ಸಳ್ವಾಡಿ ಕಕ್ಕೇರಿ: ಮತ್ತೂಂದು ಚಿರತೆ ಸೆರೆ
Team Udayavani, Nov 17, 2018, 3:05 AM IST
ಕೋಟೇಶ್ವರ: ಸಳ್ವಾಡಿಯ ಕಕ್ಕೇರಿ ಬಳಿ ಕಾಡಿನಲ್ಲಿ ಇರಿಸಲಾಗಿದ್ದ ಅರಣ್ಯ ಇಲಾಖೆಯ ಬೋನಿಗೆ ನ. 16ರ ಬೆಳಗಿನ ಜಾವ ಚಿರತೆ ಬಿದ್ದು ಸೆರೆಯಾಗಿದೆ. ಕಳೆದ 4 ದಿವಸಗಳ ಹಿಂದೆ ಅಲ್ಲಿನ ನಿವಾಸಿ ಚಂದ್ರಶೇಖರ ಶೆಟ್ಟಿ ಅವರ ಮನೆ ಸನಿಹದ ಹಾಡಿಯಲ್ಲಿ ಇರಿಸಲಾಗಿದ್ದ ಬೋನಿನಲ್ಲಿ ಹೆಣ್ಣು ಚಿರತೆ ಸೆರೆಯಾಗಿತ್ತು. ಅದರ ಬೆನ್ನಲ್ಲೇ ಭಾರೀ ಗಾತ್ರದ ಗಂಡು ಚಿರತೆ ಅದೇ ಬೋನಿಗೆ ಬಿದ್ದಿರುವುದು ಗ್ರಾಮಸ್ಥರಲ್ಲಿ ಭಯದ ವಾತಾವರಣ ಉಂಟುಮಾಡಿದೆ. ಈ ಭಾಗದಲ್ಲಿ ಕಳೆದ ಹಲವಾರು ದಿವಸಗಳಿಂದ ಚಿರತೆಗಳ ಸಂಚಾರದ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.
ಗ್ರಾಮಸ್ಥರ ಬೇಡಿಕೆಯಂತೆ ಕಾಡಿನ ಮಧ್ಯದಲ್ಲಿ ಚಿರತೆ ಸೆರೆಹಿಡಿಯಲು ಬೋನಿನ ವ್ಯವಸ್ಥೆ ಮಾಡಲಾಗಿತ್ತು. ಚಿರತೆಯು ಬೋನಿನಲ್ಲಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಚಿರತೆ ಸೆರೆ ಹಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