನಿರ್ಮಾಣದ ಸಾಧಕ ಬಾಧಕಗಳ ಬಗ್ಗೆ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸಿ ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್‌ ಮೂಲಕ ಅಂದಾಜುಪಟ್ಟಿ ಸಿದ್ಧಪಡಿಸಿ ಕೊಡುವಂತೆ ಕೋಟ ಇದೇ ವೇಳಿ ತಿಳಿಸಿದರು

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.