ಮನೆಗಳಿಗೆ ತಿರುಗಿ ಹಾಡು ಹೇಳುವ ಕಿನ್ನರಿ ಜೋಗಿಗಳು 


Team Udayavani, Oct 6, 2018, 6:30 AM IST

0510kota1e.jpg

ಕೋಟ: ತಲೆಗೆ ರುಮಾಲು ಸುತ್ತಿ,ಬಣ್ಣದ ನಿಲುವಂಗಿ ತೊಟ್ಟು, ಕೊರಳಿಗೆ ಮಣಿ ಸರ ಧರಿಸಿ, ಹಣೆಗೆ ವಿಭೂತಿ-ಹೆಗಲಿಗೊಂದು ಜೋಳಿಗೆ, ಕೈಯಲ್ಲಿ ಕೋಲು ಕಿನ್ನರಿ ಹಿಡಿದು ಹಾಡುಗಳನ್ನ ಹಾಡುತ್ತ  ಮನೆಗೆ ಭೇಟಿಕೊಡುವ ಕಿನ್ನರಿ ಜೋಗಿ ಬಗ್ಗೆ ಎಲ್ಲರಿಗೂ ತಿಳಿದಿದೆ. ಇವರ ಈ ಆಚರಣೆಯ ಹಿಂದೆ ಒಂದಷ್ಟು ವಿಶೇಷತೆ ಇದ್ದು, ಕರಾವಳಿಗೂ ಇವರಿಗೂ ಅವಿನಾಭಾವ ನಂಟಿದೆ.ಕಿನ್ನರಿ ಬಾರಿಸುವುದರಿಂದ ಕಿನ್ನರಿ ಜೋಗಿ ಕಿನ್ನರಿ ಜೋಗಿಗಳಲ್ಲಿ  ಹೆಚ್ಚಿನವರು ಮಲೆನಾಡು, ಬಯಲುಸೀಮೆಯವರು. ಕಿನ್ನರಿ ಬಾರಿಸುವುದರಿಂದ ಇವರಿಗೆ ಈ ಹೆಸರು ಬಂತು ಎನ್ನುವ ಐತಿಹ್ಯವಿದೆ. 

ಇವರ ಕೈಯಲ್ಲಿರುವ ಸೋರೆ ಬುರುಡೆಯಿಂದ ಮಾಡಿದ ಸಂಗೀತವಿದ್ದು ಇದನ್ನು ಬಿದಿರಿನ ಕೋಲು, ಚೆಕ್ಕೆ, ಜೇನುಮೇಣ, ತಂತಿ ಬಳಸಿ ಇದನ್ನು ತಯಾರಿಸಲಾಗುತ್ತದೆ. ಇದರ ತಂತಿಯನ್ನು ಹೆಬ್ಬರಳಿಗೆ ಸಿಕ್ಕಿಸಿಕೊಂಡ ಗಗ್ಗರದಿಂದ ಮೀಟಿ, ಶ್ರುತಿಗೆ ಸರಿಹೊಂದುವಂತೆ ಹಾಡು ಹೇಳುತ್ತಾರೆ. 

ಹಿಂದೆ ಇವರು ವರ್ಷ 
ಪೂರ್ತಿ ಊರೂರು ತಿರುಗಿ ಅಲೆಮಾರಿಗಳಂತೆ ಜೀವನ ನಡೆಸುತ್ತಿದ್ದರು. ಆದರೆ ಇದೀಗ ವರ್ಷದಲ್ಲಿ ಒಂದೆರಡು ತಿಂಗಳು ಮಳೆಗಾಲದಲ್ಲಿ ಮಾತ್ರ ಕಾಣಸಿಗುತ್ತಾರೆ. ಮಿಕ್ಕುಳಿದ ದಿನದಲ್ಲಿ ಊರಿನಲ್ಲಿ ಬೇರೆ-ಬೇರೆ ಕೆಲಸ ನಿರ್ವಹಿಸುತ್ತಾರೆ.

ಮಹಾಭಾರತದ ಸನ್ನಿವೇಶಗಳ ವರ್ಣನೆ
ಪಾಂಡವರ ವಂಶಸ್ಥರು ಎಂದು ಕರೆದು ಕೊಳ್ಳುವ ಇವರು ಮಹಾಭಾರತದ  ವನವಾಸ, ಜೂಜಾಟ, ವಸ್ತ್ರಾಪಹರಣ ಸನ್ನಿವೇಶಗಳನ್ನು ಹಾಡಿನ ರೂಪದಲ್ಲಿ ಕಟ್ಟಿಕೊಡುತ್ತಾರೆ. ಇವರಲ್ಲಿ  ಕೆಲವರು ಮಹಾಭಾರತದ ಹತ್ತು- ಹದಿಮೂರು ಪರ್ವ ಗಳನ್ನು ಬಾಯಿಪಾಠ ಮಾಡಿ ಹಾಡುವ ಗಟ್ಟಿಗರಿದ್ದಾರೆ.

