ಬಸ್ರೂರು: ನಿರ್ಲಕ್ಷ್ಯಕ್ಕೊಳಗಾದ ಐತಿಹಾಸಿಕ ಶಿಲಾಶಾಸನಗಳು


Team Udayavani, Nov 14, 2018, 2:20 AM IST

shila-shashana-13-11.jpg

ಬಸ್ರೂರು: ಕರಾವಳಿ ಕರ್ನಾಟಕದ ಪ್ರಸಿದ್ಧ ಐತಿಹಾಸಿಕ ಕೇಂದ್ರಗಳಲ್ಲಿ ಒಂದಾಗಿರುವ ಬಸ್ರೂರಿನ ಇತಿಹಾಸ ಸಾರುವ ಸುಮಾರು 53 ಶಿಲಾ ಶಾಸನಗಳ ಪೈಕಿ ಈಗ ಕೇವಲ 13 ಶಾಸನಗಳು ಮಾತ್ರ ಸುರಕ್ಷಿತವಾಗಿದ್ದು, ಸುಮಾರು 40 ಶಾಸನಗಳು ತೀವ್ರ ನಿರ್ಲಕ್ಷ್ಯಕ್ಕೊಳಗಾಗಿವೆ.

12ನೇ ಶತಮಾನದ ಶಾಸನಗಳು
ಸುಮಾರು 12ನೇ ಶತಮಾನಗಳಷ್ಟು ಹಿಂದಿನ ಶಾಸನಗಳು ಇಲ್ಲಿ ಕಾಣ ಸಿಗುತ್ತವೆ. ಅನೇಕ ಇತಿಹಾಸ ಸಂಶೋಧಕರು ಬಸ್ರೂರಿನ ಶಿಲಾಶಾಸನಗಳ ಬಗ್ಗೆ ಸಂಶೋಧನೆ ನಡೆಸಿದ್ದಾರೆ. ಸುಮಾರು 53 ಕ್ಕೂ ಹೆಚ್ಚು ಶಿಲಾ ಶಾಸನಗಳು ಇಲ್ಲಿ ದೊರೆತಿವೆ. ಇವುಗಳಲ್ಲಿ 13 ಶಿಲಾ ಶಾಸನಗಳನ್ನು ಬಸ್ರೂರಿನ ಶ್ರೀ ಶಾರದಾ ಕಾಲೇಜಿನಲ್ಲಿ ಎನ್ನೆನ್ನೆಸ್‌ ಘಟಕದ ವಿದ್ಯಾರ್ಥಿಗಳ ಸಹಕಾರದಿಂದ ಸಂರಕ್ಷಿಸಿಡಲಾಗಿದೆ. ಅದು ಬಿಟ್ಟರೆ ಹೊರಗಿರುವ ಸುಮಾರು 40 ಕ್ಕೂ ಹೆಚ್ಚು ಶಿಲಾ ಶಾಸನಗಳನ್ನು ಸೂಕ್ತವಾಗಿ ಸಂರಕ್ಷಿಸಲಾಗಿಲ್ಲ.

ಆಳುಪರ ಪ್ರಥಮ ಶಾಸನ ಇಲ್ಲಿದೆ
12ನೇ ಶತಮಾನದಲ್ಲಿ ಆಳುಪ ರಾಜರು ಆಳ್ವಿಕೆ ನಡೆಸಿದ ಪ್ರಥಮ ಶಾಸನ ಇಲ್ಲಿ ಪತ್ತೆಯಾಗಿದೆ. ಆ ಶಾಸನದಲ್ಲಿ ಬಸ್ರೂರನ್ನು ‘ಹೊಸ ಪಟ್ಟಣ’ ವೆಂದು ಹೇಳಲಾಗಿದೆ. ಮೂಡುಕೇರಿಯ ಶ್ರೀ ಆದಿನಾಥೇಶ್ವರ ದೇವಸ್ಥಾನದಲ್ಲೂ ಕೆಲವೊಂದು ಶಿಲಾ ಶಾಸನಗಳು ದೊರೆತಿವೆ. 12ನೇ ಶತಮಾನಕ್ಕಿಂತಲೂ ಹಿಂದಿನಿಂದ ಬಸ್ರೂರು ಮತ್ತು ಬಾರ್ಕೂರು ರಾಜಧಾನಿಗಳಾಗಿ ಮೆರೆದ ಗತವೈಭವ ಈ ಶಿಲಾ ಶಾಸನಗಳಿಂದ ತಿಳಿದು ಬರುತ್ತದೆ.

