ಕುಂದಾಪುರ: ಲಾಡ್ಜ್ನಲ್ಲಿ ಜೋಡಿ ಆತ್ಮಹತ್ಯೆ


Team Udayavani, Oct 1, 2018, 10:30 AM IST

kundapura.jpg

ಕುಂದಾಪುರ: ಶಾಸ್ತ್ರೀ ಸರ್ಕಲ್‌ ಸಮೀಪದ ಖಾಸಗಿ ವಸತಿಗೃಹದಲ್ಲಿ ಕೊಠಡಿ ಪಡೆದಿದ್ದ ಶೃಂಗೇರಿ ಮೂಲದ 43 ವರ್ಷದ ವ್ಯಕ್ತಿ ಹಾಗೂ 30ರ ಹರೆಯದ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಬೆಳಗ್ಗೆ ಸುಮಾರು 11.30ರ ಸುಮಾರಿಗೆ ಬೆಳಕಿಗೆ ಬಂದಿದೆ.

ಶೃಂಗೇರಿ ತಾಲೂಕಿನ ಅಡ್ಡಗದ್ದೆ ಗ್ರಾಮದ ಸಿಂಧುವಳ್ಳಿಯ ಗುರುಮೂರ್ತಿ (43) ಹಾಗೂ ಅದೇ ಗ್ರಾಮದ ನೇತ್ರಳ್ಳಿ ನಿವಾಸಿ ರಮೇಶ್‌ ಮೊಗವೀರ ಅವರ ಪತ್ನಿ ಶಾರದಾ (30) ಆತ್ಮಹತ್ಯೆ ಮಾಡಿಕೊಂಡವರು.

ಬೆಳಗ್ಗೆ 11 ಗಂಟೆಯಾದರೂ ಬಾಗಿಲು ತೆರೆಯದ ಕಾರಣ ಲಾಡ್ಜ್ ಸಿಬಂದಿ ಬಾಗಿಲು ಬಡಿದರು. ಆದರೂ ಪ್ರತಿಕ್ರಿಯೆ ಬಾರದ್ದರಿಂದ ಸಂಶಯಗೊಂಡು ಕಿಟಕಿ ಮೂಲಕ ಇಣುಕಿ ನೋಡಿದಾಗ ಗುರುಮೂರ್ತಿ ಹಾಸಿಗೆಯ ಮೇಲೆ ಹಾಗೂ ಶಾರದಾ ನೆಲದ ಮೇಲೆ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಯಿತು. ಇಬ್ಬರ ಮನೆಯವರೂ ಶೃಂಗೇರಿಯಿಂದ ಬಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಕೊಠಡಿಯ ಬಾಗಿಲು ಒಡೆಯಲಾಯಿತು.

ಗುರುಮೂರ್ತಿ ಮನೆಗೆ ಶಾರದಾ ಹಾಗೂ ಅವರ ಪತಿ ರಮೇಶ್‌ ಕೂಲಿ ಕೆಲಸಕ್ಕೆ ಹೋಗುತ್ತಿದ್ದು, ಈ ವೇಳೆ ಶಾರದಾ ಹಾಗೂ ಗುರುಮೂರ್ತಿ ಮಧ್ಯೆ ಆತ್ಮೀಯತೆ ಬೆಳೆಯಿತು ಎನ್ನಲಾಗಿದೆ. ಅವರಿಬ್ಬರ ಸಂಬಂಧ ಊರಿನವರಿಗೆ ಗೊತ್ತಾಗುತ್ತದೆ ಎಂದು ತಿಳಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.