ಕಟ್ಟುಕಟ್ಟಲೆ ಸೇವೆ
ವರ್ಷಕ್ಕೊಮ್ಮೆ ಬೇರೆ-ಬೇರೆ ಊರಿಗೆ ತೆರಳಿ ಹಾಡು ಹಾಡಿ ಹಣ, ಧವಸ ಧಾನ್ಯಗಳನ್ನು ಸಂಗ್ರಹಿಸಿ ಕುಲದೇವ ಭೆ„ರವ ಸ್ವಾಮಿ ಮತ್ತು ಗುರು ಪೀಠಕ್ಕೆ ಕಾಣಿಕೆ ಸಲ್ಲಿಸಿ ಊರಿಗೆ ತೆರಳಬೇಕು ಎನ್ನುವುದು ಇವರಲ್ಲಿ ತಲೆತಲಾಂತರದಿಂದ ಬಂದ ಸಂಪ್ರದಾಯವಾಗಿದ್ದು ಇದನ್ನು ಪಾಲಿಸದಿದ್ದರೆ ದೇವರ ಕೋಪಕ್ಕೆ ತುತ್ತಾಗಬೇಕು ಎನ್ನುವ ಭಯವಿದೆ. ಮಕ್ಕಳು ವಿದ್ಯಾವಂತರಾಗಿರುವುದರಿಂದ ಕೆಲವರು ಆರ್ಥಿಕವಾಗಿಯೂ ಸದೃಢರಾಗಿದ್ದಾರೆ. ಆದರೆ ಧಾರ್ಮಿಕ ನಂಬಿಕೆ ಗಟ್ಟಿಯಾಗಿರುವುದರಿಂದ ಮನೆಯಲ್ಲೊಬ್ಬರು ಅಥವಾ ಕುಟುಂಬದಲ್ಲೊಬ್ಬರು  ವರ್ಷದಲ್ಲಿ ಒಂದು ತಿಂಗಳು ಊರೂರು ತಿರುಗಾಟ ನಡೆಸುತ್ತಾರೆ. 

ಕರಾವಳಿಯ ಜತೆ ವಿಶೇಷ ನಂಟು
ಕಿನ್ನರಿ ಜೋಗಿಗಳಿಗೆ ಕರಾವಳಿಯ ವಿಶೇಷ ನಂಟಿದೆ.  ಇವರ  ಗುರು ಪೀಠವಿರುವುದು ಕರಾವಳಿಯಲ್ಲಿ ಹಾಗೂ  ಕೃಷ್ಣ ಜನ್ಮಾಷ್ಠಮಿಯಿಂದ  ನವರಾತ್ರಿ ಕೊನೆಯ ತನಕ  ಮಂಗಳೂರಿನಿಂದ ಭಟ್ಕಳ ತನಕ ಇವರು ತಿರುಗಾಟ ನಡೆಸುತ್ತಾರೆ. ಕರಾವಳಿಗರ ಆತಿಥ್ಯ ಇವರಿಗೆ ಅಚ್ಚುಮೆಚ್ಚು.  ಹೀಗಾಗಿ ಇವರ  ಬಹುತೇಕ ತಿರುಗಾಟ ಕರಾವಳಿಗೆ ಸೀಮಿತಗೊಂಡಿದೆ.

ಕುಲದೇವರಿಗೆ ಕಾಣಿಕೆ
ನಾನು ಸುಮಾರು 40ವರ್ಷದಿಂದ ಈ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದೇನೆ. ವರ್ಷದಲ್ಲಿ ಒಂದು ಬಾರಿ ನಾವು  ಇದನ್ನು ಕಡ್ಡಾಯವಾಗಿ ಆಚರಣೆ ಮಾಡಬೇಕು. ಹಿಂದೆ ನಮ್ಮೂರಿನಲ್ಲಿ ಸುಮಾರು 500ಮಂದಿ ಈ ಆಚರಣೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಆದರೆ ಇದೀಗ 50 ಮಂದಿ ಕಾಣಸಿಗುತ್ತಾರೆ. ಹಾಡು ಹೇಳಿ ಮನೆಯವರು ಕೊಟ್ಟ ಹಣವನ್ನು ಸ್ವೀಕರಿಸಿ ಒಳ್ಳೆದಾಗಲಿ ಎಂದು ಹರಸಿ ಕುಲದೇವರಿಗೆ ಕಾಣಿಕೆ ಸಲ್ಲಿಸುತ್ತೇವೆ.
– ಸಿದ್ದಪ್ಪ  ದಾವಣಗೆರೆ, 
ಕಿನ್ನರಿ ಜೋಗಿ

– ರಾಜೇಶ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.