ಆಳುಪ ವಂಶದ ಅರಸರು ಕ್ರಿ.ಶ. 1176ರಲ್ಲಿ ಬಸ್ರೂರನ್ನು ಆಳ್ವಿಕೆ ಮಾಡಿದ್ದರೆಂಬುದಕ್ಕೆ ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಂದು ಶಿಲಾ ಶಾಸನಗಳು ಹೇಳುತ್ತದೆ. ಅಂದಿನ ಬಸ್ರೂರು ಸರ್ವತೋಮುಖ ಪ್ರಗತಿ ಕಂಡಿದ್ದು, ವಿಜಯನಗರದ ಅರಸರ ಕಾಲದಲ್ಲಿ ಎನ್ನುವ ವಿಷಯ ಇಲ್ಲಿ ದೊರೆತ ಶಾಸನಗಳಿಂದ ತಿಳಿದು ಬರುತ್ತದೆ. ಕ್ರಿ.ಶ. 1400, 1401, 1431, 1442, 1444, 1450, 1451, 1455, 1465, 1472, 1482, 1506, 1510, 1525, 1528, 1533 ಹಾಗೂ 1554ರ ಶಾಸನಗಳು ಇಲ್ಲಿ ಪ್ರಮುಖವಾಗಿ ಕಂಡು ಬಂದಿದ್ದು ವಿಜಯನಗರ, ಹೊಯ್ಸಳ, ಆಳುಪ ಮುಂತಾದ ರಾಜರು ಇಲ್ಲಿ ಆಡಳಿತ ನಡೆಸಿದ್ದ ಸಂಗತಿ ಇವುಗಳಿಂದ ತಿಳಿಯುತ್ತದೆ. ಅಮೂಲ್ಯ ಶಿಲಾ ಶಾಸನಗಳನ್ನೆಲ್ಲ ಒಂದೆಡೆ ಸಂರಕ್ಷಿಸಿಡುವ ಕೆಲಸವೂ ಆಗಿಲ್ಲ. ಅವುಗಳು ಬೇಕಾಬಿಟ್ಟಿಯಾಗಿವೆ.  

ಶಿಲಾ ಶಾಸನಗಳ ಸಂರಕ್ಷಣೆ ಅಗತ್ಯ 
ಶಿಲಾ ಶಾಸನಗಳು ಪ್ರಾಚೀನ ಕಾಲದ ಆಳ್ವಿಕೆ, ಜನಜೀವನ ತಿಳಿಸಿಕೊಡುವ ಮಹತ್ವದ ಅಂಶಗಳಾಗಿದ್ದು ಇತಿಹಾಸ ಅಧ್ಯಯನಕ್ಕೆ ಪ್ರಮುಖ ವಸ್ತುಗಳು. ಅವುಗಳನ್ನು ಸಂರಕ್ಷಿಸಿದರೆ ಯುವ ಸಮೂಹಕ್ಕೆ ಇತಿಹಾಸವನ್ನು ತಿಳಿಸಿಕೊಡಬಹುದು.

ಇತಿಹಾಸ ಹೇಳುವ ಕುರುಹು
ಬಸ್ರೂರಿನ ಇತಿಹಾಸ ಸಾರುವ ಸುಮಾರು 40ಕ್ಕೂ ಹೆಚ್ಚು ಶಾಸನಗಳನ್ನು ಸೂಕ್ತವಾಗಿ ಸಂರಕ್ಷಿಸಿಡಲಾಗಿಲ್ಲ. ಇವುಗಳನ್ನು ಪ್ರಾಚ್ಯ ಸಂಶೋಧನಾ ಇಲಾಖೆ ಅಥವಾ ಸ್ಥಳೀಯಾಡಳಿತ ಮಾಡಬೇಕಾಗಿದೆ. ಇವುಗಳನ್ನು ಸಂರಕ್ಷಿಸದೇ ಹೋದಲ್ಲಿ ಮುಂದಿನ ತಲೆಮಾರಿಗೆ ಬಸ್ರೂರಿನ ಇತಿಹಾಸ ಹೇಳುವ ಯಾವ ಕುರುಹುಗಳೂ ಉಳಿದಿರುವುದಿಲ್ಲ.
-ಡಾ| ಕನರಾಡಿ ವಾದಿರಾಜ ಭಟ್‌, ನಿವೃತ್ತ ಉಪನ್ಯಾಸಕ, ಬಸ್ರೂರು

— ದಯಾನಂದ ಬಳ್ಕೂರು

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.