ಪ್ರವಾಸಿಗರನ್ನುಸೆಳೆವ ಕೋಡಿಬೀಚ್ನಲ್ಲಿಮೂಲಸೌಕರ್ಯಅಭಿವೃದ್ಧಿಗೆ ಬೇಡಿಕೆ
Team Udayavani, Nov 15, 2018, 3:52 PM IST
ಕುಂದಾಪುರ: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿರುವ ಕೋಡಿ ಬೀಚ್ನಲ್ಲಿ ಬ್ರೇಕ್ವಾಟರ್ ಕಾಮಗಾರಿಯನ್ನು ಸೀ ವಾಕ್ ಮಾಡಲು ಯೋಜನೆ ರೂಪಿಸಿದಂತೆಯೇ ಇನ್ನೊಂದಷ್ಟು ಕಾಮಗಾರಿಯ ಮೂಲಕ ಪ್ರವಾಸಿಗರಿಗೆ ಹತ್ತಿರವಾಗುವಂತೆ ಮಾಡಬೇಕಿದೆ.
ವಿಸ್ತಾರದ ಬೀಚ್ಗೆ ಹೆಚ್ಚಿದ ಜನ
ಅಭಿವೃದ್ಧಿ ಕಾರ್ಯಕ್ರಮಗಳು ನಡೆದಿದ್ದೇ ಆದಲ್ಲಿ ಅತಿ ಉದ್ದ ವ್ಯಾಪ್ತಿ ಹೊಂದಿದ ಬೀಚ್ ಎಂಬ ಹೆಗ್ಗಳಿಕೆಗೆ ಕೋಡಿ ಬೀಚ್ ಪಾತ್ರವಾಗಲಿದೆ. ಏಕೆಂದರೆ ಸರಿಸುಮಾರು 3.5 ಕಿಮೀ. ದೂರದಲ್ಲಿ ಬೀಚ್ ವ್ಯಾಪಿಸಿಕೊಂಡಿದೆ. ಆದ್ದರಿಂದ ಯಾವುದೇ ಪ್ರದೇಶದಲ್ಲೂ ಸಮುದ್ರವಿಹಾರ ನಡೆಸಬಹುದಾಗಿದೆ. ಇದರೊಂದಿಗೆ ಇಲ್ಲಿ ಬ್ರೇಕ್ ವಾಟರ್ ಕಾಮಗಾರಿ ನಡೆದಂತೆಯೇ ಇಲ್ಲಿಗೆ ಸಂಜೆ ವೇಳೆಗೆ ಸೂರ್ಯಾಸ್ತ ವೀಕ್ಷಣೆಗೆ ಜನ ಬರಲಾರಂಭಿಸಿದ್ದಾರೆ. ವಾರಾಂತ್ಯವೂ ಇಲ್ಲಿ ಜನಸಂದಣಿ ಹೆಚ್ಚಿದೆ. ಸಂಸಾರ ಸಹಿತರಾಗಿ, ಮಕ್ಕಳು ಸ್ನೇಹಿತರ ಜತೆಗೆ ಬರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಪ್ರವಾಸೋದ್ಯಮಕ್ಕೆ ಉತ್ತೇಜನ
ಇಲ್ಲಿಗೆ ಪ್ರವಾಸಿಗರ ಸಂಖ್ಯೆ ಏರುತ್ತಿರುವಂತೆಯೇ ಹೋಟೆಲ್, ಅಂಗಡಿ, ಮಳಿಗೆ ಮೊದಲಾದವುಗಳು ಸ್ಥಾಪನೆಯಗಾಲು ಅವಕಾಶ ಇದೆ. ಜತೆಗೆ ರಿಕ್ಷಾ ಹಾಗೂ ಇತರ ಪ್ರವಾಸಿ ವಾಹನಗಳಿಗೂ ಬಾಡಿಗೆ ದೊರೆಯಲಿದೆ.
