ಕಾಮಗಾರಿ ಮುಗಿದರೂ ಪೂರ್ಣ ಹಲಗೆ ಅಳವಡಿಸದೆ ನಿಷ್ಪ್ರಯೋಜಕ


Team Udayavani, Oct 3, 2018, 1:05 AM IST

kindi-2-10.jpg

ಆಜ್ರಿ: ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು ಒಂದು ಕೋಟಿ ರೂ.ಗೂ ಮಿಕ್ಕಿದ ಅನುದಾನದಲ್ಲಿ ನಿರ್ಮಾಣಗೊಂಡ, ಬೇಸಿಗೆ ಸಮಯದಲ್ಲಿ ನೂರಾರು ಎಕರೆ ಕೃಷಿ ಭೂಮಿಗೆ ನೀರುಣಿಸುವ ಚೋನಮನೆ ಕಿಂಡಿ ಅಣೆಕಟ್ಟಿನ ಕಾಮಗಾರಿ ಪೂರ್ಣಗೊಂಡರೂ, ಸಂಪೂರ್ಣ ಹಲಗೆ ಅಳವಡಿಸದ ಕಾರಣ ಕಿಂಡಿ ಅಣೆಕಟ್ಟು ಇದ್ದರೂ ನಿಷ್ಪ್ರಯೋಜಕವಾಗಿದೆ. ಜುಲೈ-ಆಗಸ್ಟ್‌ನಲ್ಲಿ ಅತಿವೃಷ್ಟಿಯಾಗಿದ್ದರೂ ಸೆಪ್ಟಂಬರ್‌ನಲ್ಲಿ ಅನಾವೃಷ್ಟಿಯಿಂದ ನದಿ, ಹೊಳೆ, ಡ್ಯಾಂ, ಹಳ್ಳಗಳಲ್ಲಿ ಅಂತರ್ಜಲ ಮಟ್ಟ ಸಾಕಷ್ಟು ಪ್ರಮಾಣದಲ್ಲಿ ಕಡಿಮೆಯಾಗಿರುವ ತಾಜಾ ನಿದರ್ಶನ ನಮ್ಮೆಲ್ಲರ ಕಣ್ಣ ಮುಂದೆಯೇ ಇದೆ. ಇಂತಹ ಸಂದರ್ಭ ಕಿಂಡಿ ಅಣೆಕಟ್ಟು, ವೆಂಟೆಂಡ್‌ ಡ್ಯಾಂಗಳಲ್ಲಿ ನೀರು ಸಂಗ್ರಹ ಮಾಡುವುದರಿಂದ ಅಂತರ್ಜಲ ಮಟ್ಟ ಹೆಚ್ಚಿಸಲು ಸಹಕಾರಿಯಾಗುತ್ತದೆ.

ಆಜ್ರಿ ಗ್ರಾಮದಲ್ಲಿರುವ ಚೋನಮನೆ ಶ್ರೀ ಶನೈಶ್ಚರ ದೇವಸ್ಥಾನದ ಸಮೀಪವಿರುವ ನದಿಗೆ ಅಡ್ಡಲಾಗಿ ಸುಮಾರು 1.60 ಕೋ.ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಕಿಂಡಿ ಅಣೆಕಟ್ಟುವಿನಲ್ಲಿ ಅರ್ಧದವರೆಗೆ ಮಾತ್ರ ಹಲಗೆ ಅಳವಡಿಸಿದ್ದಾರೆ. ಈಗ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಾಗುತ್ತಿಲ್ಲ. ಇದರಿಂದ ಆಜ್ರಿ, ತಗ್ಗುಂಜೆ,ಬೆಳುವಾಣ, ಚೋನಮನೆ, ಗೂಂಜಾಡಿ, ಹೊಸಬಾಳು ಭಾಗದ ಸುಮಾರು 300 ಎಕರೆ ಕೃಷಿ ಭೂಮಿಗೆ ನೀರು ಪೂರೈಕೆ ಮುಂದಿನ ದಿನಗಳಲ್ಲಿ ಕಷ್ಟವಾಗಲಿದೆ ಎನ್ನುವುದು ಇಲ್ಲಿನ ರೈತರ ಅಭಿಪ್ರಾಯ.


ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸಿದ್ದರೂ, ನೀರು ಕೆಳಕ್ಕೆ ಸೋರಿಕೆಯಾಗುತ್ತಿರುವುದು.

ಕಿರು ವಿದ್ಯುತ್‌ ಯೋಜನೆ
ಭವಿಷ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಇಲ್ಲಿ ನೀರು ಸಂಗ್ರಹವಾದರೆ ಈ ಭಾಗದ ಸುತ್ತಮುತ್ತಲಿನ ಹಳ್ಳಿ ಪ್ರದೇಶಕ್ಕೆ ಅನುಕೂಲವಾಗುವಂತೆ ಕಿರು ವಿದ್ಯುತ್‌ ಯೋಜನೆಯನ್ನು ಕೂಡ ಆರಂಭಿಸಬಹುದು. ಈ ಸಂಬಂಧ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೂ ಮನವಿ ಸಲ್ಲಿಸಲಾಗಿತ್ತು ಎನ್ನುತ್ತಾರೆ ಸ್ಥಳೀಯರಾದ ರಾಜೀವ್‌ ಶೆಟ್ಟಿ.