ಗುರುಮೂರ್ತಿ ಬೆಂಗಳೂರಿನಲ್ಲಿರುವುದಾಗಿ ಸಂಬಂಧಿಕರಿಗೆ ಫೋನ್‌ ಮೂಲಕ ತಿಳಿಸಿದ್ದಾರೆ. ಶಾರದಾ ಅವರು ಸೆ. 23ರಂದು ಪುತ್ರಿಯೊಂದಿಗೆ ಗಂಡನ ಮನೆಯಿಂದ ತಾಯಿ ಮನೆಗೆ ಬಂದಿದ್ದು, ಸೆ. 24ರಂದು ಪುತ್ರಿಯ ಟಿಸಿ ತರಲು ಶಾಲೆಗೆ ಹೋಗಿ ಬರುತ್ತೇನೆ ಎಂದು ಹೇಳಿ, ಅಲ್ಲಿಂದ ಮನೆಗೆ ಮರಳದೆ ನಾಪತ್ತೆಯಾಗಿದ್ದರು. ಇಬ್ಬರೂ ಕೂಡ ಸೆ. 24ರಂದು ಊರಿಂದ ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

ಶಾಸ್ತ್ರೀ ಸರ್ಕಲ್‌ ಸಮೀಪದ ಹೊಟೇಲ್‌ಸೆ. 26ರಂದು ಬಂದ ಅವರು ದಂಪತಿಯೆಂದು ಮಾಹಿತಿ ನೀಡಿ ಕೊಠಡಿ ಪಡೆದಿದ್ದರು. ಸೆ. 29ರಂದು ರಾತ್ರಿ 10 ಗಂಟೆಯ ಬಳಿಕ ರವಿವಾರ ಬೆಳಗ್ಗಿನ ನಡುವೆ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಎಡಿಶನಲ್‌ ಎಸ್ಪಿ ಕುಮಾರ ಚಂದ್ರ ಭೇಟಿ ನೀಡಿದರು. ಎಸ್‌ಐ ಹರೀಶ್‌ ಆರ್‌. ನಾಯ್ಕ, ಪೊಲೀಸ್‌ ಸಿಬಂದಿ ಚೇತನ್‌ ಮತ್ತಿತರರು ಭೇಟಿ ನೀಡಿ, ಮೃತದೇಹವನ್ನು ಹೊರತೆಗೆಯಲು ಸಹಕರಿಸಿದರು. ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಎರಡೂ ಕಡೆಯವರಿಗೂ ಮೃತದೇಹ ವನ್ನು ಹಸ್ತಾಂತರಿಸಲಾಯಿತು.

ಇಬ್ಬರೂ ವಿವಾಹಿತರು
ಇಬ್ಬರೂ ವಿವಾಹಿತರಾಗಿದ್ದು, ಮಕ್ಕಳನ್ನು ಹೊಂದಿದ್ದಾರೆ. ಗುರುಮೂರ್ತಿ ಕೃಷಿಕರಾಗಿದ್ದು 8 ವರ್ಷದ ಹೆಣ್ಣು ಮಗುವಿದ್ದರೆ, ಗೃಹಿಣಿಯಾಗಿರುವ ಶಾರದಾ ಅವರಿಗೆ ರಮೇಶ್‌ ಅವರೊಂದಿಗೆ 10 ವರ್ಷದ ಹಿಂದೆ ವಿವಾಹವಾಗಿದ್ದು, 8 ವರ್ಷದ ಹೆಣ್ಣು ಮಗುವಿದೆ.

ಪತಿ ವಿರುದ್ಧ ದೂರು
ಕೊಠಡಿಯಲ್ಲಿ ಶಾರದಾ ಬರೆದಿಟ್ಟಿದ್ದ ಡೆತ್‌ನೋಟ್‌ ಲಭಿಸಿದ್ದು, “ನನ್ನ ಸಾವಿಗೆ ಗಂಡನ ಕಿರುಕುಳವೇ ಕಾರಣ’ ಎಂಬ ಉಲ್ಲೇಖವಿದೆ. ಅದರಂತೆ ಆಕೆಯ ಸಹೋದರ ರಮೇಶ್‌ ಕುಂದಾಪುರ ಪೊಲೀಸರಿಗೆ ದೂರು ನೀಡಿದ್ದು, ಪತಿ ರಮೇಶ್‌ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.