ಕೊಲ್ಲೂರು: ನವರಾತ್ರಿ ಉತ್ಸವ ಸಂಪನ್ನ
Team Udayavani, Oct 20, 2018, 12:40 PM IST
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ನವರಾತ್ರಿ ಉತ್ಸವ ಪ್ರಯುಕ್ತ ಅ.18ರಂದು ಚಂಡಿಕಾಯಾಗ ಹಾಗೂ ರಥೋತ್ಸವ ನಡೆಯಿತು. ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಮತ್ತು ಸ್ಥಳೀಯ ಸಹಸ್ರಾರು ಸಂಖ್ಯೆಯ ಭಕ್ತರು ಜಯಘೋಷದೊಂದಿಗೆ ರಥೋತ್ಸವದಲ್ಲಿ ಪಾಲ್ಗೊಂಡರು.
ಶ್ರೀ ದೇವಿಯ ಸಮ್ಮುಖದಲ್ಲಿ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅರ್ಚಕರಾದ ರಾಮಚಂದ್ರ ಅಡಿಗ, ಕೆ.ಎನ್. ನರಸಿಂಹ ಅಡಿಗ, ಕೆ.ಎನ್. ಗೋವಿಂದ ಅಡಿಗ, ಕೆ.ವಿ. ಶ್ರೀಧರ ಅಡಿಗ ಭಾಗವಹಿಸಿದರು.
ರಥೋತ್ಸವಕ್ಕೆ ಕಾರ್ಯನಿರ್ವಹಣಾಧಿಕಾರಿ ಎಚ್. ಹಾಲಪ್ಪ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ಕುಮಾರ್ ಎಂ. ಶೆಟ್ಟಿ ಚಾಲನೆ ನೀಡಿದರು.
ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಮಾಜಿ ಶಾಸಕ ಗೋಪಾಲ ಪೂಜಾರಿ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ರಮೇಶ ಗಾಣಿಗ ಕೊಲ್ಲೂರು, ವಂಡಬಳ್ಳಿ ಜಯರಾಮ ಶೆಟ್ಟಿ, ನರಸಿಂಹ ಹಳಗೇರಿ, ರಾಜೇಶ ಕಾರಂತ, ಅಭಿಲಾಶ್ ಬಿ.ವಿ.,ಜಯಂತಿ ಪಡೆಕೋಣೆ ಉಪಸ್ಥಿತರಿದ್ದರು.
ಪುಟಾಣಿಗಳ ವಿದ್ಯಾರಂಭ
ಅ.19ರ ವಿಜಯದಶಮಿಯಂದು ಸರಸ್ವತಿ ಮಂಟಪ ಹಾಗೂ ಚಂಡಿಕಾಯಾಗದ ಹೊರ ಪೌಳಿಯಲ್ಲಿ ಅಕ್ಷರಾಭ್ಯಾಸಕ್ಕೆ ಸಹಸ್ರಾರು ಮಕ್ಕಳು ಪೋಷಕರೊಡನೆ ಆಗಮಿಸಿದ್ದರು. ಮಕ್ಕಳ ನಾಲಗೆಯ ಮೇಲೆ ಚಿನ್ನದ ನಾಣ್ಯದಲ್ಲಿ ಓಂಕಾರ ಬರವಣಿಗೆಯಲ್ಲದೆ ಅಕ್ಕಿಯಲ್ಲಿ ಕೂಡ ವಿದ್ಯಾರಂಭ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