ಪುರಸಭೆಯಿಂದ ಕ್ರಮ
ಪ್ರವಾಸೋದ್ಯಮ ಇಲಾಖೆ ಜತೆಗೆ ಪುರಸಭೆ ಮುತುವರ್ಜಿ ವಹಿಸಿದ್ದು ಇಲ್ಲೊಂದು ಪ್ರವಾಸೋದ್ಯಮ ತಾಣದ ಸೃಷ್ಟಿಗೆ ಪ್ರಯತ್ನಿಸುತ್ತಿದೆ. ಬ್ರೇಕ್ವಾಟರ್ ಕಾಮಗಾರಿಯನ್ನೇ ಸೀವಾಕ್ ಮಾದರಿಯಾಗಿ ಮಾಡಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದ್ದರೆ ಇಲಾಖೆಯಿಂದ ಇನ್ನಷ್ಟು ಸೌಕರ್ಯ, ಅನುದಾನ ಇಲ್ಲಿಗೆ ತಂದರೆ ಪುರಸಭೆ ವ್ಯಾಪ್ತಿಯ ಆದಾಯ ವೃದ್ಧಿ ಮಾಡಿಕೊಳ್ಳಲು ನೆರವಾಗಲಿದೆ ಎಂದು ಪುರಸಭೆ ಚಿಂತನೆ ನಡೆಸಿದೆ.
ಸೌಕರ್ಯ ಬೇಕಿದೆ
ಪ್ರವಾಸಿಗರಿಗೆ ಮೂಲ ಸೌಕರ್ಯಗಳನ್ನು ತುರ್ತಾಗಿ ಕಲ್ಪಿಸಬೇಕಾದ ಅಗತ್ಯವಿದೆ. ವಿಶ್ರಾಂತಿಗೆ ಕುಳಿತುಕೊಳ್ಳುವ ಬೆಂಚ್ಗಳ ವ್ಯವಸ್ಥೆ, ಬಟ್ಟೆ ಬದಲಾಯಿಸಲು, ಸಮುದ್ರ ಸ್ನಾನದ ಬಳಿಕ ಸ್ನಾನದ ವ್ಯವಸ್ಥೆ ಮಾಡಲು, ವಾಹನ ನಿಲುಗಡೆಗೆ, ಬೆಳಕಿಗೆ ದೀಪ ಅಳವಡಿಕೆ, ಕುಡಿಯುವ ನೀರು, ಶೌಚಾಲಯ ಸಹಿತ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಬೇಕಿದೆ.
ಕಸದ ರಾಶಿ
ಮಳೆಗಾಲದಲ್ಲಿ ಸಮುದ್ರದ ಮೂಲಕ ಬಂದ ಕಸದ ರಾಶಿ ಕಡಲತಡಿಯಲ್ಲಿ ರಾಶಿ ರಾಶಿ ಸಂಗ್ರಹವಾಗಿದೆ. ಇದನ್ನು ತೆಗೆಸಿದರೆ ಅತ್ಯಂತ ಸುಂದರ ಬೀಚ್ ಆಗಿ ಇದು ಪರಿವರ್ತನೆಯಾಗಲಿದೆ. ಇಲ್ಲಿ ರಾಶಿ ಹಾಕಿರುವ ಲೋಡುಗಟ್ಟಲೆ ಮರಳನ್ನು ಖಾಲಿ ಮಾಡುವ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು ಅದು ತ್ವರಿತವಾಗಿ ಆಗಬೇಕಿದೆ.
ಮಾತುಕತೆ ನಡೆದಿದೆ
ಬೀಚ್ ಸ್ವತ್ಛಗೊಳಿಸಲು ಮಲ್ಪೆಯಿಂದ ಯಂತ್ರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದ್ದು ಸಕಾರಾತ್ಮಕ ಸ್ಪಂದನೆ ದೊರೆತಿದೆ. ಬ್ರೇಕ್ ವಾಟರ್ ಕಾಮಗಾರಿಗೆ ಅಲ್ಲಲ್ಲಿ ಪ್ರವೇಶಾವಕಾಶ ನೀಡಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ ಪ್ರವಾಸಿಗರ ಆಕರ್ಷಣೆಗೆ ಪ್ರತ್ಯೇಕ ಕಾರ್ಯಕ್ರಮ ಹಮ್ಮಿಕೊಳ್ಳುವ ಇರಾದೆ ಇದೆ.
– ಗೋಪಾಲಕೃಷ್ಣ ಶೆಟ್ಟಿ
ಮುಖ್ಯಾಧಿಕಾರಿ, ಪುರಸಭೆ
ಲಕ್ಷ್ಮೀ ಮಚ್ಚಿನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