ಕುಂದಾಪುರ: ರಿಕ್ಷಾ ನಿಲ್ದಾಣಕ್ಕೆ ಮತ್ತೆ ಮಣ್ಣು !


Team Udayavani, Nov 17, 2018, 3:55 AM IST

auto-stand-16-11.jpg

ಕುಂದಾಪುರ: ವಿನಾಯಕ ಥಿಯೇಟರ್‌ ಬಳಿ ರಿಕ್ಷಾ ನಿಲ್ದಾಣ ಇಲ್ಲದೇ ರಿಕ್ಷಾಗಳು ರಸ್ತೆಯಲ್ಲಿ ನಿಲ್ಲಿಸಿರುವಂತೆಯೇ ಗುರುವಾರ ತಡರಾತ್ರಿ ರಿಕ್ಷಾಗಳನ್ನು ನಿಲ್ಲಿಸುವ ಜಾಗಕ್ಕೆ ಮಣ್ಣು ತಂದು ಸುರಿಯಲಾಗಿದೆ. ಕೋಡಿ ಪ್ರದೇಶಕ್ಕೆ ತೆರಳುವ ರಿಕ್ಷಾಗಳು ನಿಲ್ಲಿಸಲು ವ್ಯವಸ್ಥಿತ ತಂಗುದಾಣ ಇಲ್ಲ. ಸರ್ವಿಸ್‌ ರಸ್ತೆ ಬದಿ ರಿಕ್ಷಾಗಳು ನಿಲ್ಲುತ್ತಿದ್ದವು. ಆದರೆ ಈಗ ಸರ್ವಿಸ್‌ ರಸ್ತೆಯೇ ಮುಖ್ಯರಸ್ತೆಯಾಗಿದ್ದು ಮುಖ್ಯ ರಸ್ತೆಯಲ್ಲಿ ಬಸ್ರೂರು ಮೂರುಕೈ ಅಂಡರ್‌ಪಾಸ್‌ ಕಾಮಗಾರಿ ನಡೆಯುವ ಕಾರಣ ನಿರ್ಬಂಧ ಒಡ್ಡಲಾಗಿದೆ. ಆದ್ದರಿಂದ ರಿಕ್ಷಾಗಳನ್ನು ಸಂಚಾರವಿಲ್ಲದ ಮುಖ್ಯ ರಸ್ತೆಯಲ್ಲಿ ನಿಲ್ಲಿಸಲಾಗುತ್ತಿದೆ.

ಆದರೆ ಗುತ್ತಿಗೆದಾರ ಕಂಪನಿಯು ರಿಕ್ಷಾಗಳು ನಿಲ್ಲಿಸುವಲ್ಲಿ ಲೋಡುಗಟ್ಟಲೆ ಮಣ್ಣು ತಂದು ಸುರಿಯುತ್ತಿದೆ. ಇದನ್ನು ರಿಕ್ಷಾ ಚಾಲಕರು ಆಕ್ಷೇಪಿಸಿದ್ದರು. ಜಿ.ಪಂ. ಸದಸ್ಯೆ ಲಕ್ಷ್ಮೀ ಮಂಜು ಬಿಲ್ಲವ ಮೊದಲಾದವರು ಸಮಸ್ಯೆ ಬಗೆ ಹರಿಸುವ ಭರವಸೆ ನೀಡಿದ್ದರು. ಪುರಸಭೆ ವತಿಯಿಂದ ಕೂಡಾ ರಿಕ್ಷಾಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಮಾಡಿಲ್ಲ. ಪುರಸಭೆಯ ಜಾಗ ಇಲ್ಲ ಎನ್ನುವ ಸಬೂಬು ಒಂದೆಡೆ ಇದ್ದರೆ ಇದ್ದ ಜಾಗದ ಒತ್ತುವರಿಯಾಗಿದೆ ಎಂಬ ಆರೋಪವೂ ಇದೆ. ಇದೆಲ್ಲ ಸಮಸ್ಯೆಗಳ ನಡುವೆಯೇ ಗುತ್ತಿಗೆದಾರ ಸಂಸ್ಥೆ ರಿಕ್ಷಾ ಚಾಲಕರ ತಾಳ್ಮೆ ಪರೀಕ್ಷಿಸುತ್ತಿದ್ದು ಗುರುವಾರ ತಡರಾತ್ರಿ ಟಿಪ್ಪರ್‌ನಲ್ಲಿ ಲೋಡುಗಟ್ಟಲೆ ಮಣ್ಣನ್ನು ರಿಕ್ಷಾ ನಿಲ್ಲುವಲ್ಲಿ ತಂದು ಹಾಕಲಾಗಿದೆ. ರಾತೋರಾತ್ರಿ ಚಾಲಕರಿಗೆ ವಿಷಯ ತಿಳಿದು ಪ್ರತಿಭಟಿಸಿದ್ದಾರೆ. ತತ್‌ಕ್ಷಣ ತೆರವು ಮಾಡದೇ ಇದ್ದಲ್ಲಿ ಶನಿವಾರ ಸರ್ವಿಸ್‌ ರಸ್ತೆಗೆ ರಿಕ್ಷಾ ಅಡ್ಡ ಇಟ್ಟು ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಮುಖ್ಯ ರಸ್ತೆಯ ಬದಲು ಸರ್ವಿಸ್‌ ರಸ್ತೆಯಲ್ಲೇ ವಾಹನಗಳ ಓಡಾಟ ಇರುವ ಕಾರಣ ಸರ್ವಿಸ್‌ ರಸ್ತೆ ಬಂದ್‌ ಮಾಡಿದರೆ ಸಂಚಾರ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಇಲ್ಲಿ ರಿಕ್ಷಾ ತಂಗುದಾಣಕ್ಕೆ ಸೂಕ್ತ ಜಾಗ ಒದಗಿಸಿಲ್ಲ ಎಂದು ಉದಯವಾಣಿ ವರದಿ ಮಾಡಿತ್ತು.

ಟಾಪ್ ನ್ಯೂಸ್

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.