2 ದಶಕದ ಹೋರಾಟ
ಆಜ್ರಿಯಿಂದ ಚೋನಮನೆ – ಕಮಲಶಿಲೆಗೆ ಸಂಪರ್ಕ ಕಲ್ಪಿಸುವ ಸೇತುವೆ ಹಾಗೂ ಇಲ್ಲೊಂದು ಕಿಂಡಿ ಅಣೆಕಟ್ಟು ನಿರ್ಮಿಸಬೇಕು ಎನ್ನುವ ಬೇಡಿಕೆ 2 ದಶಕದ ಹಿಂದಿನದ್ದು. ಶ್ರೀ ಶನೈಶ್ಚರ ದೇವಸ್ಥಾನದ ಆಡಳಿತ ಧರ್ಮದರ್ಶಿ ಚೋನಮನೆ ಅಶೋಕ ಶೆಟ್ಟಿ ನೇತೃತ್ವದಲ್ಲಿ ಸೇತುವೆಗಾಗಿ ಹೋರಾಟವು ನಡೆದಿತ್ತು. ಕಳೆದ ಅವಧಿಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ, ಹಿಂದಿನ ಶಾಸಕ ಗೋಪಾಲ ಪೂಜಾರಿ ಮುತುವರ್ಜಿಯಲ್ಲಿ 1.60 ಕೋ.ರೂ. ಅನುದಾನ ಮಂಜೂರಾಗಿ, ಈಗ ಕಾಮಗಾರಿಯೂ ಮುಗಿದಿದೆ.

ಇದ್ದ ಹಲಗೆಯಿಂದಲೂ ಸೋರಿಕೆ
ಈಗ ಅರ್ಧದವರೆಗೆ ಹಲಗೆ ಅಳವಡಿಸಲಾಗಿದೆ. ಆದರೆ ಈಗ ಅಳವಡಿಸಿರುವ ಹಲಗೆಯ ಕೆಳಗ್ಗಿನಿಂದ, ಮಧ್ಯದಲ್ಲಿ ಸರಿಯಾಗಿ ಹಲಗೆ ಅಳವಡಿಸದ ಕಾರಣ ಅಲ್ಲಿ ನೀರು ಸೋರಿಕೆಯಾಗಿ, ಕೆಳಗೆ ಹರಿಯುತ್ತಿದೆ.

ಸೋರಿಕೆ ನಿಲ್ಲಿಸಿ
ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದೆ. ಆದರೆ ಈಗ ಈ ಕಿಂಡಿ ಅಣೆಕಟ್ಟು ನಿರ್ಮಾಣವಾದರೂ, ಅಲ್ಲಿಗೆ ಪೂರ್ತಿ ಮೇಲಿನವರೆಗೆ ಹಲಗೆ ಅಳವಡಿಸಿಲ್ಲ. ಅದಲ್ಲದೆ ಈಗ ಅಳವಡಿಸಿರುವ ಹಲಗೆಯ ಅಡಿಯಿಂದ, ಮಧ್ಯದಿಂದ ನೀರು ಕೆಳಕ್ಕೆ ಸೋರಿಕೆಯಾಗುತ್ತಿದೆ. ಇದರಿಂದ ಕಿಂಡಿ ಅಣೆಕಟ್ಟು ನಿರ್ಮಿಸಿದರೂ ಏನೂ ಪ್ರಯೋಜನವಾಗುವುದಿಲ್ಲ. ಈ ಭಾಗದ ಅನೇಕ ರೈತರು ಇದೇ ನೀರನ್ನು ಕೃಷಿಗೆ ಆಶ್ರಯಿಸಿದ್ದಾರೆ.
– ಚೋನಮನೆ ಅಶೋಕ ಶೆಟ್ಟಿ, ಸ್ಥಳೀಯರು

ಹೊಸದಾಗಿ ಹಲಗೆ ಅಳವಡಿಕೆ
ನಾನು ಕಳೆದವಾರ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈಗ ಅಳವಡಿಸಿರುವ ಹಲಗೆ ಸರಿಯಾಗದ ಕಾರಣ ಅದನ್ನು ತೆಗೆದು, ಹೊಸದಾಗಿ ಅಳವಡಿಸಲು ಸೂಚಿಸಲಾಗಿದೆ. ನೀರಿನ ಹರಿವು ಹೆಚ್ಚಾಗಿರುವುದರಿಂದ ಈಗ ಪೂರ್ತಿಯಾಗಿ ಅಳವಡಿಸಲು ಸಾಧ್ಯವಾಗುತ್ತಿಲ್ಲ.
– ಸುರೇಂದ್ರ ಎಸ್‌., ಎಇಇ, ಸಣ್ಣ ನೀರಾವರಿ ಇಲಾಖೆ ಉಡುಪಿ 

— ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.